ಸಂಗ್ರಹ ಚಿತ್ರ 
ರಾಜ್ಯ

ಗೃಹ ರಕ್ಷಕ ದಳ ಮಹಿಳಾ ಸಿಬ್ಬಂದಿ ಮೇಲೆ ಅತ್ಯಾಚಾರ ಆರೋಪ: ಪೇದೆ ಬಂಧನ

ಇತ್ತೀಚೆಗೆ ಶತಕವೀರ ಸರಗಳ್ಳ ನನ್ನು ಸೆರೆ ಹಿಡಿದು ಬೈಕ್ ಬಹುಮಾನ ಪಡೆದುಕೊಂಡಿದ್ದ ಜ್ಞಾನಭಾರತಿ ಠಾಣೆಯ ಮುಖ್ಯ ಪೇದೆ ಚಂದ್ರಕುಮಾರ್ ಅವರು, ತನ್ನ ಪರಿಚಿತ ಗೃಹ ರಕ್ಷಕ ದಳದ ಮಹಿಳಾ ಸಿಬ್ಬಂದಿ ಮೇಲೆ ಅತ್ಯಾಚಾರವೆಸಗಿದ...

ಬೆಂಗಳೂರು: ಇತ್ತೀಚೆಗೆ ಶತಕವೀರ ಸರಗಳ್ಳ ನನ್ನು ಸೆರೆ ಹಿಡಿದು ಬೈಕ್ ಬಹುಮಾನ ಪಡೆದುಕೊಂಡಿದ್ದ ಜ್ಞಾನಭಾರತಿ ಠಾಣೆಯ ಮುಖ್ಯ ಪೇದೆ ಚಂದ್ರಕುಮಾರ್ ಅವರು, ತನ್ನ ಪರಿಚಿತ ಗೃಹ ರಕ್ಷಕ ದಳದ ಮಹಿಳಾ ಸಿಬ್ಬಂದಿ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇರೆಗೆ ಸೋಮವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾರೆ. 
ನಂದಿನಿ ಲೇಔಟ್ ಠಾಣಾ ವ್ಯಾಪ್ತಿಯ ನಿವಾಸಿ 27 ವರ್ಷದ ಸಂತ್ರಸ್ತೆ ನೀಡಿದೆ ದೂರಿನ ಮೇರೆಗೆ ಚಂದ್ರಕುಮಾರ್ ಅವರನ್ನು ಬಂಧಿಸಿದ ಪೊಲೀಸರು, ಸೋಮವಾರ ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದಾರೆ. 
ಮೂರು ದಿನಗಳ ಹಿಂದೆ ಕರ್ತವ್ಯ ಮುಗಿಸಿದ ಬಳಿಕ ಸಂತ್ರಸ್ತೆಯ ಮನೆಗೆ ನುಗ್ಗಿ ಆರೋಪಿ ಈ ಕೃತ್ಯ ಎಸಗಿದ್ದಾನೆಂದು ದೂರಿನಲ್ಲಿ ಹೇಳಿಕೊಳ್ಳಲಾಗಿದೆ. 
ಒಂದೇ ಕಡೆ ಕೆಲಸ ಮಾಡುತ್ತಿದ್ದರಿಂದ ಗೃಹ ರಕ್ಷಕ ಸಿಬ್ಬಂದಿಗೆ ಮುಖ್ಯ ಪೇದೆ ಚಂದ್ರಕುಮಾರ್ ಅವರ ಪರಿಚಯವಿತ್ತು. ಈ ಗೆಳೆತನದಲ್ಲೇ ನ.2 ರಂದು ಜ್ಞಾನಭಾರತಿ ವಿಶ್ವವಿದ್ಯಾಲಯದ ಆವರಣದಲ್ಲಿ ಭದ್ರತಾ ಕರ್ತವ್ಯ ಮುಗಿಸಿದ ಬಳಿಕ ಆಕೆಯನ್ನು ಮನೆಗೆ ಚಂದ್ರಕುಮಾರ್ ಡ್ರಾಪ್ ಮಾಡಿದ್ದ. ಹೀಗೆ ಅವರಿಬ್ಬರ ಮಧ್ಯೆ ಆತ್ಮೀಯತೆ ಮೂಡಿತ್ತು ಎಂದು ಹೇಳಲಾಗುತ್ತಿದೆ. 
ಇದಾದ ನಂತರ ನ.16ರ ರಾತ್ರಿ 8.15ರ ಸುಮಾರಿಗೆ ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ಗೃಹ ರಕ್ಷಕ ಸಿಬ್ಬಂದಿಯನ್ನು ಅಡ್ಡಗಟ್ಟಿ ಚಂದ್ರಕುಮಾರ್ ಅಸಭ್ಯವಾಗಿ ನಡೆದುಕೊಂಡಿದ್ದಾನೆ. ಈ ನಡವಳಿಕೆಯಿಂದ ಬೇಸರಗೊಂಡ ಸಂತ್ರಸ್ತೆ, ಪೇದೆ ವಿರುದ್ಧ ಮೌಖಿಕ ದೂರು ನೀಡಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಅಧಿಕಾರಿಗಳು, ಇಬ್ಬರಿಗೂ ಬುದ್ಧಿವಾದ ಹೇಳಿದ್ದರು. ಅಲ್ಲದೆ, ಮತ್ತೆ ಈ ರೀತಿ ವರ್ತನೆ ತೋರಿದರೆ, ಶಿಸ್ತು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದರು. 
ದೂರು ಕೊಟ್ಟಿದ್ದರಿಂದ ತೀವ್ರವಾಗಿ ಕೆಂಡಾಮಂಡಲಗೊಂಡಿದ್ದ ಚಂದ್ರಶೇಖರ್ ಅಂದು ರಾತ್ರಿ 9.30ರ ಸುಮಾರಿಗೆ ಗೃಹ ರಕ್ಷಕಿ ಮನೆಗೆ ತೆರಳಿ ಆಕೆ ಮೇಲೆ ಅತ್ಯಾಚಾರವೆಸಗಿದ್ದಾನೆ. ವಿವಾಹಿತೆಯಾದ ಸಂತ್ರಸ್ತೆ, ಪತಿ ಬಂದಿರಬೇಕು ಎಂದು ಬಾಗಿಲು ತೆರೆದಾಗ ಬಲವಂತವಾಗಿ ಒಳ ಪ್ರವೇಶಿಸಿದ ಆರೋಪಿ, ಆಕೆಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆಂದು ಆರೋಪಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ಇದೆಂಥಾ ಕ್ರೌರ್ಯ: ಮದ್ಯ ಮಾರಾಟ ನಿಷೇಧ ಉಲ್ಲಂಘಿಸಿದ್ದ ಬ್ರಾಹ್ಮಣನ ಟೀಕಿಸಿ ಪೋಸ್ಟ್; OBC ವ್ಯಕ್ತಿಗೆ ಅದೇ ಬ್ರಾಹ್ಮಣನ ಪಾದ ತೊಳೆದು ನೀರು ಕುಡಿಯುವ ಶಿಕ್ಷೆ!

ಗುಜರಾತ್‌ನಲ್ಲಿ ಎಎಪಿ ರೈತರ ರ್ಯಾಲಿಯಲ್ಲಿ ಹಿಂಸಾಚಾರ; ಕಲ್ಲು ತೂರಿದ ರೈತರು, 3 ಪೊಲೀಸರಿಗೆ ಗಾಯ

SCROLL FOR NEXT