ಬೆಂಗಳೂರು-ಮೈಸೂರು ಅಷ್ಟಪಥ ರಸ್ತೆ ನಿರ್ಮಾಣ ಕಾರ್ಯ ಆರಂಭ 
ರಾಜ್ಯ

ಬೆಂಗಳೂರು-ಮೈಸೂರು ಅಷ್ಟಪಥ ರಸ್ತೆ ನಿರ್ಮಾಣ ಕಾರ್ಯ ಆರಂಭ

ಬೆಂಗಳೂರು-ಮೈಸೂರು ಅಷ್ಟಪಥ ರಸ್ತೆ ನಿರ್ಮಾಣ ಕಾರ್ಯ ಆರಂಭಗೊಂಡಿದ್ದು, ಪಾದಚಾರಿಗಳಿಗೆ ಭಾರೀ ನಿರಾಳ ಎದುರಾಗಿದೆ...

ಬೆಂಗಳೂರು: ಬೆಂಗಳೂರು-ಮೈಸೂರು ಅಷ್ಟಪಥ ರಸ್ತೆ ನಿರ್ಮಾಣ ಕಾರ್ಯ ಆರಂಭಗೊಂಡಿದ್ದು, ಪಾದಚಾರಿಗಳಿಗೆ ಭಾರೀ ನಿರಾಳ ಎದುರಾಗಿದೆ. 
ರಸ್ತೆ ಅಗಲೀಕರಣ ಕುರಿತು ರಾಜ್ಯ ಸರ್ಕಾರ ನಡೆಸಿದ್ದ ಸಮೀಕ್ಷೆ ಪೂರ್ಣಗೊಂಡಿದ್ದು, ರಸ್ತೆ ನಿರ್ಮಾಣಕ್ಕೆ ಅಗತ್ಯವಿರುವ ಮರಗಳ ಕಡಿಯುವುದು ಹಾಗೂ ಸ್ಥಳದ ಗಡಿ ನಿಗದಿ ಸೇರಿದಂತೆ ಹಲವು ಕಾರ್ಯಗಳನ್ನು ಪೂರ್ಣಗೊಳಿಸಿದೆ. ಇದಲ್ಲದೆ, ಸ್ವಚ್ಛತಾ ಕಾರ್ಯಗಳನ್ನೂ ಕೂಡ ಪೂರ್ಣಗೊಳಿಸಲಾಗಿದೆ. 
ಅಷ್ಟಪಥ ರಸ್ತೆ ನಿರ್ಮಾಣ ಕಾರ್ಯಕ್ಕೆ ಅಂದಾಜು ರೂ.6 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ನಿರೀಕ್ಷಿಸಲಾಗಿದ್ದು, ರಸ್ತೆ ನಿರ್ಮಾಣ ಪೂರ್ಣಗೊಂಡ ಬಳಿಕ ಬೆಂಗಳೂರ-ಮೈಸೂರು ನಡುವಿನ ಸಂಚಾರಕ್ಕೆ 120 ನಿಮಿಷಗಳು ಸಮಯ ಹಿಡಿಯಲಿದೆ. 
ರಸ್ತೆ ಅಗಲೀಕರಣಕ್ಕೆ ಈಗಾಗಲೇ ಹಲವು ಸಿದ್ಧತೆಗಳನ್ನು ನಡೆಸಿರುವ ಸರ್ಕಾರ, ನಿರ್ಮಾಣ ಕಾರ್ಯಗಳು ಸಂಪೂರ್ಣವಾಗಿ ಡಿಸೆಂಬರ್ ತಿಂಗಳಿನಲ್ಲಿ ಆರಂಭಗೊಳ್ಳಲಿದೆ. ಈಗಾಗಲೇ ರಸ್ತೆಗಳಲ್ಲಿದ್ದ ಡಾಬಾ, ಅಂಗಡಿಗಳು ಹಾಗೂ ಇತರೆ ವಾಣಿಜ್ಯ ಕಟ್ಟಡಗಳನ್ನು ಸ್ಥಳಂತರ ಮಾಡುವಂತೆ ಮಾಲೀಕರಿಗೆ ಸೂಚಿಸಿದೆ. ಯೋಜನೆಗೆ ಅಗತ್ಯವಿರುವ ಶೇ.80ರಷ್ಟು ಭೂಮಿಯನ್ನು ಈಗಾಗಲೇ ಸರ್ಕಾರ ವಶಕ್ಕೆ ಪಡೆದುಕೊಂಡಿದೆ. ನಿರ್ಮಾಣ ಕಾರ್ಯ ಬೆಂಗಳೂರು-ನೀಡಘಟ್ಟ ಮತ್ತು ಮೈಸೂರು-ನೀಡಘಟ್ಟ ಎರಡು ಹಂತಗಳಲ್ಲಿ ನಡೆಯಲಿದೆ. 
ಹಿಂದಿನ ಸರ್ಕಾರದಲ್ಲಿ ಲೋಕೋಪಯೋಗಿ ಸಚಿವರಾಗಿದ್ದ ಹೆಚ್.ಸಿ.ಮಹದೇವಪ್ಪ ಅವರ ಮನವಿ ಬಳಿಕ ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್  ಬೆಂಗಳೂರು-ಮೈಸೂರು ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯೆಂದು ಘೋಷಣೆ ಮಾಡಿದ್ದರು. ಅಲ್ಲದೆ, ಹೆದ್ದಾರಿ ಅಭಿವೃದ್ಧಿಗಾಗಿ ರೂ.2,300ಕೋಟಿ ಬಿಡುಗಡೆ ಮಾಡಿದ್ದರು. ಇದಾದ ಬಳಿಕ ಕೇಂದ್ರ ಎನ್'ಡಿಎ ಸರ್ಕಾರ ರೂ. 6000 ಕೋಟಿ ವೆಚ್ಚದಲ್ಲಿ ಅಷ್ಟಪಥ ರಸ್ತೆ ನಿರ್ಮಾಣ ಮಾಡಲು ನಿರ್ಧರಿಸಿತ್ತು.
ಭೋಪಾಲ್ ಮೂಲಕ ಕಂಪನಿ ನಿರ್ಮಾಣ ಕಾರ್ಯದ ಗುತ್ತಿಗೆಯನ್ನು ಪಡೆದುಕೊಂಡಿದೆ. 2018ರ ಡಿಸೆಂಬರ್ ತಿಂಗಳಿನಲ್ಲಿ ನಿರ್ಮಾಣ ಕಾರ್ಯ ಆರಂಭಗೊಳ್ಳಲಿದೆ. ಮದ್ದೂರು, ಮಂಡ್ಯ, ಶ್ರೀರಂಗಪಟ್ಟಣದಲ್ಲಿ ಬೈಪಾಸ್ ಮಾಡುವ ಕುರಿತು ಪ್ರಸ್ತಾಪವಿಟ್ಟಿದ್ದಾರೆ. ಇದು ಯೋಜನೆಯ ವೆಚ್ಚವನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ಲೋಕೋಪಯೋಗಿ ಸಚಿವ ರೇವಣ್ಣ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

SCROLL FOR NEXT