ರಾಜ್ಯ

ರಾಜ್ಯಪಾಲ ವಜೂಭಾಯಿ ವಾಲಾ, ಬಿ.ಎಸ್. ಯಡಿಯೂರಪ್ಪ ಮತ್ತಿತರರಿಂದ ಅನಂತ್ ಕುಮಾರ್ ಅಂತಿಮ ದರ್ಶನ

Nagaraja AB

ಬೆಂಗಳೂರು: ಕ್ಯಾನ್ಸರ್ ಹಾಗೂ ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿರುವ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತ್ ಕುಮಾರ್ ಅವರ ಪಾರ್ಥಿವ ಶರೀರವನ್ನು ನಗರದ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಿದ್ದು, ವಿವಿಧ ಪಕ್ಷಗಳ ಗಣ್ಯರು ಅಗಲಿದ ನಾಯಕನ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ರಾಜ್ಯಪಾಲ ವಾಜೂಭಾಯಿ ವಾಲಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ಮುಖಂಡರಾದ  ಆರ್. ಅಶೋಕ್ , ಸುರೇಶ್ ಕುಮಾರ್,  ವಿ. ಸೋಮಣ್ಣ, ಕುಮಾರ್ ಬಂಗಾರಪ್ಪ  ಸೇರಿದಂತೆ ಪಕ್ಷದ ಅನೇಕ ನಾಯಕರು ಅನಂತ್ ಕುಮಾರ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು..

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಅನಂತ್ ಕುಮಾರ್ ಅಂತಿಮ ದರ್ಶನ ಪಡೆದುಕೊಂಡರು.

SCROLL FOR NEXT