ಸಂತೋಷ್ ತಮ್ಮಯ್ಯ 
ರಾಜ್ಯ

ಧರ್ಮ ನಿಂದನೆ ಆರೋಪ: ಪತ್ರಕರ್ತ, ಅಂಕಣಕಾರ ಸಂತೋಷ್ ತಮ್ಮಯ್ಯ ಬಂಧನ

ಟಿಪ್ಪು ಜಯಂತಿ ವಿರೋಧಿಸುವ ನೆಪದಲ್ಲಿ ಧರ್ಮ ನಿಂದನೆ ಮಾಡಿದ್ದಾರೆಂದು ಆರೋಪಿಸಿ ಪತ್ರಕರ್ತ, ಪ್ರಸಿದ್ದ ಅಂಕಣಕಾರ ಸಂತೋಷ್ ತಮ್ಮಯ್ಯ ಅವರನ್ನು ಗೋಣಿಕೊಪ್ಪ ಪೋಲೀಸರು ಬಂಧಿಸಿದ್ದಾರೆ.

ಗೋಣಿಕೊಪ್ಪ(ಮಡಿಕೇರಿ): ಟಿಪ್ಪು ಜಯಂತಿ ವಿರೋಧಿಸುವ ನೆಪದಲ್ಲಿ ಧರ್ಮ ನಿಂದನೆ ಮಾಡಿದ್ದಾರೆಂದು ಆರೋಪಿಸಿ ಪತ್ರಕರ್ತ, ಪ್ರಸಿದ್ದ ಅಂಕಣಕಾರ ಸಂತೋಷ್ ತಮ್ಮಯ್ಯ ಅವರನ್ನು ಗೋಣಿಕೊಪ್ಪ ಪೋಲೀಸರು ಬಂಧಿಸಿದ್ದಾರೆ.
ಸಂತೋಷ್ ತಮ್ಮಯ್ಯ ವಿಚಾರಣೆ ನಡೆಸಿದ ಪೋಲೀಸರು ಪೊನ್ನಂಪೇಟೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ನವೆಂಬರ್ 5ರಂದು ಗೋಣೆಕೊಪ್ಪದ ಪ್ರಜ್ಞಾ ಕಾವೇರಿ ಸಂಘಟನೆ ಆಯೋಜಿಸಿದ್ದ "ಟಿಪ್ಪು ಕರಾಳ ಮುಖಗಳ ಅನಾವರಣ" ವಿಚಾರ ಸಂಕೀರ್ಣದಲ್ಲಿ ಮಾತನಾಡಿದ ತಮ್ಮಯ್ಯ ಧರ್ಮವೊಂದರ ಕುರಿತು ಅವಹೇಳನಕಾರಿಯಾಗಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. 
ತಮ್ಮಯ್ಯ ಸಮಾಜದ ಶಾಂತಿ ಕದಡುವ ಯತ್ನ ನಡೆಸಿದ್ದಾರೆ ಎಂದು ಸಿದ್ದಾಪುರ ಕರಡಿಗೋಡು ಗ್ರಾಮ ನಿವಾಸಿ ಕೆ.ಜಿ. ಅನ್ವರ್ ದೂರು ನೀಡಿದ್ದರು. ದೂರಿನ ಹಿನ್ನೆಲೆ ಮಂಗಳವಾರ ಮುಂಜಾನೆ ಸಂತೋಷ್ ತಮ್ಮಯ್ಯ ಬಂಧನವಾಗಿದೆ.
ಬಂಧನ ಖಂಡಿಸಿ ಪ್ರತಿಭಟನೆ
ಪತ್ರಕರ್ತ ಸಂತೋಷ್ ತಮ್ಮಯ್ಯ ಬಂಧನ ಖಂಡಿಸಿ ಗೋಣಿಕೊಪ್ಪದಲ್ಲಿ ಹಿಂದೂಪರ ಕಾರ್ಯಕರ್ತರು ಸೇರಿ ಸಾರ್ವಜನಿಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.ಪಟ್ಟಣದಲ್ಲಿ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ.
ಪ್ರತಿಭಟನಾಕಾರರು ಮಾನವ ಸರಪಳಿ ನಿರ್ಮಿಸಿ ವಾಹನ ಸಂಚಾರಕ್ಕೆ ಅಡ್ಡಿ ಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ