ಜಯಶ್ರೀ - ಕುಮಾರಸ್ವಾಮಿ 
ರಾಜ್ಯ

ರೈತ ಮಹಿಳೆಗೆ ಅವಮಾನ: ಸಿಎಂ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

ರೈತ ಮಹಿಳೆ ಬಗ್ಗೆ ನೀಡಿದ್ದ ವಿವಾದಾತ್ಮ ಹೇಳಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ...

ಬೆಂಗಳೂರು: ರೈತ ಮಹಿಳೆ ಬಗ್ಗೆ ನೀಡಿದ್ಧ ವಿವಾದಾತ್ಮ ಹೇಳಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಈಗ ಕಾನೂನು ಸಂಕಷ್ಟ ಎದುರಾಗಿದ್ದು, ಮಹಿಳೆಗೆ ಅವಮಾನ ಮಾಡಿದ ಆರೋಪದ ಮೇಲೆ ಸಿಎಂ ವಿರುದ್ಧ ದೂರು ದಾಖಲಾಗಿದೆ.
ಬೆಂಗಳೂರು ಮೂಲದ ಕರ್ನಾಟಕ ಕಾರ್ಮಿಕ ಕಲ್ಯಾಣ ಪ್ರತಿಷ್ಠಾನ ಸಿಎಂ ವಿರುದ್ಧ ದೂರು ದಾಖಲಿಸಿದ್ದು, ಮಹಿಳೆಯರ ಗೌರವಕ್ಕೆ ಧಕ್ಕೆ ತಂದ ಆರೋಪದಡಿ ಐಪಿಸಿ ಸೆಕ್ಷನ್ 504 ಹಾಗೂ 509 ಅಡಿ ಕುಮಾರಸ್ವಾಮಿ ವಿರುದ್ಧ ಸೂಕ್ತ ತನಿಖೆ ನಡೆಸಿ, ಕ್ರಮಕೈಗೊಳ್ಳುವಂತೆ ಡಿಜಿ-ಐಜಿಪಿ ನೀಲಮಣಿ ಎನ್. ರಾಜು ಅವರಿಗೆ ಮನವಿ ಮಾಡಲಾಗಿದೆ. ಅಲ್ಲದೆ ಮಾನವ ಹಕ್ಕು ಆಯೋಗಕ್ಕೂ ಸಿಎಂ ವಿರುದ್ಧ ದೂರು ನೀಡಲಾಗಿದೆ.
ಸಿಎಂ ವಿರುದ್ಧ ದೂರು ದಾಖಲಿಸಿಕೊಂಡ ಬಗ್ಗೆ ಡಿಜಿ-ಐಜಿಪಿ ಕಚೇರಿಯಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ.
ಕಬ್ಬಿಗೆ ಬೆಂಬಲ ಬೆಲೆ ನೀಡಬೇಕು ಮತ್ತು ಕಬ್ಬಿನ ಬಾಕಿ ಬಿಲ್ ಪಾವತಿಗೆ ಒತ್ತಾಯಿಸಿ ಕಳೆದ ಭಾನುವಾರ ಬೆಳಗಾವಿಯಲ್ಲಿ ಪ್ರತಿಭಟಿಸುತ್ತಿದ್ದ ರೈತ ಮಹಿಳೆ ಜಯಶ್ರೀ ಅವರಿಗೆ, ನಾಲ್ಕು ವರ್ಷದಿಂದ ಎಲ್ಲಿ ಮಲಗಿದ್ದೆ ತಾಯಿ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರೆನ್ಸಿ ನೋಟುಗಳಿಂದ ಗಾಂಧೀಜಿ ಚಿತ್ರ ತೆಗೆದುಹಾಕಲು ಸರ್ಕಾರ ಚಿಂತನೆ, ಉನ್ನತ ಮಟ್ಟದ ಸಭೆ ಕೂಡ ನಡೆದಿದೆ: ಸಿಪಿಎಂ ಸಂಸದ ಜಾನ್ ಬ್ರಿಟಾಸ್

ಭಾರತ-ನ್ಯೂಜಿಲ್ಯಾಂಡ್ ಮುಕ್ತ ವ್ಯಾಪಾರ ಒಪ್ಪಂದ: 3 ತಿಂಗಳಲ್ಲಿ ಜಾರಿ, ಇದರಿಂದ ಲಾಭವೇನು?

ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು 'ಗ್ರೈಂಡರ್' ನಲ್ಲಿ ರುಬ್ಬಿ, ಚರಂಡಿಗೆ ಎಸದ ಪತ್ನಿ!

ರಘುನಾಥ್‌ ಹತ್ಯೆ ಕೇಸ್‌: TTD ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು- DYSP ಸೇರಿ ಮೂವರನ್ನು ಬಂಧಿಸಿದ ಸಿಬಿಐ

'ಬಿಹಾರದ ಪ್ರಗತಿ' ನೋಡಿ ಸಂತೋಷ: ಮತ್ತೆ NDA ಸರ್ಕಾರ ಹೊಗಳಿದ ಕಾಂಗ್ರೆಸ್ ಸಂಸದ ಶಶಿ ತರೂರ್ !

SCROLL FOR NEXT