ಆಂಬಿಡೆಂಟ್ ಕಂಪನಿ 
ರಾಜ್ಯ

ಆಂಬಿಡೆಂಟ್ ವಂಚನೆ ಪ್ರಕರಣದಲ್ಲಿ ಹೆಸರು ಬಳಕೆ: ಪೊಲೀಸ್ ಇಲಾಖೆ ಕ್ರಮಕ್ಕೆ ಇಡಿ ಆಕ್ಷೇಪ

ಬಹುಕೋಟಿ ಆ್ಯಂಬಿಡೆಂಟ್‌ ವಂಚನೆ ಪ್ರಕರಣದಿಂದ ಬಚಾವ್‌ ಆಗಲು ಆರೋಪಿಯು ಜಾರಿ ನಿರ್ದೇಶನಾಲಯದ (ಇ.ಡಿ) ನೆರವು ಕೋರಿದ್ದಾನೆ ಎಂಬ ಹೇಳಿಕೆಗೆ ...

ಬೆಂಗಳೂರು: ಬಹುಕೋಟಿ ಆ್ಯಂಬಿಡೆಂಟ್‌ ವಂಚನೆ ಪ್ರಕರಣದಿಂದ ಬಚಾವ್‌ ಆಗಲು ಆರೋಪಿಯು ಜಾರಿ ನಿರ್ದೇಶನಾಲಯದ (ಇ.ಡಿ) ನೆರವು ಕೋರಿದ್ದಾನೆ ಎಂಬ ಹೇಳಿಕೆಗೆ ಜಾರಿ ನಿರ್ದೇಶನಾಲಯ ತೀವ್ರ ಆಕ್ಷೇಪ ವ್ಯಕ್ತ ಪಡಿಸಿದೆ. 
ತಮ್ಮೊಂದಿಗೆ ಚರ್ಚಿಸದೆ ನೇರವಾಗಿ ಪತ್ರಿಕಾಗೋಷ್ಠಿಯಲ್ಲಿ ಆರೋಪ ಮಾಡಿರುವುದಕ್ಕೆ ನಗರ ಪೊಲೀಸ್ ಆಯುಕ್ತ ವಿರುದ್ಧ ಇ.ಡಿ ಜಂಟಿ ನಿರ್ದೇಶಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
ಈ ಕುರಿತು ನಗರ ಪೊಲೀಸ್‌ ಆಯುಕ್ತ ಸುನೀಲ್‌ ಕುಮಾರ್‌ ಅವರಿಗೆ ಪತ್ರ ಬರೆದಿರುವ ಇ.ಡಿ ಸಾಕ್ಷ್ಯಾಧಾರಗಳು ಇಲ್ಲದ ಮಾಹಿತಿಯನ್ನು ಬಹಿರಂಗಪಡಿಸುವ ಮೊದಲು ರಾಜ್ಯ ಪೊಲೀಸ್‌ ಇಲಾಖೆಯು ನಿರ್ದೇಶನಾಲಯವನ್ನು ಸಂಪರ್ಕಿಸುವ ಅಥವಾ ಆರೋಪದ ಅಂಶಗಳ ಕುರಿತು ಪರಿಶೀಲಿಸುವ ಪ್ರಯತ್ನವನ್ನು ಮಾಡಿಲ್ಲ,'' ಎಂದು ಬೇಸರ ವ್ಯಕ್ತ ಪಡಿಸಿದೆ.
'ಕೇಂದ್ರ ಹಣಕಾಸು ಸಚಿವಾಲಯದ ಕಂದಾಯ ಇಲಾಖೆಯಡಿ ಬರುವ ಜಾರಿ ನಿರ್ದೇಶನಾಲಯವು ಆರ್ಥಿಕ ಅಪರಾಧಗಳ ಕುರಿತು ತನಿಖೆ ನಡೆಸುವ ಪ್ರತಿಷ್ಠಿತ ಏಜೆನ್ಸಿಯಾಗಿದೆ. ಪೊಲೀಸ್‌ ಆಯುಕ್ತರ ಹೇಳಿಕೆ ಸಾರ್ವಜನಿಕ ವಲಯದಲ್ಲಿ ಏಜೆನ್ಸಿಯ ಘನತೆಗೆ ಧಕ್ಕೆ ಉಂಟು ಮಾಡಿದೆ,'' ಎಂದು ದೂರಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಳ್ಳಾರಿ ಫೈರಿಂಗ್: ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ್ಷ ಪರಿಹಾರ

ಆಗ Navy Seal.. ಈಗ ಡೆಲ್ಟಾ ಫೋರ್ಸ್: Venezuela ಅಧ್ಯಕ್ಷರ ಹೆಡೆಮುರಿ ಕಟ್ಟಿದ ಅಮೆರಿಕದ ಸೀಕ್ರೆಟ್ ಸೇನೆ! Video

ಕೆಟ್ಟ ದೃಷ್ಟಿಯಿಂದ 'ಮುಸ್ಲಿಂ ಮಹಿಳೆ' ಮುಟ್ಟವವರ ಕೈ ಕತ್ತರಿಸುತ್ತೇನೆ: AIMIM ನಾಯಕನ ಬೆದರಿಕೆ!

ʻರಿಪಬ್ಲಿಕ್ ಆಫ್ ಬಳ್ಳಾರಿʼಗೆ ಮತ್ತೆ ಅವಕಾಶ ನೀಡಲ್ಲ; ರೆಡ್ಡಿ ಕೋಟೆ ನಿರ್ಮಿಸಿಕೊಂಡಿದ್ದಾರೆ, ಅವರನ್ನು ಕೊಲ್ಲಲು ಸಾಧ್ಯವೇ?

ಹಾವೇರಿ: ಸುಂಟರಗಾಳಿಗೆ ಕುಸಿದ ಬೃಹತ್ ಪೆಂಡಾಲ್‌; ಸತೀಶ್ ಜಾರಕಿಹೊಳಿ ಸ್ವಲ್ಪದರಲ್ಲೇ ಪಾರು!

SCROLL FOR NEXT