ಜನಾರ್ಧನ ರೆಡ್ಡಿ 
ರಾಜ್ಯ

ಆ್ಯಂಬಿಡೆಂಟ್ ವಂಚನೆ ಪ್ರಕರಣ: ರೆಡ್ಡಿ ಜಾಮೀನು ಅರ್ಜಿ ತೀರ್ಪು ನಾಳೆಗೆ ಕಾಯ್ದಿರಿಸಿದ ನ್ಯಾಯಾಲಯ, ಸಿಸಿಬಿಗೆ ತೀವ್ರ ತರಾಟೆ

ಆ್ಯಂಬಿಡೆಂಟ್ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಜಾಮೀನು ಅರ್ಜಿ ವಿಚಾರಣೆ ನಡೆಸಿರುವ 1ನೇ ಎಸಿಎಂಎಂ ನ್ಯಾಯಾಲಯ, ವಿಚಾರಣೆ ಮುಕ್ತಾಯಗೊಳಿಸಿದ್ದು, ನಾಳೆಗೆ ಜಾಮೀನು ಅರ್ಜಿ ಆದೇಶವನ್ನು ಕಾಯ್ದಿರಿಸಿದೆ...

ಬೆಂಗಳೂರು: ಆ್ಯಂಬಿಡೆಂಟ್ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಜಾಮೀನು ಅರ್ಜಿ ವಿಚಾರಣೆ ನಡೆಸಿರುವ 1ನೇ ಎಸಿಎಂಎಂ ನ್ಯಾಯಾಲಯ, ವಿಚಾರಣೆ ಮುಕ್ತಾಯಗೊಳಿಸಿದ್ದು, ನಾಳೆಗೆ ಜಾಮೀನು ಅರ್ಜಿ ಆದೇಶವನ್ನು ಕಾಯ್ದಿರಿಸಿದೆ. ಇದೇ ವೇಳೆ ಸಿಸಿಬಿ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು ಮಂಗಳವಾರ ತಿಳಿದುಬಂದಿದೆ. 
ರೆಡ್ಡಿ ಜಾಮೀನು ಅರ್ಜಿ ವಿಚಾರಣೆಯನ್ನು 1ನೇ ಎಸಿಎಂಎಂ ಕೋರ್ಟ್ ನ್ಯಾ.ಜಗದೀಶ್ ಅವರು ನಡೆಸಿದರು. ವಿಚಾರಣೆ ವೇಳೆ ವಾದ ಮಂಡಿಸಿದ ರೆಡ್ಡಿ ಪರ ವಕೀಲ ಸಿ.ಹೆಚ್.ಹನುಮಂತರಾಯ ಅವರು, ಜನಾರ್ಧನ ರೆಡ್ಡಿಗೂ ಚಿನ್ನಕ್ಕೂ ಸಂಬಂಧವಿಲ್ಲ. ರಿಮೈಂಡ್ ಅಪ್ಲಿಕೇಶನ್ ನಲ್ಲಿ ರೆಡ್ಡಿಯವರ ಹೆಸರು ಬಳಕೆ ಮಾಡಿಲ್ಲ. ವಿಚಾರಣೆಗೆ ಕರೆಯಿಸಿ ಬರೋಬ್ಬರಿ 12 ಗಂಟೆ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ಬಳಿಕವೂ ಅಲ್ಲಿಯೇ ಏಕೆ ಉಳಿಸಿಕೊಂಡರು? ಎಂದು ಪ್ರಶ್ನಿಸಿದ್ದಾರೆ. 
ಅಲಿಖಾನ್ ರಿಮೈಂಡ್ ಅಪ್ಲಿಕೇಶನ್ ನಲ್ಲಿ ಆತನ ಹೆಸರಿತ್ತು. ಆದರೆ, ರೆಡ್ಡಿಯವರ ಹೆಸರಿರಲಿಲ್ಲ. ರೆಡ್ಡಿಯವರನ್ನು ಸುಖಾಸುಮ್ಮನೆ ಕರೆಸಿಕೊಂಡಿದ್ದಾರೆ. 5ನೇ ಆರೋಪಿ ಅಲಿಖಾನ್ 4ನೇ ಆರೋಪಿ ರಮೇಶ್ ನಿಂದ ಚಿನ್ನ ಪಡೆದಿದ್ದಾನೆಂದು ಹೇಳಲಾಗುತ್ತಿದೆ. ಹೀಗಾಗಿ ಅಲಿಖಾನ್ ಚಿನ್ನ ಕೊಡಬೇಕೇ ವಿನಃ 6ನೇ ಆರೋಪಿ ರೆಡ್ಡಿಯಲ್ಲ. ರೆಡ್ಡಿಗೂ ಚಿನ್ನಕ್ಕೂ ಸಂಬಂಧವಿಲ್ಲ. ಆದರೆ, ಪ್ರಕರಣದ 1ನೇ ಆರೋಪಿ ಫರೀದ್'ಗೆ ಜಾಮೀನು ಸಿಕ್ಕಿದೆ. ಉಳಿದ ಆರೋಪಿಗಳಿಗೆ ಮಧ್ಯಂತರ ಜಾಮೀನು ನೀಡಲಾಗಿದೆ. ಆದರೆ, ದೂರಿಗೆ ಸಂಬಂಧವೇ ಇಲ್ಲದ 6ನೇ ಆರೋಪಿ ರೆಡ್ಡಿಯವರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಹೇಳಿದರು. 
ಇದಕ್ಕೆ ಪ್ರತಿಯಾಗಿ ವಾದ ಮಂಡಿಸಿದ ಸಿಸಿಬಿ ಪರ ವಕೀಲ ವೆಂಕಟಗಿರಿಯವರು, ಪ್ರಕರಣದಲ್ಲಿ ರೂ.600-700 ಕೋಟಿ ವಂಚನೆಯಾಗಿದೆ. ಪ್ರಕರಣದಲ್ಲಿ ರೆಡ್ಡಿ ರೂ.20 ಕೋಟಿ ಪಡೆದುಕೊಂಡಿದ್ದಾರೆ. ಅಕ್ರಮವಾಗಿ ಒಪ್ಪಂದ ಮಾಡಿಕೊಂಡಿದ್ದಾರೆ. ಜನವರಿಯಿಂದ ಈ ಕುರಿತು ತನಿಖೆ ನಡೆಸಲಾಗಿದೆ ಎಂದು ತಿಳಿಸಿದರು. 
ಈ ವೇಳೆ ಪ್ರತಿಕ್ರಿಯೆ ನೀಡಿದ ನ್ಯಾಯಾಧೀಶರು, ರೆಡ್ಡಿ ಮತ್ತು ಕಂಪನಿಗೆ ನೇರ ಸಂಬಂಧ ಇದೆಯೇ? ಹಣವನ್ನು ರೆಡ್ಡಿ ಯಾರಾದರೂ ಕೊಟ್ಟಿದ್ದಾರಾ? ನೇರವಾಗಿ ಯಾವುದಾದರೂ ನಂಟು ಇದೆಯೇ? ಸುಮ್ಮನೆ ಆರೋಪ ಮಾಡಬೇಕೆಂದು ಮಾಡಬೇಡಿ. ನೇರವಾದ ಸಂಬಂಧ ಇರೋದರ ಬಗ್ಗೆ ಮಾಹಿತಿ ನೀಡಿ. ಸರಿಯಾದ ಮಾಹಿತಿ ಇಲ್ಲದೆಯೇ ಬಂಧನ ಮಾಡಲಾಗಿದೆ. ಹಣ ಕಳೆದುಕೊಂಡವರು ಯಾರು ರೆಡ್ಡಿಗೆ ಕೊಟ್ಟಿರುವುದಾಗಿ ಹೇಳಿದ್ದಾರಾ? ದಾಖಲಾಗಿರುವ ದೂರು ಒಂದಾದರೆ, ತನಿಖೆಯೇ ಮತ್ತೊಂದಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಳಿಕ ವಿಚಾರಣೆ ಮುಕ್ತಾಯಗೊಳಿಸಿ ತೀರ್ಪನ್ನು ನಾಳೆಗೆ ಕಾಯ್ದಿರಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT