ಸಾಂದರ್ಭಿಕ ಚಿತ್ರ 
ರಾಜ್ಯ

ಉಪ ನೋಂದಣಾಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ, ನಗದು ವಶ

ಉಪ ನೋಂದಣಾಧಿಕಾರಿ ಕಚೇರಿ ಮೇಲೆ ಭ್ರಷ್ಟಾಚಾರ ನಿಯಂತ್ರಣ ದಳದ ಅಧಿಕಾರಿಗಳು ದಾಳಿ ನಡೆಸಿ, ಲೆಕ್ಕಕೆ ಸಿಗದೆ 83,500 ರೂ. ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ವಿಜಯಪುರ: ಉಪ ನೋಂದಣಾಧಿಕಾರಿ  ಕಚೇರಿ ಮೇಲೆ ಭ್ರಷ್ಟಾಚಾರ ನಿಯಂತ್ರಣ ದಳದ ಅಧಿಕಾರಿಗಳು ದಾಳಿ ನಡೆಸಿ, ಲೆಕ್ಕಕೆ ಸಿಗದೆ 83,500 ರೂ. ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮಿನಿ ವಿಧಾನಸೌಧದಲ್ಲಿರುವ ಉಪ ನೋಂದಣಾಧಿಕಾರಿ ಕಚೇರಿ ಮೇಲೆ ಎಸಿಬಿ ಎಸ್ಪಿ ಅಮರ್ ನಾಥ್ ರೆಡ್ಡಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ದಾಳಿ ವೇಳೆಯಲ್ಲಿ ಇಬ್ಬರು ಮಧ್ಯವರ್ತಿಗಳ ವಿರುದ್ಧ ಎಸಿಬಿ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.

ಕೆಸಿಎಸ್ ಆರ್ ಕಾಯ್ದೆ ಉಲ್ಲಂಘನೆ ಆರೋಪದಲ್ಲಿ ಉಪ ನೋಂದಣಾಧಿಕಾರಿ ಎನ್. ಸಿದ್ದರಾಮ್ ಹಾಗೂ ಕಚೇರಿ ಸಹಾಯಕ ಸಯ್ಯದ್ ಇನಾಂದಾರ್  ವಿರುದ್ದವೂ ಪ್ರಕರಣ ದಾಖಲಿಸಲಾಗಿದೆ.

ಈ ಕಾಯ್ಗೆ  ಪ್ರಕಾರ ಎಷ್ಟು ಹಣ ಪಡೆಯಲಾಗಿದೆ ಎಂಬುದನ್ನು ನೋಂದಣಿ ಪುಸ್ತಕದಲ್ಲಿ ಬರೆದಿಡಬೇಕಾಗುತ್ತದೆ. ಆದರೆ, ಪುಸ್ತಕವನ್ನು ಪರಾಮರ್ಶೆ ನಡೆಸಿದ ಲೆಕ್ಕದಲ್ಲಿ ಹೊಂದಾಣಿಕೆಯಾಗುತ್ತಿರಲಿಲ್ಲ. ಅಧಿಕಾರಿಗಳು ಅಧಿಕ ಪ್ರಮಾಣದಲ್ಲಿ ಹಣ ಪಡೆದಿರುವುದು ಕಂಡುಬಂದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT