ಪುಸ್ತಕ ದಾನ ಅಭಿಯಾನ 
ರಾಜ್ಯ

ಬೆಂಗಳೂರು: ನಗರದ ಪ್ರಮುಖ ಮಾಲ್ ಗಳಲ್ಲಿ ಪುಸ್ತಕ ದಾನ ಅಭಿಯಾನ!

ಪುಸ್ತಕ ದಾನಿಗಳೊಂದು ಸಿಹಿ ಸುದ್ದಿ. ರಾಜ್ಯ ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಸಿಲಿಕಾನ್ ಸಿಟಿ ಬೆಂಗಳೂರಿನ ಮಾಲ್ ಗಳಲ್ಲಿ ಪುಸ್ತಕ ದಾನ ಅಭಿಯಾನವನ್ನು ಆಯೋಜಿಸಲಾಗಿದೆ.

ಬೆಂಗಳೂರು: ಪುಸ್ತಕ ದಾನಿಗಳೊಂದು ಸಿಹಿ ಸುದ್ದಿ. ರಾಜ್ಯ ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಸಿಲಿಕಾನ್ ಸಿಟಿ ಬೆಂಗಳೂರಿನ ಮಾಲ್ ಗಳಲ್ಲಿ ಪುಸ್ತಕ ದಾನ ಅಭಿಯಾನವನ್ನು ಆಯೋಜಿಸಲಾಗಿದೆ.

ಒಂದು ತಿಂಗಳ ಕಾಲ ನಗರದ ಪ್ರಮುಖ ಶಾಪಿಂಗ್ ಮಾಲ್ ಗಳಲ್ಲಿ ಈ ಅಭಿಯಾನ ನಡೆಯಲಿದ್ದು, ಗರುಡಾ ಮಾಲ್ ನಲ್ಲಿ ಅಂಚೆ ಪೆಟ್ಟಿಗೆ ರೀತಿಯಲ್ಲಿ ಪೆಟ್ಟಿಗೆಯೊಂದನ್ನು  ಇಡಲಾಗಿದೆ. ಇದರಲ್ಲಿ ಆಸಕ್ತರು ಪುಸ್ತಕ ದಾನ ಮಾಡಬಹುದಾಗಿದೆ.

ಓದುವ ಹವ್ಯಾಸವನ್ನು ಉತ್ತೇಜಿಸಲು ಹಾಗೂ ಸಾರ್ವಜನಿಕ ಗ್ರಂಥಾಲಯದ ಅಸ್ತಿತ್ವದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ  ಈ ಅಭಿಯಾನ ಆರಂಭಿಸಲಾಗಿದೆ ಎಂದು ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ರಾಜ್ಯ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಸತೀಶ್ ಕುಮಾರ್ ಎಸ್ ಹೊಸಮನಿ, ಯಾವುದೇ ಭಾಷೆಯಲ್ಲಿನ ಪುಸ್ತಕಗಳನ್ನು ಎಷ್ಟು ಬೇಕಾದರೂ ದಾನ ಮಾಡಬಹುದು ಎಂದರು.

 ನವೆಂಬರ್ 5 ರಿಂದ ಗರುಡಾ ಮಾಲ್ ನಲ್ಲಿ, ನ. 9 ರಿಂದ ಗೋಪಾಲನ್ ಅರ್ಕೇಡಾ ಮಾಲ್, ನ.13 ರಿಂದ ಮಂತ್ರಿ ಸ್ಕ್ವೇರ್ ಮಾಲ್,  ನ.15 ರಿಂದ ಪೋರ್ ಮಾಲ್ ನಲ್ಲಿ  ಅಭಿಯಾನ ಆರಂಭವಾಗಲಿದೆ.

ಇಲ್ಲಿಯೇ  ಸದಸ್ಯತ್ವ ನೋಂದಣಿ ಸಹ ಆರಂಭಿಸಲಾಗುತ್ತಿದ್ದು,  100 ರೂ. ಪಾವತಿಸಿ ಅರ್ಜಿ ಭರ್ತಿ ಮಾಡುವ ಮೂಲಕ ರಾಜ್ಯ  ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಸದಸ್ಯರಾಗಬಹುದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT