ಸಾಂದರ್ಭಿಕ ಚಿತ್ರ 
ರಾಜ್ಯ

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕ್ರಿಮಿನಲ್ ಕೇಸ್: ಹೈಕೋರ್ಟ್ ಮಹತ್ವದ ಆದೇಶ

ಸಾರ್ವಜನಿಉಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ರಾಜ್ಯ ಸರ್ಕಾರ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗಳಿಗೆ ಹೈಕೋರ್ಟ್ ಆದೇಶಿಸಿದೆ.

ಬೆಂಗಳೂರು: ಸಾರ್ವಜನಿಉಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ರಾಜ್ಯ ಸರ್ಕಾರ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ೦ಗಳಿಗೆ ಹೈಕೋರ್ಟ್ ಆದೇಶಿಸಿದೆ.
ಸೋಮವಾರ ಕಸದ ಸಮಸ್ಯೆ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ನ್ಯಾಯಮೂರ್ತಿ ಎನ್. ಸುಜಾತಾ ಅವರನ್ನೊಳಗೊಂಡ ಪೀಠ ಈ ಆದೇಶ ನೀಡಿಎ.
"ಬೆಂಗಳೂರನ್ನು  ಸ್ವಚ್ಛಗೊಳಿಸಲು ಬಿಬಿಎಂಪಿ ಸಾಕಷ್ಟು ಪ್ರಯತ್ನ ನಡೆಸುತ್ತಿದೆ.ಕಸದ ವಿಲೇವಾರಿಉ ಭರದಿಂದ ಸಾಗಿದೆ. ಹಾಗೆ ಸ್ವಚ್ಚ ಮಾಡಿದ ಜಾಗದಲ್ಲಿ ಪೌರ ಕಾರ್ಮಿಕರು ರಂಗೋಲಿ ಹಾಕುತ್ತಿದ್ದಾರೆ. ಆದರೆ ಕೆಲವರು ರಂಗೋಲಿಯ ಮೇಲೆಯೂ ಕಸ ಎಸೆಯುತ್ತಿದ್ದಾರೆ" ಎಂದು ಬಿಬಿಎಂಪಿ ವಕೀಲ ಡಿ.ಎನ್. ನಂಜುಂಡ ರೆಡ್ಡಿ ಹೇಳಿದಾಗ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಪೀಠ ಎಲ್ಲಾದರಲ್ಲಿ ಕಸ ಚೆಲ್ಲುವವರ ವಿರುದ್ಧ ಪೌರಾಡಳಿತ ಕಾಯ್ದೆಯ ಅನುಸಾರ ಕ್ರಮ ತೆಗೆದುಕೊಳ್ಳಿ. ಈ ಕುರಿತು ಬಿಬಿಎಂಪಿ ಸಭೆಗಳಲ್ಲಿ ಚರ್ಚಿಸಿ. 
"ಸಾರ್ವಜನಿಕ ಸ್ಥಳದಲ್ಲಿ ಕಸ ಚೆಲ್ಲುವವರ ವಿರುದ್ಧ ತೆಗೆದುಕೊಂಡ ಕ್ರಮದ ಕುರಿತು ಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಬೇಕು. ಅಂಕಿ ಅಂಶಗಳನ್ನು ನೀಡಬೇಕು." ನ್ಯಾಯಾಲಯ ಹೇಳಿದೆ.
ಅರ್ಜಿಯ ಮುಂದಿನ ವಿಚಾರಣೆ ಡಿಸೆಂಬರ್ 15ಕ್ಕೆ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!