ಸಾಂದರ್ಭಿಕ ಚಿತ್ರ 
ರಾಜ್ಯ

ಮಾನವ ಕಳ್ಳಸಾಗಣೆ: ಸಿಸಿಬಿಯಿಂದ 15 ಮಹಿಳೆಯರ ರಕ್ಷಣೆ, ಉಡುಪಿಯ ವ್ಯಕ್ತಿ ಬಂಧನ

ಮಾನವ ಕಳ್ಳ ಸಾಗಣೆ ಆರೋಪದ ಮೇಲೆ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಮಹಿಳಾ ಮತ್ತು ...

ಬೆಂಗಳೂರು: ಮಾನವ ಕಳ್ಳ ಸಾಗಣೆ ಆರೋಪದ ಮೇಲೆ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಮಹಿಳಾ ಮತ್ತು ಮಾದಕದ್ರವ್ಯ ತಂಡದ ಪೊಲೀಸರು 38 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಈತ ಬಂಧಿಸಿ ವಶದಲ್ಲಿರಿಸಿಕೊಂಡಿದ್ದ ಸುಮಾರು 15 ಮಂದಿ ಮಹಿಳೆಯರನ್ನು ಬಿಡುಗಡೆಗೊಳಿಸಿದ್ದಾರೆ.

ಉಡುಪಿ ಮೂಲದ ಪ್ರವೀಣ್ ಶೆಟ್ಟಿ ನಾಗರಬಾವಿಯ ಪಾಪರೆಡ್ಡಿಪಾಳ್ಯದಲ್ಲಿ ವಾಸಿಸುತ್ತಿದ್ದು ಬಂಧಿತ ಆರೋಪಿಯಾಗಿದ್ದಾನೆ. ಆರ್ ಆರ್ ನಗರದ ನಾಗದೇವನಹಳ್ಳಿಯಲ್ಲಿ ಕೆಲವು ಮಹಿಳೆಯರನ್ನು ಅಕ್ರಮವಾಗಿ ಬಂಧಿಸಿಟ್ಟಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಇದರ ಆಧಾರದ ಮೇಲೆ ಕಳೆದ ಶನಿವಾರ ಮನೆಯೊಂದರ ಮೇಲೆ ದಾಳಿ ನಡೆಸಿದ ಪೊಲೀಸರು ಬೇರೆ ರಾಜ್ಯಗಳ 15 ಮಹಿಳೆಯರು ಬಂಧಿತರಾಗಿದ್ದನ್ನು ಕಂಡರು. ಅವರನ್ನು ರಕ್ಷಿಸಿದ ನಂತರ ಪ್ರವೀಣ್ ಶೆಟ್ಟಿ ಬಗ್ಗೆ ಸಿಸಿಬಿ ಪೊಲೀಸರಿಗೆ ತಿಳಿಸಿದರು. ಪ್ರವೀಣ್ ಶೆಟ್ಟಿ ಈ ಮಹಿಳೆಯರನ್ನು ಬೆಂಗಳೂರಿಗೆ ಕರೆತಂದಿದ್ದ.

ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಬಾರ್ಟೆಂಡರ್ ಕೆಲಸ ಕೊಡಿಸುವುದಾಗಿ ಪ್ರವೀಣ್ ಶೆಟ್ಟಿ ಕೆಲ ತಿಂಗಳ ಹಿಂದೆ ಈ ಮಹಿಳೆಯರನ್ನು ಕರೆತಂದಿದ್ದ. ಆದರೆ ಅವರಿಗೆ ಕೆಲಸ ಕೊಡಿಸದೆ ಒಂದು ಮನೆಯ ಕೋಣೆಯಲ್ಲಿ ಕೂಡಿ ಹಾಕಿದ್ದ. ಅವರು ನೀಡಿದ ಮಾಹಿತಿ ಮೇರೆಗೆ ಶೆಟ್ಟಿಯನ್ನು ಬಂಧಿಸಿದರು. ರಕ್ಷಿಸಲ್ಪಟ್ಟ ಮಹಿಳೆಯರಲ್ಲಿ ಮೂವರು ದೆಹಲಿ ಮೂಲದವರು ಮತ್ತೆ ಮೂವರು ಪಂಜಾಬ್ ಮೂಲದವರಾಗಿದ್ದಾರೆ. ಇನ್ನು ತಲಾ ನಾಲ್ವರು ಮುಂಬೈ ಮತ್ತು ರಾಜಸ್ತಾನದವರಾಗಿದ್ದಾರೆ. ಮತ್ತೊಬ್ಬಾಕೆ ಉತ್ತರ ಪ್ರದೇಶದವಳು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT