ರಾಜಮಾತೆ ಪ್ರಮೋದದೇವಿ 
ರಾಜ್ಯ

ಟಿಪ್ಪು ನಮ್ಮ ಕುಟುಂಬಕ್ಕೆ ಹೆಚ್ಚಿನ ತೊಂದರೆ ಕೊಟ್ಟಿದ್ದನು: ಪ್ರಮೋದಾದೇವಿ ಒಡೆಯರ್

ಟಿಪ್ಪುವಿನಿಂದ ನಮ್ಮ ಕುಟುಂಬಕ್ಕೆ ದೊಡ್ಡ ಹಾನಿಯಾಗಿದೆ, ನಮ್ಮ ಕುಟುಂಬ, ಪರಿವಾರಕ್ಕೆ ಟಿಪ್ಪು ಸುಲ್ತಾನ್ ಸಾಕಷ್ಟು ತೊಂದರೆ ನೀಡಿದ್ದ ಎಂದು ಮೈಸೂರಿನ ರಾಜಮಾತೆ ಪ್ರಮೋದಾದೇವಿ ಒಡೆಯರ್ ಹೇಳಿದ್ದಾರೆ.

ಬೆಳಗಾವಿ: ಟಿಪ್ಪುವಿನಿಂದ ನಮ್ಮ ಕುಟುಂಬಕ್ಕೆ ದೊಡ್ಡ ಹಾನಿಯಾಗಿದೆ, ನಮ್ಮ ಕುಟುಂಬ, ಪರಿವಾರಕ್ಕೆ ಟಿಪ್ಪು ಸುಲ್ತಾನ್ ಸಾಕಷ್ಟು ತೊಂದರೆ ನೀಡಿದ್ದ ಎಂದು ಮೈಸೂರಿನ ರಾಜಮಾತೆ ಪ್ರಮೋದಾದೇವಿ ಒಡೆಯರ್ ಹೇಳಿದ್ದಾರೆ. 
ಬೆಳಗಾವಿಯಲ್ಲಿ ಕೆಎಲ್ಇ ಪಿಸಿಯೋಥೆರಪಿ ಕೇಂದ್ರವನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಡನೆ ಮಾತನಾಡಿದ ಪ್ರಮೋದಾದೇವಿ ಸರ್ಕಾರ ಏಕೆ ಟಿಪ್ಪು ಜಯಂತಿಯನ್ನು ಆಚರಿಸುತ್ತಿದೆ, ಇದರ ಹಿಂದಿನ ಉದ್ದೇಶವೇನೆಂದು ನಮಗೆ ತಿಳಿಯುತ್ತಿಲ್ಲ. ಇದಕ್ಕೆ ನಮ್ಮ ಬೆಂಬಲವೂ ಇಲ್ಲ ಎಂದಿದ್ದಾರೆ.
"ಟಿಪ್ಪು ಜಯಂತಿಯನ್ನು ಸರ್ಕಾರ ಯಾವ ಕಾರಣಕ್ಕಾಗಿ ಆಚರಿಸುತ್ತಿದೆ? ಅವನು ನಮ್ಮ ಕುಟುಂಬಕ್ಕೆ ದೊಡ್ಡ ಪ್ರಮಾಣದಲ್ಲಿ ತೊಂದರೆ ನೀಡಿದ್ದ.ಆತ ಮಹಾರಾಣಿ  ಲಕ್ಷ್ಮಮ್ಮಣ್ಣಿ ದೇವಿಯವರನ್ನು ಶ್ರೀರಂಗಪಟ್ಟಣದ ಜನನ ಮಂಟಪದಲ್ಲಿ ನಿರ್ಬಂಧ ರೂಪದಲ್ಲಿ ಇಟ್ಟಿದ್ದ. ಅವನ ದಾಳಿಗಳಿಂದ ಮೈಸೂರಿನ ಅರಸರಿಗೆ ಭಾರೀ ನೋವಾಗಿತ್ತು" ಎಂದಿದ್ದಾರೆ.
"ದೀಪಾವಳಿಯ ದಿನದಂದೇ ಮೇಲುಕೋಟೆಯ ಐಯ್ಯಂಗಾರ್ ಸಮುದಾಯದ ಮೇಲೆ ಸಾಮೂಹಿಕ ನರಮೇಧ ನಡೆಸಿದ್ದ ಟಿಪ್ಪು ಮುಮ್ಮಡಿ ಚಿಕ್ಕರಾಜ ಒಡೆಯರ್ ಕಾಲದಲ್ಲಿ ಟಿಪ್ಪು ರಾಜಮನೆತನದವರನ್ನು ಬಂಧನದಲ್ಲಿರಿಸಿದ್ದನು. ಆದರೆ ಹೀಗೆಲ್ಲಾ ನೋವುಂಟು ಮಾಡಿದ್ದರೂ ಸಹ ನಮ್ಮ ಹಿರಿಯರ ಮಾತಿನಂತೆ ನಾನು ನಮಗೆ ನೋವುಂಟು ಮಾಡಿದವರ ಬಗ್ಗೆ ಏನನ್ನೂ  ಹೇಳಲು ಬಯಸುವುದಿಲ್ಲ. ಟಿಪ್ಪುವಿನ ವಿರುದ್ಧ ಹೇಳಿಕೆ ನಿಡಲಾರೆ"
"ನಾನೊಬ್ಬ ದೇಶದ ನಾಗರಿಕಳಾಗಿದ್ದು ಟಿಪ್ಪು ಜಯಂತಿಯ ವಿಚಾರದಲ್ಲಿ ಸರ್ಕಾರವನ್ನು ಪ್ರಶ್ನಿಸಲಾರೆ. ಇದು ಅವರಿಗೆ ಬಿಟ್ಟ ವಿಚಾರ.ಈ ಕುರಿತು ನಾನು ಹೆಚ್ಚು ಮಾತನಾಡುವುದಿಲ್ಲ" ಪ್ರಮೋದಾದೇವಿ ಹೇಳಿದ್ದಾರೆ.
ಇನ್ನು ರಾಜಕೀಯ ಪ್ರವೇಶದ ಕುರಿತಂತೆ ಮಾತನಾಡಿದ ಪ್ರಮೋದಾದೇವಿ "ತಾವೆಂದೂ ರಾಜಕೀಯಕ್ಕೆ ಪ್ರವೇಶಿಸಲ್ಲ. ಜನಸೇವೆ ಮಾಡಲು ರಾಜಕಾರಣಕ್ಕೆ ಸೇರ್ಪಡೆಯಾಗುವುದು ಅನಿವಾರ್ಯವಲ್ಲ. ಪುತ್ರ ಯದುವೀರ್ ಸಹ ಸಧ್ಯದ ಪರಿಸ್ಥಿತಿಯಲ್ಲಿ ರಾಜಕೀಯಕ್ಕೆ ಇಳಿಯುವುದಿಲ್ಲ. ಮುಂದೆ ಅವರೇನಾದರೂ ಮನಸ್ಸು ಬದಲಿಸಿದರೆ ಗೊತ್ತಿಲ್ಲ" ಎಂದರು.
ಶಬರಿಮಲೆಗೆ ಮಹಿಳೆಯರ ಪ್ರವೇಶ ಸಂಬಂಧ ಮಾತನಾಡಿ "ಕಾನೂನು ಪ್ರಕಾರ ಎಲ್ಲರಿಗೆ ಸಮಾನ ಹಕ್ಕಿದೆ, ಮಹಿಳೆಯರು ದೇವಾಲಯ ಪ್ರವೇಶ ಮಾಡುವುದು ಅಪರಾಧವಲ್ಲ. ಆದರೆ ಧಾರ್ಮಿಕ ನಂಬಿಕೆಯನ್ನೂ ಸಹ ಅಲ್ಲಗೆಳೆಯಲಾಗದು. ನಮ್ಮ ಕುಟುಂಬ್ವದಲ್ಲಿ ಹಿಂದಿನವರ ಪರಂಪರೆಯನ್ನೇ ಪಾಲನೆ ಮಾಡುವುದು ನಡೆದುಕೊಂಡು ಬಂದಿದೆ. ಹೀಗಾಗಿ ನಾನು ಈ ಕುರಿತಂತೆ ಏನನ್ನೂ ಹೇಳಲಾರೆ. ದೇವಾಲಯಕ್ಕೆ ಹೋಗುವುದು, ಬಿಡುವುದು ಅವರವರ ಭಾವಕ್ಕೆ ಬಿಟ್ಟ ವಿಚಾರ" ಎಂದಿದ್ದಾರೆ..

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT