ಸಾಂದರ್ಭಿಕ ಚಿತ್ರ 
ರಾಜ್ಯ

ವಿಜಯಪುರ: ಲಾರಿ-ಬೊಲೆರೊ ಅಪಘಾತದಲ್ಲಿ ಐವರು ಸಾವು, ಇಬ್ಬರಿಗೆ ಗಂಭೀರ ಗಾಯ

ಬಬಲೇಶ್ವರದ ಹೊನಗನಹಳ್ಳಿ ಹೊರವಲಯದಲ್ಲಿ ಸಂಭವಿಸಿದ ಅಪಘಾತದಲ್ಲಿ ಐವರು ಮೃತಪಟ್ಟು ಇಬ್ಬರು ಗಾಯಗೊಂಡಿರುವ ಘಟನೆ ಕಳೆದ ತಡರಾತ್ರಿ ನಡೆದಿದೆ...

ವಿಜಯಪುರ: ಬಬಲೇಶ್ವರದ ಹೊನಗನಹಳ್ಳಿ ಹೊರವಲಯದಲ್ಲಿ ಸಂಭವಿಸಿದ ಅಪಘಾತದಲ್ಲಿ ಐವರು ಮೃತಪಟ್ಟು ಇಬ್ಬರು ಗಾಯಗೊಂಡಿರುವ ಘಟನೆ ಕಳೆದ ತಡರಾತ್ರಿ ನಡೆದಿದೆ.

ಏಳು ಮಂದಿ ದಿನಗೂಲಿ ನೌಕರರನ್ನು ಹೊತ್ತು ಸಾಗುತ್ತಿದ್ದ ಬೊಲೆರೋ ಪಿಕ್ಅಪ್ ವಾಹನ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ. ಲಾರಿ ಚಾಲಕ ಮತ್ತು ಕ್ಲೀನರ್ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಎಲ್ಲಾ ಏಳು ಮಂದಿ ದಿನಗೂಲಿ ನೌಕರರು ಪುಣೆಗೆ ಸೇರಿದವರಾಗಿದ್ದಾರೆ.ಇವರು ವಿಜಯಪುರ ಮತ್ತು ಬಾಗಲಕೋಟೆ ಮಧ್ಯೆ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ರಸ್ತೆ ದ್ವಿಗುಣಗೊಳಿಸುವ ಕಾಮಗಾರಿಯಲ್ಲಿ ಗುತ್ತಿಗೆ ನೌಕರರಾಗಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದರೆ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು. ಪೊಲೀಸರು ಮೃತಪಟ್ಟವರನ್ನು ಗುರುತಿಸಬೇಕಾಗಿದ್ದು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಲಾರಿ ಚಾಲಕನ ವಿರುದ್ಧ ಕೇಸು ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT