ಅಜಿತಾಭ್ 
ರಾಜ್ಯ

ಟೆಕ್ಕಿ ಅಜಿತಾಭ್ ನಾಪತ್ತೆ ಪ್ರಕರಣ: ಕನ್ನಡ ದಾಖಲೆಗಳ ಭಾಷಾಂತರದಿಂದಾಗಿ ಸಿಬಿಐ ತನಿಖೆಯಲ್ಲಿ ವಿಳಂಬ

ಸಾಫ್ಟ್'ವೇರ್ ಇಂಜಿನಿಯರ್ ಅಜಿತಾಭ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ತನಿಖಾಧಿಕಾರಿಗಳು ಸಂಗ್ರಹಿಸಿದ್ದ ದಾಖಲೆಗಳ ಭಾಷಾಂತರದಿಂದಾಗಿ ರಾಷ್ಟ್ರೀಯ ತನಿಖಾ ದಳ (ಸಿಬಿಐ)ದ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸಲು ವಿಳಂಬವಾಗುತ್ತಿದೆ ಎಂದು ತಿಳಿದುಬಂದಿದೆ...

ಬೆಂಗಳೂರು: ಸಾಫ್ಟ್'ವೇರ್ ಇಂಜಿನಿಯರ್ ಅಜಿತಾಭ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ತನಿಖಾಧಿಕಾರಿಗಳು ಸಂಗ್ರಹಿಸಿದ್ದ ದಾಖಲೆಗಳ ಭಾಷಾಂತರದಿಂದಾಗಿ ರಾಷ್ಟ್ರೀಯ ತನಿಖಾ ದಳ (ಸಿಬಿಐ)ದ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸಲು ವಿಳಂಬವಾಗುತ್ತಿದೆ ಎಂದು ತಿಳಿದುಬಂದಿದೆ. 
ಪ್ರಕರಣ ಸಂಬಂಧ ಅಧಿಕಾರಿಗಳು ಈವರೆಗೂ 1,000 ಪುಟಗಳ ದಾಖಲೆಗಳನ್ನು ಕನ್ನಡದಲ್ಲಿ ಸಂಗ್ರಹಿಸಿದ್ದು, ಇದೀಗ ಈ ದಾಖಲೆಗಳನ್ನು ಇಂಗ್ಲೀಷ್ ಭಾಷೆಗೆ ಅನುವಾದ ಮಾಡುವ ಅಗತ್ಯವಿದ್ದು, ಈ ಹಿನ್ನಲೆಯಲ್ಲಿ ತನಿಖೆ ಮತ್ತಷ್ಟು ವಿಳಂಬವಾಗುವ ಸಾಧ್ಯಗಳಿವೆ ಎಂದು ವರದಿಗಳು ತಿಳಿಸಿವೆ. 
ಪ್ರಕರಣದ ತನಿಖೆಯನ್ನು ಈ ಹಿಂದೆ ಸಿಐಡಿ ಅಧಿಕಾರಿಗಳು ನಡೆಸುತ್ತಿದ್ದರು. ಪ್ರಕರಣ ಭೇದಿಸುವಲ್ಲಿ ಸಿಐಡಿ ಅಧಿಕಾರಿಗಳಿಗೆ ಸಾಧ್ಯವಾಗದ ಹಿನ್ನಲೆಯಲ್ಲಿ ಪ್ರಕರಣವನ್ನು ಹೈಕೋರ್ಟ್ ಸಿಬಿಐಗೆ ವಹಿಸಿತ್ತು. ಚೆನ್ನೈನಲ್ಲಿರುವ ಸಿಬಿಐ ಕಚೇರಿಗೆ ಭೇಟಿ ನೀಡಿದ ಅಧಿಕಾರಿಯೊಬ್ಬರು ಪ್ರಕರಣದ ಎಲ್ಲಾ ಕಡತಗಳು ಹಾಗೂ ದಾಖಲೆಗಳನ್ನು ಅಧಿಕಾರಿಗಳಿಗೆ ನೀಡಿದ್ದರು. ಪ್ರಸ್ತುತ ಅಧಿಕಾರಿ ಸಿಬಿಐಗೆ ನೀಡಿರುವ ಕಡತಗಳನ್ನು ಇಂಗ್ಲೀಷ್'ಗೆ ಭಾಷಾಂತರ ಮಾಡಲು ತಿಂಗಳು ಕಾಲ ತೆಗೆದುಕೊಳ್ಳುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. 
2017 ಡಿ.17 ರಂದು ಕುಮಾರ್ ಅಜಿತಾಭ್ ಅವರು ನಾಪತ್ತೆಯಾಗಿದ್ದರು, ಬಿಹಾರ ಮೂಲದವರಾಗಿರುವ ಅಜಿತಾಭ್ ಅವರು ಬೆಳ್ಳಂದೂರಿನ ಬ್ರಿಟೀಷ್ ಟೆಲಿಕಾಂನಲ್ಲಿ ಕಳೆದ 5 ವರ್ಷಗಳಿಂಕ ಕೆಲಸ ಮಾಡುತ್ತಿದ್ದರು. ಕೆಲ ದಿನಗಳ ಹಿಂದಷ್ಟೇ ತಮ್ಮ ಸಿಯಾಜ್ ಕಾರನ್ನು ಮಾರಟ ಮಾಡುವುದಾಗಿ ಒಎಲ್ಎಕ್ಸ್ ನಲ್ಲಿ ಪ್ರಕಟಿಸಿದ್ದರು. ಕಾರನ್ನು ಮಾರಾಟ ಮಾಡುವುದಾಗಿ ಪ್ರಕಟಿಸಿದ ಬಳಿಕ ಅಜಿತಾಭ್ ಕರೆ ಬಂದಾಗಲೆಲ್ಲಾ ಕಾರು ಸಮೇತ ಹೊರ ಹೋಗಿ ಬರುತ್ತಿದ್ದರು. 
ಡಿ.18 ರಂದೂ ಕೂಡ ಅಜಿತಾಭ್ ಅವರ ಮೊಬೈಲ್'ಗೆ ಕರೆ ಬಂದಿದೆ ಎಂದಿನಂತೆಯೇ ಕಾರಿನಲ್ಲಿ ಹೊರ ಹೋದ ಬಳಿಕ ಮತ್ತೆ ವಾಪಸ್ಸಾಗಿರಲಿಲ್ಲ. ಒಎಲ್ಎಕ್ಸ್ ನಲ್ಲಿ ಜಾಹೀರಾತು ನೋಡಿದ ಬಳಿಕ ಅಜಿತಾಭ್ ಅವರನ್ನು ದುಷ್ಕರ್ಮಿಗಳು ಅಪಹರಣ ಮಾಡಿದ್ದಾರೆಂದು ಕುಟುಂಬ ಸದಸ್ಯರು ಸಂಶಯ ವ್ಯಕ್ತಪಡಿಸುತ್ತಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT