ರಾಜ್ಯ

ಟಿಪ್ಪು ಜಯಂತಿ ಆಚರಣೆ ವಿಚಾರ: ಸರ್ಕಾರದ ನಿಲುವಿನಲ್ಲಿ ಬದಲಾವಣೆಯಿಲ್ಲ; ಸಿಎಂ

Shilpa D
ಬೆಂಗಳೂರು:  ಟಿಪ್ಪು ಜಯಂತಿ ಆಚರಣೆ ವಿಚಾರದಲ್ಲಿ ರಾಜ್ಯ ಸರ್ಕಾರದ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಮುಖ್ಯಮಂತ್ರಿ ಕುಮಾರ ಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಸಿಎಂ ಕುಮಾರಸ್ವಾಮಿ, ಟಿಪ್ಪು ಜಯಂತಿ ವಿಷಯವನ್ನು ರಾಜಕೀಯಕರಣಗೊಳಿಸಲು ಯತ್ನಿಸುತ್ತಿರುವುದಕ್ಕೆ ಬೇಸರ ವ್ಯಕ್ತ ಪಡಿಸಿದರು. ನವೆಂಬರ್ 10 ರಂದು ನಡೆದ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಸಿಎಂ ಮತ್ತು ಡಿಸಿಎಂ ಗೈರಾಗಿದ್ದರು.
ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಗೈರಾಗಿದ್ದಕ್ಕೆ ವಿವರಣೆ ನೀಡಿದ ಅವರು, ಎಲ್ಲಾ ಕಾರ್ಯಕ್ರಮಗಳಿಗೂ ಹಾಜರಾಗಬೇಕೆಂಬ ಅವಶ್ಯಕತೆಯಿಲ್ಲ, ಸರ್ಕಾರದ ಪ್ರತಿನಿಧಿಗಳ ಸಮ್ಮುಖದಲ್ಲಿ ಅಧಿಕೃತ ಕಾರ್ಯಕ್ರಮಗಳು ನಡೆಯುತ್ತವೆ ಎಂದು ಹೇಳಿದ್ದಾರೆ.
ಮಡಿಕೇರಿಯಲ್ಲಿ  ಟಿಪ್ಪು ಜಯಂತಿ ವಿರೋಧಿಸಿ ನಡೆದ ಕಾರ್ಯಕ್ರಮದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಸ್ಥಳೀಯ ಕನ್ನಡ ಪತ್ರಿಕೆ ಸಂಪಾದಕರ ಮೇಲೆ ಕೇಸ್ ದಾಖಲಿಸಲಾಗಿದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ನನಗೆ ಪ್ರಕರಣದ ಬಗ್ಗೆ ಮಾಹಿತಿಯಿಲ್ಲ ಎಂದು ಹೇಳಿದ್ದಾರೆ.
SCROLL FOR NEXT