ಚಿಕ್ಕಮಗಳೂರು: ಬಸ್ ಪಲ್ಟಿ, ಶಾಲಾ ಪ್ರವಾಸಕ್ಕೆ ತೆರಳಿದ್ದ ವಿದ್ಯಾರ್ಥಿನಿ ಸಾವು 
ರಾಜ್ಯ

ಚಿಕ್ಕಮಗಳೂರು: ಬಸ್ ಪಲ್ಟಿ, ಶಾಲಾ ಪ್ರವಾಸಕ್ಕೆ ತೆರಳಿದ್ದ ವಿದ್ಯಾರ್ಥಿನಿ ಸಾವು

ಶಾಲಾ ಪ್ರವಾಸಕ್ಕಾಗಿ ತೆರಳಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಬಸ್ ಪಲ್ಟಿಯಾಗಿ ಹತ್ತನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು: ಶಾಲಾ ಪ್ರವಾಸಕ್ಕಾಗಿ ತೆರಳಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಬಸ್ ಪಲ್ಟಿಯಾಗಿ ಹತ್ತನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಸೌತಿಕೆರೆ ಸಮೀಪ ನಡೆದ ಅವಘಡದಲ್ಲಿ ದಿಯಾ ಎಂಬ ವಿದ್ಯಾರ್ಥಿನಿ ಸಾವಿಗೀಡಾಗಿದ್ದಾಳೆ. ಅಪಘಾತಕ್ಕೀಡಾದ ಬಸ್ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಪೂರ್ಣಪ್ರಜ್ಞಾ ಶಾಲೆಗೆ ಸೇರಿದ್ದಾಗಿ ಹೇಳಲಾಗಿದೆ.
ಭದ್ರಾವತಿಯ ಪೂರ್ಣಪ್ರಜ್ಞಾ ವಿದ್ಯಾರ್ಥಿಗಳು ಉಡುಪಿಗೆ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಎನ್.ಆರ್.ಪುರ ತಾಲೂಕಿನ ಸೌತಿಕೆರೆ ಸಮೀಪ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ,.ಅಪಘಾತದಲ್ಲಿ ದಿಯಾ ಸಾವನ್ನಪ್ಪಿದ್ದರೆ ಇನ್ನೂ ಐವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಳಿದ 39 ವಿದ್ಯಾರ್ಥಿಗಳಿಗೆ ಸಹ ಸಣ್ಣ ಪುಟ್ಟ ಗಾಯಗಳಾಗಿದ್ದು ಅವರನ್ನು ನ್‍ಆರ್ ಪುರ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಒದಗಿಸಲಾಗಿದೆ.
ಸ್ಥಳೀಯರ ನೆರವಿನಿಂದ ವಿದ್ಯಾರ್ಥಿಗಳನ್ನು ಬಸ್ ನಿಂದ ಹೊರತೆಗೆಯಲಾಗಿದೆ.ಘಟನೆ ಕುರಿತು ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೇತ್ರದಾನ

ದಿಯಾ ಸಾವು ತಂದ ನೋವಿನ ಹೊರತಾಗಿಯೂ ಆಕೆ ಪೋಷಕರ್ತು ಅವಳ ನೇತ್ರದಾನ ಮಾಡಿ ಸಾರ್ಥಕ ಕೆಲಸ ನಿರ್ವಹಿಸಿದ್ದಾರೆ.

ದಿಯಾ ಸಾವಿನ ಸುದ್ದಿ ಕೇಳಿದ ಆಕೆಯ ತಂದೆ ನಿವೃತ್ತ ಕರ್ನಲ್ ರಾಜೇಂದ್ರ ಸಿಂಗ್ ಶೇರಾವತ್ ಆಸ್ಪತ್ರೆಗೆ ಧಾವಿಸಿ ದಿಯಾಳ ಕಣ್ಣುಗಳನ್ನು ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆಗೆ ದಾನ ಮಾಡಿದ್ದಾರೆ.

ನೋವಿನ ನಡುವೆಯೂ ಮಾನವೀಯತೆಯ ಪ್ರದರ್ಶನ ಮಾಡಿದ ದಿಯಾ ಪಾಲಕರ ಕೆಲಸಕ್ಕೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT