ಅನಂತ ಕುಮಾರ್ 
ರಾಜ್ಯ

ನಾಳೆ ಮಧ್ಯಾಹ್ನ 1 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅನಂತ್ ಕುಮಾರ್ ಅಂತ್ಯ ಸಂಸ್ಕಾರ

ಕೇಂದ್ರ ಸಚಿವ ಅನಂತಕುಮಾರ್ ಅವರ ಅಂತ್ಯಸಂಸ್ಕಾರ ನಾಳೆ ಬೆಂಗಳೂರಿನಲ್ಲಿ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶ- ವಿದೇಶಗಳ ...

ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ಅವರ ಅಂತ್ಯಸಂಸ್ಕಾರ ನಾಳೆ ಬೆಂಗಳೂರಿನಲ್ಲಿ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶ- ವಿದೇಶಗಳ ಗಣ್ಯರು ಅಂತಿಮ‌ ದರ್ಶನಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಬಿಜೆಪಿ ನಾಯಕ ಆರ್.ಅಶೋಕ ಹೇಳಿದ್ದಾರೆ.
ಅನಂತ್ ಕುಮಾರ್ ಅವರ ಕುಟುಂಬ ಸದಸ್ಯರೊಂದಿಗೆ ಹಾಗೂ ಯಡಿಯೂರಪ್ಪ ಅವರ ಜೊತೆ ಮಾತನಾಡಿ ಈ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದ್ದಾರೆ.ಪಾರ್ಥೀವ ಶರೀರವನ್ನು ಇಂದು ಇಡೀ ದಿನ ಅವರ ಮನೆಯಲ್ಲಿ ಇಡಲಾಗುವುದು, ನಾಳೆ ಬೆಳಗೆಗೆ 8 ಗಂಟೆಗೆ  ಪಾರ್ಥಿವ ಶರೀರವನ್ನು ಬಿಜೆಪಿ ಕಚೇರಿಗೆ ಕೊಂಡೊಯ್ದು 9ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ನಂತರ 10 ಗಂಟೆಗೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ದರ್ಶನದಲ್ಲಿ ಇಡಲಾಗುವುದು ಎಂದು ಹೇಳಿದ್ದಾರೆ. 
ನ್ಯಾಷನಲ್ ಕಾಲೇಜು ಮೈದಾನದ ಬಗ್ಗೆ ಅನಂತ್ ಕುಮಾರ್ ಅವರಿಗೆ ಬಹಳ ಅಭಿಮಾನವಿತ್ತು, ಅವರ ಎಲ್ಲಾ ಕಾರ್ಯಕ್ರಮಗಳನ್ನು ಅದೇ ಮೈದಾನದಿಂದ ಆರಂಭ ಮಾಡುತ್ತಿದ್ದರು, ಹೀಗಾಗಿಯೇ ಅಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ.
ನಾಳೆ ಮಧ್ಯಾಹ್ನ 1 ಗಂಟೆಗೆ ಚಾಮರಾಜಪೇಟೆಯ ಹಿಂದೂ ರುದ್ರ ಭೂಮಿಯಲ್ಲಿ  ಸಕಲ ಸರ್ಕಾರಿ ಗೌರವಗಳೊಂದಿಗೆ ಅನಂತ್ ಕುಮಾರ್ ಅವರ ಅಂತ್ಯ ಸಂಸ್ಕಾರ ನಡೆಸಲಾಗುವುದು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT