ಅನಂತ್ ಕುಮಾರ್ ಯುಗಾಂತ್ಯ: ಪಂಚಭೂತಗಳಲ್ಲಿ ಲೀನರಾದ 'ಅದಮ್ಯ ಚೇತನ' 
ರಾಜ್ಯ

ಕೇಂದ್ರ ಸಚಿವ ಅನಂತ್ ಕುಮಾರ್ ಪಂಚಭೂತಗಳಲ್ಲಿ ಲೀನ

ರಾಜ್ಯ ಬಿಜೆಪಿಯ ಹಿರಿಯ ತಲೆಯಾಳು, ರಾಜಕೀಯ ಚತುರ, ಸತತ ಆರು ಬಾರಿ ಲೋಕಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿ ಸೋಲಿಲ್ಲದ ಸರದಾರ ಎನ್ನಿಸಿಕೊಂಡಿದ್ದ...

ಬೆಂಗಳೂರು: ರಾಜ್ಯ ಬಿಜೆಪಿಯ ಹಿರಿಯ ತಲೆಯಾಳು, ರಾಜಕೀಯ ಚತುರ, ಸತತ ಆರು ಬಾರಿ ಲೋಕಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿ ಸೋಲಿಲ್ಲದ ಸರದಾರ ಎನ್ನಿಸಿಕೊಂಡಿದ್ದ ಕೇಂದ್ರ ಸಂಸದೀಯ ವ್ಯವಹಾರ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಹೆಚ್.ಎನ್. ಅನಂತ್ ಕುಮಾರ್ ಅವರು, ಚಾಮರಾಜಪೇಟೆಯ ಹಿಂದು ರುದ್ರಭೂಮಿಯಲ್ಲಿ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. 
ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ವಿಧಿವಿಧಾನ ಹಾಗೂ ಸಕಲ ಸರ್ಕಾರಿ ಗೌರವಾಧಾರಗಳೊಂದಿಗೆ ಅನಂತ್ ಕುಮಾರ್ ಅವರು ಅಂತಿಮ ಸಂಸ್ಕಾರ ನೆರವೇರಿತು. 
ಕಳೆದ ಕೆಲ ದಿನಗಳಿಂದ ಶ್ವಾಸಕೋಶದ ಕ್ಯಾನ್ಸರ್ ಕಾರಣ ಚಿಕಿತ್ಸೆ ಪಡೆಯುತ್ತಿದ್ದ ಅನಂತ್ ಕುಮಾರ್ ಅವರು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದರು. ಬೆಂಗಳೂರಿನ ಬಸವನಗುಡಿ ಶಂಕರ ಕ್ಯಾನ್ಸರ್ ಆಸ್ಪತ್ರೆಯಲ್ಲಿ ನಿನ್ನೆ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದರು. 

ನಿನ್ನೆ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಮಿಸಿ ಅಂತಿಮ ದರ್ಶನ ಪಡೆದುಕೊಂಡಿದ್ದರು. ಇಂದೂ ಕೂಡ ಹಲವು ಗಣ್ಯರು, ಕೇಂದ್ರ ಸಚಿವರು, ರಾಷ್ಟ್ರ ನಾಯಕರು ಆಗಮಿಸಿ ಪುಷ್ಪನಮನ ಸಲ್ಲಿಸಿದರು. ಎಲ್.ಕೆ. ಅಡ್ವಾಣಿ, ಅಮಿತ್ ಶಾ, ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವು ಗಣ್ಯರು ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು. 

ಅನಂತ್ ಕುಮಾರ್ ಅವರ ಸಹೋದರ ನಂದಕುಮಾರ್ ಅವರು ಅಂತಿಮ ವಿಧಾನವನ್ನು ನೆರವೇರಿಸಿದರು. ಬಳಿಕ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಅಗಲಿದ ನಾಯಕನಿಗೆ ಮೂರು ಸೇನೆಗಳ ಪ್ರಮುಖರು ಸರ್ಕಾರಿ ಗೌರವ ಸಲ್ಲಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

ಮೊದಲು ಪರಮೇಶ್ವರ್ ಕೂಲಿ ಚುಕ್ತಾ ಮಾಡಲಿ: ನಂತರ ವಿಧಾನಸಭೆ ವಿಸರ್ಜಿಸಿ ಡಿಕೆಶಿ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ!

ನಾವು ಬಿಟ್ಟರು ಧರ್ಮ, ಜಾತಿ ನಮ್ಮನ್ನು ಬಿಡುವುದಿಲ್ಲ: ಒಕ್ಕಲಿಗನಾಗಿ ಹುಟ್ಟಿದ್ದೇನೆ; ಅಶೋಕಣ್ಣನಿಗೆ ಬ್ಯಾಡ್ಜ್ ಕಳಿಸುತ್ತೇನೆ ಹಾಕಿಕೊಳ್ಳಲಿ; DKS

ಅಮೆರಿಕ ಶಕ್ತಿ ಕೇಂದ್ರ ಶ್ವೇತಭವನ ಬಳಿ ಇಬ್ಬರು ಯುಎಸ್ ರಾಷ್ಟ್ರೀಯ ಗಾರ್ಡ್ ಗಳ ಮೇಲೆ ಗುಂಡಿನ ದಾಳಿ: ಶಂಕಿತನ ಗುರುತು ಪತ್ತೆ

SCROLL FOR NEXT