ಸಾಂದರ್ಭಿಕ ಚಿತ್ರ 
ರಾಜ್ಯ

ಸುರಕ್ಷಿತ ವಾಹನ ಚಾಲನೆ; ಪಿಯುಸಿ ವಿದ್ಯಾರ್ಥಿಗಳಿಗೆ ಬೋಧನೆ

ಸುರಕ್ಷಿತ ವಾಹನ ಚಾಲನೆ ಮತ್ತು ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ರಾಜ್ಯದ ಪದವಿಪೂರ್ವ...

ಬೆಂಗಳೂರು: ಸುರಕ್ಷಿತ ವಾಹನ ಚಾಲನೆ ಮತ್ತು ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ರಾಜ್ಯದ ಪದವಿಪೂರ್ವ ಕಾಲೇಜುಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಸರ್ಕಾರ ಸದ್ಯದಲ್ಲಿಯೇ ತರಗತಿಗಳು ಆರಂಭಿಸಲಿದೆ.

ಬ್ರಿಟನ್ ಮೂಲದ ಬಹು ರಾಷ್ಟ್ರೀಯ ಕಂಪೆನಿ ಡಿಯಾಜಿಯೊ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿಯಡಿ ಈ ಉಪಕ್ರಮಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಕಂಪೆನಿ ಸಲ್ಲಿಸಿರುವ ಪ್ರಸ್ತಾವನೆಯನ್ನು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿ ನಿರತವಾಗಿದೆ.

ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಕಳೆದ ಸೆಪ್ಟೆಂಬರ್ ನಲ್ಲಿ ಡಿಯಾಜಿಯೊ ಕಂಪೆನಿ ಪ್ರಸ್ತಾವನೆ ಸಲ್ಲಿಸಿದೆ. ಪ್ರಸ್ತಾವನೆಯಲ್ಲಿ ಸಲ್ಲಿಸಿರುವಂತೆ, ದ್ವಿತೀಯ ಪಿಯುಸಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಸುರಕ್ಷಿತವಾಗಿ ವಾಹನ ಚಲಾಯಿಸುವ ಮತ್ತು ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ಬೋಧಿಸಲಾಗುತ್ತದೆ.

18 ವರ್ಷ ತುಂಬಿದ ಪ್ರತಿಯೊಬ್ಬ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಚಾಲನಾ ಪರವಾನಗಿ ಕಾರ್ಡು ಸಿಗಬೇಕೆಂದರೆ ಇದು ಕಡ್ಡಾಯವಾಗಿರುತ್ತದೆ, ಸುರಕ್ಷಿತವಾಗಿ ವಾಹನ ಚಾಲನೆ ಮಾಡುವುದು ವಿದ್ಯಾರ್ಥಿಗಳಿಗೆ ಆದ್ಯತೆ ವಿಷಯವಾಗಿರುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಆದರೆ ಇದು ಕೇವಲ ಕೆಲವು ಗಂಟೆಗಳ ತರಗತಿಯೇ ಅಥವಾ ಪ್ರಮಾಣಪತ್ರ ನೀಡಲು ನಿಗದಿತ ಅವಧಿಯವರೆಗೆ ನಡೆಸುವ ಕೋರ್ಸ್ ಆಗಿರಬೇಕೆ ಎಂಬ ಬಗ್ಗೆ ಇಲಾಖೆ ಇನ್ನೂ ನಿರ್ಧಾರ ಮಾಡಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!