ಸಾಂದರ್ಭಿಕ ಚಿತ್ರ 
ರಾಜ್ಯ

ಮಾನವ ಕಳ್ಳಸಾಗಣೆ: ಸಿಸಿಬಿಯಿಂದ 15 ಮಹಿಳೆಯರ ರಕ್ಷಣೆ, ಉಡುಪಿಯ ವ್ಯಕ್ತಿ ಬಂಧನ

ಮಾನವ ಕಳ್ಳ ಸಾಗಣೆ ಆರೋಪದ ಮೇಲೆ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಮಹಿಳಾ ಮತ್ತು ...

ಬೆಂಗಳೂರು: ಮಾನವ ಕಳ್ಳ ಸಾಗಣೆ ಆರೋಪದ ಮೇಲೆ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಮಹಿಳಾ ಮತ್ತು ಮಾದಕದ್ರವ್ಯ ತಂಡದ ಪೊಲೀಸರು 38 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಈತ ಬಂಧಿಸಿ ವಶದಲ್ಲಿರಿಸಿಕೊಂಡಿದ್ದ ಸುಮಾರು 15 ಮಂದಿ ಮಹಿಳೆಯರನ್ನು ಬಿಡುಗಡೆಗೊಳಿಸಿದ್ದಾರೆ.

ಉಡುಪಿ ಮೂಲದ ಪ್ರವೀಣ್ ಶೆಟ್ಟಿ ನಾಗರಬಾವಿಯ ಪಾಪರೆಡ್ಡಿಪಾಳ್ಯದಲ್ಲಿ ವಾಸಿಸುತ್ತಿದ್ದು ಬಂಧಿತ ಆರೋಪಿಯಾಗಿದ್ದಾನೆ. ಆರ್ ಆರ್ ನಗರದ ನಾಗದೇವನಹಳ್ಳಿಯಲ್ಲಿ ಕೆಲವು ಮಹಿಳೆಯರನ್ನು ಅಕ್ರಮವಾಗಿ ಬಂಧಿಸಿಟ್ಟಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಇದರ ಆಧಾರದ ಮೇಲೆ ಕಳೆದ ಶನಿವಾರ ಮನೆಯೊಂದರ ಮೇಲೆ ದಾಳಿ ನಡೆಸಿದ ಪೊಲೀಸರು ಬೇರೆ ರಾಜ್ಯಗಳ 15 ಮಹಿಳೆಯರು ಬಂಧಿತರಾಗಿದ್ದನ್ನು ಕಂಡರು. ಅವರನ್ನು ರಕ್ಷಿಸಿದ ನಂತರ ಪ್ರವೀಣ್ ಶೆಟ್ಟಿ ಬಗ್ಗೆ ಸಿಸಿಬಿ ಪೊಲೀಸರಿಗೆ ತಿಳಿಸಿದರು. ಪ್ರವೀಣ್ ಶೆಟ್ಟಿ ಈ ಮಹಿಳೆಯರನ್ನು ಬೆಂಗಳೂರಿಗೆ ಕರೆತಂದಿದ್ದ.

ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಬಾರ್ಟೆಂಡರ್ ಕೆಲಸ ಕೊಡಿಸುವುದಾಗಿ ಪ್ರವೀಣ್ ಶೆಟ್ಟಿ ಕೆಲ ತಿಂಗಳ ಹಿಂದೆ ಈ ಮಹಿಳೆಯರನ್ನು ಕರೆತಂದಿದ್ದ. ಆದರೆ ಅವರಿಗೆ ಕೆಲಸ ಕೊಡಿಸದೆ ಒಂದು ಮನೆಯ ಕೋಣೆಯಲ್ಲಿ ಕೂಡಿ ಹಾಕಿದ್ದ. ಅವರು ನೀಡಿದ ಮಾಹಿತಿ ಮೇರೆಗೆ ಶೆಟ್ಟಿಯನ್ನು ಬಂಧಿಸಿದರು. ರಕ್ಷಿಸಲ್ಪಟ್ಟ ಮಹಿಳೆಯರಲ್ಲಿ ಮೂವರು ದೆಹಲಿ ಮೂಲದವರು ಮತ್ತೆ ಮೂವರು ಪಂಜಾಬ್ ಮೂಲದವರಾಗಿದ್ದಾರೆ. ಇನ್ನು ತಲಾ ನಾಲ್ವರು ಮುಂಬೈ ಮತ್ತು ರಾಜಸ್ತಾನದವರಾಗಿದ್ದಾರೆ. ಮತ್ತೊಬ್ಬಾಕೆ ಉತ್ತರ ಪ್ರದೇಶದವಳು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT