ಅನಂತ್ ಕುಮಾರ್ 
ರಾಜ್ಯ

ಜೂನ್ ನಲ್ಲಿ ಕಾಣಿಸಿಕೊಂಡ ಕ್ಯಾನ್ಸರ್, ಆರು ತಿಂಗಳಿಗೆ ಅನಂತ್ ಕುಮಾರ್ ಬಲಿ: ಘಟನಾವಳಿ ಬಿಚ್ಚಿಟ್ಟ ವೈದ್ಯರು!

ಶ್ವಾಸಕೋಶ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ನಿಧನರಾಗಿದ್ದಾರೆ, ಜೂನ್ ತಿಂಗಳಲ್ಲಿ ಮೊದಲಿಗೆ ಅನಂತ್ ಕುಮಾರ್ ಅವರಿಗೆ ...

ಬೆಂಗಳೂರು: ಶ್ವಾಸಕೋಶ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ನಿಧನರಾಗಿದ್ದಾರೆ, ಜೂನ್ ತಿಂಗಳಲ್ಲಿ ಮೊದಲಿಗೆ ಅನಂತ್ ಕುಮಾರ್ ಅವರಿಗೆ ಕ್ಯಾನ್ಸರ್ ಇರುವುದು ಪತ್ತೆಯಾಯಿತು,  ಕೂಡಲೇ ಬಸವನಗುಡಿಯಲ್ಲಿರುವ ಶಂಕರ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಯಿತು.
ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ಅನಂತ್ ಪತ್ನಿ ತೇಜಸ್ವಿನಿ ಕೂಡ ಟ್ರಸ್ಟಿಯಾಗಿದ್ದಾರೆ,. ಆದರೆ ಅಲ್ಲಿನ ಚಿಕಿತ್ಸೆಯಿಂದ ಅನಂತ ಕುಮಾರ್ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಾಣಲಿಲ್ಲ,  ಹೀಗಾಗಿ ನ್ಯೂಯಾರ್ಕ್ ನ ಮೆಮೋರಿಯಲ್ ಸ್ಲೋನ್ ಕೆಟ್ಟರಿಂಗ್ ಕ್ಯಾನ್ಸರ್ ಸೆಂಟರ್ ಗೆ ಸೆಪ್ಟಂಬರ್ ತಿಂಗಳಲ್ಲಿ ದಾಖಲಿಸಿಲಾಯಿತು.
ಅಕ್ಟೋಬರ್ 20 ರವರೆಗೆ ಅನಂತ್ ಸುಮಾರು 20 ದಿನಗಳ ಕಾಲ ಅಲ್ಲಿಯೇ ಇದ್ದರು. ಅವರಿಗೆ ನೀಡಿದ ಚಿಕಿತ್ಸೆಯಿಂದ ಯಾವುದೇ ಪ್ರಯೋಜನವಾಗಲಿಲ್ಲ, ಹೀಗಾಗಿ ಅವರು ವಾಪಸ್ ಭಾರತಕ್ಕೆ ಬರಲು ನಿರ್ಧರಿಸಿದರು, ಶಂಕರ ಕ್ಯಾನ್ಸರ್ ಆಸ್ಪತ್ರೆಯಲ್ಲಿ ನಾವು ಚಿಕಿತ್ಸೆ ಮುಂದುವರಿಸಿದೆವು, ಆದರೆ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆಯಾಗಲಿಲ್ಲ, ಕಾಯಿಲೆ ಮತ್ತಷ್ಟು ಉಲ್ಬಣಗೊಂಡಿತು. ಇತ್ತೀಚೆಗೆ ಅಮೆರಿಕ ಬಿಡುಗಡೆ ಮಾಡಿದ ಹೊಸ ಔಷಧಿ ಕೂಡ ಅವರಿಗೆ ನೀಡಲಾಗಿತ್ತು, ಆದರೆ ಪ್ರಯೋಜನವಾಗಲಿಲ್ಲ ಎಂದು ಶಂಕರ ಕ್ಯಾನ್ಸರ್ ಫೌಂಡೇಶನ್  ವೈದ್ಯ ಡಾ. ಬಿ.ಎಸ್ ಶ್ರೀನಾಥ್ ಹೇಳಿದ್ದಾರೆ.
40 ವರ್ಷದ ನಂತರ ವರ್ಷಕ್ಕೆ ಒಮ್ಮೆಯಾದರೂ ಇಡೀ ದೇಹವನ್ನು ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂಬುದನ್ನು ಹಲವರು ಗಮನಕ್ಕೆ ತೆಗೆದುಕೊಳ್ಳುವುದಿಲ್ಲ. ನಾವು ಪರೀಕ್ಷೆ ಮಾಡಿದಾಗ ಮಾತ್ರವಷ್ಟೇ ಕ್ಯಾನ್ಸರ್ ಪತ್ತೆ ಹಚ್ಚಲು ಸಾಧ್ಯ, ಆರಂಭಿಕ ಹಂತದಲ್ಲಿ ಅದರ ಯಾವುದೇ ಗುಣ ಲಕ್ಷಣಗಳು ಗೋಚರಿಸುವುದಿಲ್ಲ., 
ರಾಜ್ಯ ವಿಧಾನಸಭೆ ಚುನಾವಣೆ ಸಮಯದಲ್ಲಿಯೇ ಅನಂತ್ ಕುಮಾರ್ ಆವರಿಗೆ ಕಾಯಿಲೆ ಕಾಣಿಸಿಕೊಂಡಿದೆ, ಆ ವೇಳೆಯಲ್ಲಿ ಅವರಿಗೆ ವಿಪರೀತ ಕೆಮ್ಮು ಕಾಣಿಸಿಕೊಂಡಿತ್ತು. ಉತ್ತರ ಕರ್ನಾಟದ ಭಾಗದಲ್ಲಿ ಹೆಚ್ಚಿನ ದೂಳಿನ ಪ್ರದೇಶದಲ್ಲಿ ಪ್ರಚಾರ ಕೈಗೊಂಡಿದ್ದರಿಂದ ಕೆಮ್ಮು ಹೆಚ್ಚಾಗಿದೆ ಎಂದು ಅವರು ಬಾವಿಸಿದ್ದರು, ಸೋಮವಾರ ಬೆಳಗ್ಗೆ 1.45 ಗೆ ಅವರು ಕೊನೆಯುಸಿರೆಳೆದರು ಎಂದು ಶ್ರೀನಾಥ್ ವಿವರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT