ಸಂಗ್ರಹ ಚಿತ್ರ 
ರಾಜ್ಯ

ಬಸವೇಶ್ವರನಗರ ಅತ್ಯಾಚಾರ ಪ್ರಕರಣ: ಕಾಮುಕನಿಗಾಗಿ ಪೊಲೀಸರಿಂದ ತೀವ್ರ ಹುಡುಕಾಟ

ಬಸವೇಶ್ವರನಗರ ಒಂಟಿ ಮಹಿಳೆ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವನ್ನು ರಚನೆ ಮಾಡಿರುವ ಅಧಿಕಾರಿಗಳು ಕಾಮುಕನಿಗಾಗಿ ತೀವ್ರ ಹುಡುಕಾಟ ಆರಂಭಿಸಿದ್ದಾರೆ...

ಬೆಂಗಳೂರು: ಬಸವೇಶ್ವರನಗರ ಒಂಟಿ ಮಹಿಳೆ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವನ್ನು ರಚನೆ ಮಾಡಿರುವ ಅಧಿಕಾರಿಗಳು ಕಾಮುಕನಿಗಾಗಿ ತೀವ್ರ ಹುಡುಕಾಟ ಆರಂಭಿಸಿದ್ದಾರೆ. 
ಬಸವೇಶ್ವರನಗರದಲ್ಲಿ ಗುರುವಾರ ತಡರಾತ್ರಿ ಮನೆಗೆ ನುಗ್ಗಿರುವ ಕಾಮುಕನೊಬ್ಬ 33 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ. 
ಒಂಟಿ ಮಹಿಳೆಯೆಂದು ಅರಿತ ಆರೋಪಿ ಆಕೆಯನ್ನು ಹಿಂಬಾಲಿಸಿ ಮನೆಯ ಬೆಲ್ ಮಾಡಿದ್ದಾನೆ. ಬಾಗಿಲು ತೆಗೆದ ಕೂಡಲೇ ಮಹಿಳೆಯ ಕುತ್ತಿಗೆಗೆ ಚಾಕು ಇಟ್ಟು ಬೆದರಿಸಿ, ಮನೆಯೊಳಗೆ ನುಗ್ಗಿ ಬಾಗಿಲು ಮುಚ್ಚಿದ್ದಾನೆ. ಕೂಗಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಮಹಿಳೆ ಜೊತೆಗೆ ಲೈಂಗಿಕ ಕ್ರಿಯೆಗೆ ಮುಂದಾಗಿದ್ದಾನೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಾನೆ. 
ಅತ್ಯಾಚಾರ ಮಾಡಿ ಮನೆಯಲ್ಲಿಯೇ ಕೆಲ ಕಾಲ ಉಳಿದ ದುಷ್ಕರ್ಮಿ, ಮೇಲಿಂದ ಮೇಲೆ ಮಹಿಳೆ ಮೇಲೆ ಅತ್ಯಾಚಾರವೆಸಗಿ, ದೂರು ನೀಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಅಲ್ಲಿಂದ ಕಾಲ್ಕಿತ್ತಿದ್ದಾನೆ. 
ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಹೆಚ್ಚುವರಿ ಆಯುಕ್ತ ಬಿ.ಕೆ.ಸಿಂಗ್ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕುರಿತು ಕೆಲ ಸುಳಿವುಗಳು ದೊರಕಿವೆ ಎಂದು ಹೇಳಿದ್ದಾರೆ. ಆದರೆ, ಮತ್ತಷ್ಟು ಮಾಹಿತಿ ನೀಡಲು ನಿರಾಕರಿಸಿದ್ದಾರೆ. 
ಸ್ಥಳೀಯ ಪೊಲೀಸ್ ಠಾಣಾಧಿಕಾರಿಗಳು ಮಾತನಾಡಿ, ಆರೋಪಿ ಕುರಿತು ಮಾಹಿತಿ ಸಂಗ್ರಹಿಸಲು ಸ್ಥಳೀಯರ ಸಹಾಯ ಕೇಳಲಾಗುತ್ತಿದೆ. ಸಿಸಿಟಿವಿ ದೃಶ್ಯಾವಳಿಗಳಿಂದ ಯಾವುದೇ ಸುಳಿವುಗಳು ದೊರಕಿಲ್ಲ ಎಂದು ಹೇಳಿದ್ದಾರೆ. 
ಘಟನೆ ಬಳಿಕ ತನಿಖೆ ನಡೆಸುತ್ತಿರುವ ಪೊಲೀಸರೇ ಸ್ಥಳೀಯ ಮನೆ ಬಾಗಿಲು ಬಡಿದರೂ ಬಾಗಿಲು ತೆಗೆಯಲು ಸ್ಥಳೀಯರು ಹೆದರುತ್ತಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT