ಸಂತೋಷ್ ತಮ್ಮಯ್ಯ 
ರಾಜ್ಯ

ಧರ್ಮ ನಿಂದನೆ ಆರೋಪ: ಪತ್ರಕರ್ತ, ಅಂಕಣಕಾರ ಸಂತೋಷ್ ತಮ್ಮಯ್ಯ ಬಂಧನ

ಟಿಪ್ಪು ಜಯಂತಿ ವಿರೋಧಿಸುವ ನೆಪದಲ್ಲಿ ಧರ್ಮ ನಿಂದನೆ ಮಾಡಿದ್ದಾರೆಂದು ಆರೋಪಿಸಿ ಪತ್ರಕರ್ತ, ಪ್ರಸಿದ್ದ ಅಂಕಣಕಾರ ಸಂತೋಷ್ ತಮ್ಮಯ್ಯ ಅವರನ್ನು ಗೋಣಿಕೊಪ್ಪ ಪೋಲೀಸರು ಬಂಧಿಸಿದ್ದಾರೆ.

ಗೋಣಿಕೊಪ್ಪ(ಮಡಿಕೇರಿ): ಟಿಪ್ಪು ಜಯಂತಿ ವಿರೋಧಿಸುವ ನೆಪದಲ್ಲಿ ಧರ್ಮ ನಿಂದನೆ ಮಾಡಿದ್ದಾರೆಂದು ಆರೋಪಿಸಿ ಪತ್ರಕರ್ತ, ಪ್ರಸಿದ್ದ ಅಂಕಣಕಾರ ಸಂತೋಷ್ ತಮ್ಮಯ್ಯ ಅವರನ್ನು ಗೋಣಿಕೊಪ್ಪ ಪೋಲೀಸರು ಬಂಧಿಸಿದ್ದಾರೆ.
ಸಂತೋಷ್ ತಮ್ಮಯ್ಯ ವಿಚಾರಣೆ ನಡೆಸಿದ ಪೋಲೀಸರು ಪೊನ್ನಂಪೇಟೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ನವೆಂಬರ್ 5ರಂದು ಗೋಣೆಕೊಪ್ಪದ ಪ್ರಜ್ಞಾ ಕಾವೇರಿ ಸಂಘಟನೆ ಆಯೋಜಿಸಿದ್ದ "ಟಿಪ್ಪು ಕರಾಳ ಮುಖಗಳ ಅನಾವರಣ" ವಿಚಾರ ಸಂಕೀರ್ಣದಲ್ಲಿ ಮಾತನಾಡಿದ ತಮ್ಮಯ್ಯ ಧರ್ಮವೊಂದರ ಕುರಿತು ಅವಹೇಳನಕಾರಿಯಾಗಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. 
ತಮ್ಮಯ್ಯ ಸಮಾಜದ ಶಾಂತಿ ಕದಡುವ ಯತ್ನ ನಡೆಸಿದ್ದಾರೆ ಎಂದು ಸಿದ್ದಾಪುರ ಕರಡಿಗೋಡು ಗ್ರಾಮ ನಿವಾಸಿ ಕೆ.ಜಿ. ಅನ್ವರ್ ದೂರು ನೀಡಿದ್ದರು. ದೂರಿನ ಹಿನ್ನೆಲೆ ಮಂಗಳವಾರ ಮುಂಜಾನೆ ಸಂತೋಷ್ ತಮ್ಮಯ್ಯ ಬಂಧನವಾಗಿದೆ.
ಬಂಧನ ಖಂಡಿಸಿ ಪ್ರತಿಭಟನೆ
ಪತ್ರಕರ್ತ ಸಂತೋಷ್ ತಮ್ಮಯ್ಯ ಬಂಧನ ಖಂಡಿಸಿ ಗೋಣಿಕೊಪ್ಪದಲ್ಲಿ ಹಿಂದೂಪರ ಕಾರ್ಯಕರ್ತರು ಸೇರಿ ಸಾರ್ವಜನಿಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.ಪಟ್ಟಣದಲ್ಲಿ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ.
ಪ್ರತಿಭಟನಾಕಾರರು ಮಾನವ ಸರಪಳಿ ನಿರ್ಮಿಸಿ ವಾಹನ ಸಂಚಾರಕ್ಕೆ ಅಡ್ಡಿ ಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT