ಸಾಂದರ್ಭಿಕ ಚಿತ್ರ 
ರಾಜ್ಯ

ಉತ್ತರ ಕನ್ನಡ ಮೀನುಗಾರರ ಪ್ರತಿಭಟನೆ: ಗೋವಾ ಕಂಟೈನರ್ ಗಳನ್ನು ಹಿಂದಕ್ಕೆ ಕಳುಹಿಸಿದ ಪ್ರತಿಭಟನಾಕಾರರು

ಕರ್ನಾಟಕ- ಗೋವಾ ಭಾಗದ ಮಾಜಳಿ ಚೆಕ್ ಪೋಸ್ಟ್ ಬಳಿ ನಿನ್ನೆ ಜಿಲ್ಲೆಯ ವಿವಿಧ ಕಡೆಗಳಿಂದ ಬಂದಿದ್ದ ನೂರಾರು ಮೀನುಗಾರರು ಪ್ರತಿಭಟನೆ ನಡೆಸಿ, ಗೋವಾದಿಂದ ಬಂದಿದ್ದ ಐದು ಮೀನು ಕಂಟೈನರ್ ಗಳನ್ನು ತಡೆದು ಹಿಂದಕ್ಕೆ ಕಳುಹಿಸಿದರು.

ಕಾರವಾರ:  ಕರ್ನಾಟಕ- ಗೋವಾ ಭಾಗದ ಮಾಜಳಿ ಚೆಕ್ ಪೋಸ್ಟ್ ಬಳಿ  ನಿನ್ನೆ  ಜಿಲ್ಲೆಯ ವಿವಿಧ ಕಡೆಗಳಿಂದ ಬಂದಿದ್ದ ನೂರಾರು ಮೀನುಗಾರರು ಪ್ರತಿಭಟನೆ ನಡೆಸಿ, ಗೋವಾದಿಂದ ಬಂದಿದ್ದ ಐದು ಮೀನು ಕಂಟೈನರ್ ಗಳನ್ನು  ತಡೆದು ಹಿಂದಕ್ಕೆ ಕಳುಹಿಸಿದರು.

ಗೋವಾ ಸರ್ಕಾರ ಆರು ತಿಂಗಳ ಕಾಲ ಕರ್ನಾಟಕ ಸೇರಿದಂತೆ ಮತ್ತಿತರ ರಾಜ್ಯಗಳ ಮೀನುಗಳಿಗೆ ನಿರ್ಬಂಧ ವಿಧಿಸಿರುವುದರ  ವಿರುದ್ಧ ಗಡಿಯಲ್ಲಿ ಪ್ರತಿಭಟನೆ ನಡೆಸಿದ ಮೀನುಗಾರರು, ಇದು ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿದರು.

ಕರ್ನಾಟಕ ಸೇರಿದಂತೆ ಮತ್ತಿತರ ರಾಜ್ಯಗಳ ಮೀನುಗಳಿಗೆ ಆರು ತಿಂಗಳ ಕಾಲ ನಿರ್ಬಂಧ ವಿಧಿಸಿ ಗೋವಾ ಸರ್ಕಾರ ಕಳೆದ ವಾರ ಆದೇಶ ಹೊರಡಿಸಿತ್ತು.  ಕರ್ನಾಟಕದಲ್ಲಿನ ಮೀನುಗಳಲ್ಲಿ ಪಾರ್ಮಲಿನ್ ಅಂಶ ಹೆಚ್ಚಾಗಿರುವುದರಿಂದ ಅವುಗಳನ್ನು ನಿರ್ಬಂಧಿಸಲಾಗಿದೆ ಎಂದು ಗೋವಾ ಸರ್ಕಾರ ಹೇಳಿಕೆ ನೀಡಿತ್ತು. ಇದು ಜಿಲ್ಲೆಯಲ್ಲಿ ಮೀನುಗಾರಿಕೆಯನ್ನೇ ವೃತ್ತಿಯನ್ನಾಗಿ ಮಾಡಿಕೊಂಡಿರುವ ಸಮುದಾಯದ ಮೇಲೆ ಭಾರಿ ಪರಿಣಾಮ ಬೀರುತ್ತಿದೆ.

ಪ್ರತಿಭಟನೆ ಆರಂಭವಾಗಿನಿಂದಲೂ  ಗಡಿಯಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ. ಕಾರವಾರ ಮತ್ತು ಅಂಕೋಲದಲ್ಲಿ ನೂರಕ್ಕೂ ಹೆಚ್ಚು ಪ್ರತಿಭಟನಾಕಾರರು ನಿಯೋಜಿಸಲಾಗಿದೆ. ಗೋವಾ ಗಡಿ ಭಾಗದಲ್ಲೂ ಇದೇ ಪ್ರಮಾಣದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.  ಪೊಲೀಸರನ್ನು ಹೊರತುಪಡಿಸಿದಂತೆ ಅಗ್ನಿಶಾಮಕ , ಹಾಗೂ ಅಂಬ್ಯುಲೆನ್ಸ್ ವ್ಯವಸ್ಥೆಯನ್ನು ಸಹ ಕರ್ನಾಟಕದ ಗಡಿ ಭಾಗದಲ್ಲಿ ನಿಯೋಜಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT