ಲಾರಿ-ಬಸ್ ಡಿಕ್ಕಿ: 6 ಮುಂಬೈ ಪ್ರವಾಸಿಗರ ದುರ್ಮರಣ, 10 ಮಂದಿಗೆ ಗಾಯ 
ರಾಜ್ಯ

ಲಾರಿ-ಬಸ್ ಡಿಕ್ಕಿ: 6 ಮುಂಬೈ ಪ್ರವಾಸಿಗರ ದುರ್ಮರಣ, 10 ಮಂದಿಗೆ ಗಾಯ

ಲಾರಿ ಮತ್ತು ಖಾಸಗಿ ಬಸ್ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ, ರಾಜ್ಯದ ಪ್ರವಾಸಕ್ಕಾಗಿ ಬಂದಿದ್ದ ಮಹಾರಾಷ್ಟ್ರದ ಆರು ಮಂದಿ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಭದ್ರಾಪುರದಲ್ಲಿ...

ಹುಬ್ಬಳ್ಳಿ: ಲಾರಿ ಮತ್ತು ಖಾಸಗಿ ಬಸ್ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ, ರಾಜ್ಯದ ಪ್ರವಾಸಕ್ಕಾಗಿ ಬಂದಿದ್ದ ಮಹಾರಾಷ್ಟ್ರದ ಆರು ಮಂದಿ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಭದ್ರಾಪುರದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ. 
ಮುಂಬೈನ ಫಾಟ್ಕೋಪರ್ ಮತ್ತು ದಾದರ್ ಮೂಲದ ವಿಶ್ವನಾಥ ಮ್ಹಾತ್ರೆ (76), ದಿನಕರ ಮ್ಹಾತ್ರೆ (74), ರಮೇಶ ಜಯಮಾಲ (70), ಸುಮೇದಾ ಜಮಖಂಡಿಕರ (65), ಸುಚಿತ್ರಾ ರೌಲ್ (61), ಲಾಹು ಕೆಲೋಸ್ಕರ್ (65) ಮೃತಪಟ್ಟ ವ್ಯಕ್ತಿಗಳಾಗಿದ್ದಾರೆ. 
ಹುಬ್ಬಳ್ಳಿಯಿಂದ ಹಂಪಿಗೆ ತೆರಳುವಾಗ ಬೆಳಗಿನ ಜಾವ 5.30ರ ಸುಮಾರಿಗೆ ಭದ್ರಾಪುರ ಬಳಿ ಎಡಭಾಗದಲ್ಲಿ ಲಾರಿಯೊಂದು ಕೆಟ್ಟು ನಿಂತಿತ್ತು. ಇದಕ್ಕೆ ಬಸ್ ಗುದ್ದುವುದನ್ನು ತಪ್ಪಿಸಲು ಚಾಲಕ ಬಲಭಾಗಕ್ಕೆ ತಿರುಗಿಸಿದ್ದಾನೆ. ಈ ವೇಳೆ ಎದುರಿಗೆ ಬಂದ ಲಾರಿ ಡಿಕ್ಕಿ ಹೊಡೆದು, ಬಸ್ ಪಲ್ಟಿಯಾಗಿ ಘಟನೆ ಸಂಭವಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT