ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಅನಿಲ ಸೋರಿಕೆಯಿಂದ ಕಾರ್ಖಾನೆಯಲ್ಲಿ ಬೆಂಕಿ, 12 ಕಾರ್ಮಿಕರಿಗೆ ಗಾಯ

ಕೆಲಸ ಮಾಡುವಾಗ ಸ್ಟೌ ಕ್ರಾಫ್ಟ್ ಕಾರ್ಖಾನೆಯಲ್ಲಿ ಅನಿಲ ಸೋರಿಕೆಯಿಂದ ಬೆಂಕಿ ಅವಘಡ ಸಂಭವಿಸಿ ಮಹಿಳೆ ಸೇರಿ 12 ಮಂದಿ ಕಾರ್ಮಿಕರಿಗೆ ಗಾಯವಾಗಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ...

ಬೆಂಗಳೂರು: ಕೆಲಸ ಮಾಡುವಾಗ ಸ್ಟೌ ಕ್ರಾಫ್ಟ್ ಕಾರ್ಖಾನೆಯಲ್ಲಿ ಅನಿಲ ಸೋರಿಕೆಯಿಂದ ಬೆಂಕಿ ಅವಘಡ ಸಂಭವಿಸಿ ಮಹಿಳೆ ಸೇರಿ 12 ಮಂದಿ ಕಾರ್ಮಿಕರಿಗೆ ಗಾಯವಾಗಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. 
ಕನಕಪುರ ತಾಲೂಕಿನ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಪಿಜೆನ್ ಪ್ರೆಶರ್ ಕುಕ್ಕರ್ ತಯಾರು ಮಾಡುವ ಸ್ಟೌ ಕ್ರಾಫ್ಟ್ ಕಾರ್ಖಾನೆಯ ಆರ್'ಸಿ ಯುನಿಟ್ ಕೊಠಡಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಸ್ಟೌ ಕ್ರಾಫ್ಟ್ ಕಾರ್ಖಾನೆಯ ತಯಾರಿಕಾ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ 50 ಮಂದಿ ಯನಿಟ್ ವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಗ್ಯಾಸ್ ಒತ್ತಡ ಹೆಚ್ಚಾಗಿ ಸೋರಿಕೆಯಾಗಿದೆ. 
ಕೂಡಲೇ ಬೆಂಕಿ ಹೊತ್ತುಕೊಂಡಿದೆ. ಘಟನೆಯಲ್ಲಿ ಉಳಿದಂತೆ ಇನ್ನೂ 11 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿ ಹಾರೋಹಳ್ಳಿಯ ಅರುಣೋದಯ ಖಾಸಗಿ ಆಸ್ಪತ್ರೆಯಲ್ಲಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆಂದು ತಿಳಿದುಬಂದಿದೆ. 
ಘಟನಾ ಸ್ಥಳದಲ್ಲಿ ಸುರಕ್ಷಾತಾ ವಸ್ತುಗಳನ್ನು ಅಳವಡಿಸಿರಲ್ಲ. 2 ವಾರಗಳ ಹಿಂದಷ್ಟೇ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಖಾನೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ನೋಟಿಸ್ ಜಾರಿ ಮಾಡಿದ್ದರು. ಆದರೂ, ಆಡಳಿತ ಮಂಡಳಿಯವರು ನಿರ್ಲಕ್ಷ್ಯ ತೋರಿದ್ದರು. ಇದೀಗ ಮಾಲೀಕ ರಾಜೇಂದ್ರ ಗಂಡಿ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT