ಕೃಷಿಮೇಳದಲ್ಲಿ ಮುಖ್ಯಮಂತ್ರಿ ಬಹುಮಾನ ವಿತರಣೆ 
ರಾಜ್ಯ

ಕೃಷಿ ಮೇಳಕ್ಕೆ ತೆರೆ: 13 ಲಕ್ಷಕ್ಕೂ ಹೆಚ್ಚಿನ ಜನರು ಭೇಟಿ, 5.82 ಕೋಟಿ ವ್ಯವಹಾರ

ಕೃಷಿ ವಿಶ್ವವಿದ್ಯಾಲದ ಆವರಣದಲ್ಲಿ ನಾಲ್ಕು ದಿನಗಳಿಂದ ನಡೆದ ಕೃಷಿ ಮೇಳಕ್ಕೆ ತೆರೆ ಬಿದ್ದಿದೆ. ನಿನ್ನೆ ಒಂದೇ ದಿನ 5.5 ಲಕ್ಷ ಜನರು ಭೇಟಿ ನೀಡಿದ್ದಾರೆ. ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸಹ ಕೃಷಿಮೇಳಕ್ಕೆ ಆಗಮಿಸಿ ಅತ್ಯುತ್ತಮ ಮಳಿಗೆ ಹಾಗೂ ಪ್ರದರ್ಶನಗಳಿಗೆ ಬಹುಮಾನ ವಿತರಿಸಿದರು.

ಬೆಂಗಳೂರು:  ಕೃಷಿ ವಿಶ್ವವಿದ್ಯಾಲದ ಆವರಣದಲ್ಲಿ ನಾಲ್ಕು ದಿನಗಳಿಂದ ನಡೆದ   ಕೃಷಿ ಮೇಳಕ್ಕೆ ತೆರೆ ಬಿದ್ದಿದೆ. ನಿನ್ನೆ ಒಂದೇ ದಿನ  5.5 ಲಕ್ಷ ಜನರು  ಭೇಟಿ ನೀಡಿದ್ದಾರೆ. ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸಹ ಕೃಷಿಮೇಳಕ್ಕೆ ಆಗಮಿಸಿ ಅತ್ಯುತ್ತಮ ಮಳಿಗೆ ಹಾಗೂ ಪ್ರದರ್ಶನಗಳಿಗೆ ಬಹುಮಾನ ವಿತರಿಸಿದರು.

ಕೃಷಿ ವಿಶ್ವವಿದ್ಯಾಲಯದ ಮಾಹಿತಿ ಪ್ರಕಾರ ನಾಲ್ಕು ದಿನಗಳ ಕೃಷಿ ಮೇಳ 13.10 ಲಕ್ಷ  ಜನ ಭೇಟಿ ನೀಡಿದ್ದು, , 750 ಮಳಿಗೆಗಳಿಂದ ದಾಖಲೆ ಪ್ರಮಾಣದಲ್ಲಿ 5  ಕೋಟಿ 82 ಲಕ್ಷ  ರೂಪಾಯಿ ವ್ಯವಹಾರ ಆಗಿದೆ.

 ಈ ಬಾರಿಯ ಕೃಷಿ ಮೇಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ  ಜನರು ಬಂದಿದ್ದು ಕೃಷಿ ಯಂತ್ರಗಳು, ನೀರಾವರಿ ಪರಿಕರ, ಸಸ್ಯ ವೈವಿಧ್ಯ, ಸಮಗ್ರ ಕೃಷಿ,  ಪಶು, ಕೋಳಿ ಸಾಕಣೆ, ಕೃಷಿ ಉದ್ಯಮ ಕ್ಷೇತ್ರಗಳ ಹೊಸ ಬೆಳವಣಿಗೆಗಳ ಕುರಿತು ಕುತೂಹಲಕರಿ ಮಾಹಿತಿ ವಿನಿಮಯ ಮೇಳದಲ್ಲಿ ನಡೆಯಿತು. ಆಹಾರ ಮಳಿಗೆಗಳಂತೂ ಯಾವಾಗಲೂ ಜನರಿಂದ ತುಂಬಿ ತುಳುಕುತ್ತಿದ್ದವು.

ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಕೃಷಿಯಲ್ಲಿ ಬದಲಾವಣೆ ತರಬೇಕು, ಅದಕ್ಕೆ ರೈತರು ಮಾನಸಿಕವಾಗಿ ಸಿದ್ಧರಾಗಬೇಕು. ಬದಲಾವಣೆಗೆ ತೆರೆದುಕೊಳ್ಳಬೇಕು, ಮುಂದೆ ಪ್ರದೇಶವಾರು ಸರಾಸರಿ ಮಳೆ ಪ್ರಮಾಣ ಅಂದಾಜಿಸಿ ಅದಕ್ಕನುಗುಣವಾಗಿ ಏನು ಬೆಳೆಯಬೇಕು ಎಂಬ ಬಗ್ಗೆ ರೈತರಿಗೆ ಸಲಹೆ ನೀಡುವ ಕಾರ್ಯಕ್ರಮವೂ ಇದೆ ಎಂದರು.

 ರಾಜ್ಯದಲ್ಲಿ ರೈತರಿಗೆ ವಿಮಾ ಸೌಲಭ್ಯ ಜಾರಿಗೆ ತರುವ ಚಿಂತನೆ ಇದೆ. ಬೆಳೆ ಸಮೀಕ್ಷೆ ಮಾಡಿಸಲಾಗುವುದು, ಶೂನ್ಯ ಬಂಡವಾಳದ ಕೃಷಿ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದು ಕೃಷಿ ಸಚಿವ ಶಿವಶಂಕರರೆಡ್ಡಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT