ಅಲೋಕ್ ಕುಮಾರ್ 
ರಾಜ್ಯ

ನಂಬಲಾರ್ಹ ಪುರಾವೆ, ಸಾಕ್ಷಿಗಳ ಹೇಳಿಕೆಗಳಿಂದ ರೆಡ್ಡಿ ಬಂಧನ -ಅಲೋಕ್ ಕುಮಾರ್ ಸ್ಪಷ್ಟನೆ

ಆಂಬಿಡೆಂಟ್ ಪ್ರಕರಣದಲ್ಲಿ ನಂಬಲಾರ್ಹ ಪುರಾವೆ ಹಾಗೂ ಸಾಕ್ಷಿಗಳ ಹೇಳಿಕೆಗಳ ಆಧಾರದ ಮೇಲೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು:ಆಂಬಿಡೆಂಟ್ ಪ್ರಕರಣದಲ್ಲಿ ನಂಬಲಾರ್ಹ ಪುರಾವೆ ಹಾಗೂ ಸಾಕ್ಷಿಗಳ ಹೇಳಿಕೆಗಳ ಆಧಾರದ ಮೇಲೆ  ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ರೆಡ್ಡಿ ಬಂಧನ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಆಂಬಿಡೆಂಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಲಿ ಜನಾರ್ದನ ರೆಡ್ಡಿಗೆ ನೋಟಿಸ್ ನೀಡಲಾಗಿತ್ತು. ಹೀಗಾಗಿ ಅವರು ಶನಿವಾರ ಮಧ್ಯಾಹ್ನ ಸಿಸಿಬಿ ಕಚೇರಿಗೆ ತಮ್ಮ ವಕೀಲರೊಂದಿಗೆ ಆಗಮಿಸಿದ್ದರು. ಈ ವೇಳೆ ತನಿಖಾಧಿಕಾರಿಗಳು ತಡರಾತ್ರಿಯವರೆಗೂ ಸವಿಸ್ತಾರವಾಗಿ ವಿಚಾರಣೆ ನಡೆಸಿದರು ಎಂದು ತಿಳಿಸಿದರು.

ಆಂಬಿಡೆಂಟ್ ಪ್ರಕರಣದಲ್ಲಿ ರೆಡ್ಡಿ 20 ಕೋಟಿ ರೂಪಾಯಿಯನ್ನು ಲಪಟಾಯಿಸಲು ಒಳಸಂಚು ರೂಪಿಸಿದ್ದರ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಿದ್ದೇವೆಂದು ತಿಳಿಸಿದರು.

ಬಂಧನದಲ್ಲಿರುವ ರೆಡ್ಡಿಯವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸುತ್ತೇವೆ. ರೆಡ್ಡಿಯ ಜೊತೆ ಅವರ ಆಪ್ತ ಆಲಿಖಾನ್ ನನ್ನು ಸಹ ಬಂಧನ ಮಾಡಿದ್ದೇವೆ ಎಂದು ಹೇಳಿದರು.
ಸಂಪೂರ್ಣ ತನಿಖೆಯ ನಂತರ ಅವರಿಂದ ಹಣವನ್ನು ವಶಕ್ಕೆ ಪಡೆದುಕೊಳ್ಳುತ್ತೇವೆ. ಅಲ್ಲದೇ ಆಂಬಿಡೆಂಟ್ ಸಂಸ್ಥೆಯಲ್ಲಿ ಹೂಡಿಕೆ ಮಾಡಿದ್ದವರಿಗೆ ಅದನ್ನು ಮರಳಿಸುತ್ತೇವೆ ಎಂದು ಅಲೋಕ್ ಕುಮಾರ್  ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!