ಪುಸ್ತಕ ದಾನ ಅಭಿಯಾನ 
ರಾಜ್ಯ

ಬೆಂಗಳೂರು: ನಗರದ ಪ್ರಮುಖ ಮಾಲ್ ಗಳಲ್ಲಿ ಪುಸ್ತಕ ದಾನ ಅಭಿಯಾನ!

ಪುಸ್ತಕ ದಾನಿಗಳೊಂದು ಸಿಹಿ ಸುದ್ದಿ. ರಾಜ್ಯ ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಸಿಲಿಕಾನ್ ಸಿಟಿ ಬೆಂಗಳೂರಿನ ಮಾಲ್ ಗಳಲ್ಲಿ ಪುಸ್ತಕ ದಾನ ಅಭಿಯಾನವನ್ನು ಆಯೋಜಿಸಲಾಗಿದೆ.

ಬೆಂಗಳೂರು: ಪುಸ್ತಕ ದಾನಿಗಳೊಂದು ಸಿಹಿ ಸುದ್ದಿ. ರಾಜ್ಯ ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಸಿಲಿಕಾನ್ ಸಿಟಿ ಬೆಂಗಳೂರಿನ ಮಾಲ್ ಗಳಲ್ಲಿ ಪುಸ್ತಕ ದಾನ ಅಭಿಯಾನವನ್ನು ಆಯೋಜಿಸಲಾಗಿದೆ.

ಒಂದು ತಿಂಗಳ ಕಾಲ ನಗರದ ಪ್ರಮುಖ ಶಾಪಿಂಗ್ ಮಾಲ್ ಗಳಲ್ಲಿ ಈ ಅಭಿಯಾನ ನಡೆಯಲಿದ್ದು, ಗರುಡಾ ಮಾಲ್ ನಲ್ಲಿ ಅಂಚೆ ಪೆಟ್ಟಿಗೆ ರೀತಿಯಲ್ಲಿ ಪೆಟ್ಟಿಗೆಯೊಂದನ್ನು  ಇಡಲಾಗಿದೆ. ಇದರಲ್ಲಿ ಆಸಕ್ತರು ಪುಸ್ತಕ ದಾನ ಮಾಡಬಹುದಾಗಿದೆ.

ಓದುವ ಹವ್ಯಾಸವನ್ನು ಉತ್ತೇಜಿಸಲು ಹಾಗೂ ಸಾರ್ವಜನಿಕ ಗ್ರಂಥಾಲಯದ ಅಸ್ತಿತ್ವದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ  ಈ ಅಭಿಯಾನ ಆರಂಭಿಸಲಾಗಿದೆ ಎಂದು ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ರಾಜ್ಯ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಸತೀಶ್ ಕುಮಾರ್ ಎಸ್ ಹೊಸಮನಿ, ಯಾವುದೇ ಭಾಷೆಯಲ್ಲಿನ ಪುಸ್ತಕಗಳನ್ನು ಎಷ್ಟು ಬೇಕಾದರೂ ದಾನ ಮಾಡಬಹುದು ಎಂದರು.

 ನವೆಂಬರ್ 5 ರಿಂದ ಗರುಡಾ ಮಾಲ್ ನಲ್ಲಿ, ನ. 9 ರಿಂದ ಗೋಪಾಲನ್ ಅರ್ಕೇಡಾ ಮಾಲ್, ನ.13 ರಿಂದ ಮಂತ್ರಿ ಸ್ಕ್ವೇರ್ ಮಾಲ್,  ನ.15 ರಿಂದ ಪೋರ್ ಮಾಲ್ ನಲ್ಲಿ  ಅಭಿಯಾನ ಆರಂಭವಾಗಲಿದೆ.

ಇಲ್ಲಿಯೇ  ಸದಸ್ಯತ್ವ ನೋಂದಣಿ ಸಹ ಆರಂಭಿಸಲಾಗುತ್ತಿದ್ದು,  100 ರೂ. ಪಾವತಿಸಿ ಅರ್ಜಿ ಭರ್ತಿ ಮಾಡುವ ಮೂಲಕ ರಾಜ್ಯ  ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಸದಸ್ಯರಾಗಬಹುದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT