ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 
ರಾಜ್ಯ

ಎಸ್ ಎಸ್ ಎಲ್ ಸಿ ಅಂಕಪಟ್ಟಿ ಇನ್ನು ಮುಂದೆ ವಾಟರ್ ಪ್ರೂಫ್, ಫೈರ್ ಪ್ರೂಫ್

ಇನ್ನು ಮುಂದೆ ಹತ್ತನೇ ತರಗತಿ ಅಂಕಪಟ್ಟಿಗಳು ಹೆಚ್ಚು ಸುರಕ್ಷಿತವಾಗಿರಲಿದೆ. ಕರ್ನಾಟಕ ಪ್ರೌಢ ಶಿಕ್ಷಣ ...

ಬೆಂಗಳೂರು: ಇನ್ನು ಮುಂದೆ ಹತ್ತನೇ ತರಗತಿ ಅಂಕಪಟ್ಟಿಗಳು ಹೆಚ್ಚು ಸುರಕ್ಷಿತವಾಗಿರಲಿದೆ. ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಅಂಕಪಟ್ಟಿಯನ್ನು ನೀರು ಬಿದ್ದರೆ, ಅಗ್ನಿ ಅವಘಡಕ್ಕೆ ಒಳಗಾದರೆ ಹಾಳಾಗದಂತೆ ತಯಾರಿಸಲಿದೆ. ಈ ವರ್ಷದ ಮಾರ್ಚ್/ ಏಪ್ರಿಲ್ ಪರೀಕ್ಷೆಯಿಂದಲೇ ಜಾರಿಗೆ ತರಲು ಮಂಡಳಿ ಮುಂದಾಗಿದೆ. ಇದು ಜಾರಿಗೆ ಬಂದರೆ ಇನ್ನು ಮುಂದೆ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ಹಾಳಾಗುತ್ತದೆ ಎಂದು ಚಿಂತಿಸಬೇಕಾಗಿಲ್ಲ.

ಇಲ್ಲಿಯವರೆಗೆ ಎಸ್ ಎಸ್ ಎಲ್ ಸಿ ಅಂಕಪಟ್ಟಿಯನ್ನು ಲ್ಯಾಮಿನೇಟ್ ಮಾಡಿ ನೀಡಲಾಗುತ್ತಿತ್ತು. ಆದರೆ ಲ್ಯಾಮಿನೇಟ್ ಮಾಡಿ ನೀಡಿದರೆ ಸಾಕಾಗುವುದಿಲ್ಲ, ಬೇಗನೆ ಹಾಳಾಗಿ ಹೋಗುತ್ತದೆ ಎಂಬ ದೂರುಗಳು ಬರುತ್ತಿದ್ದವು. ಎಸ್ ಎಸ್ ಎಲ್ ಸಿ ಸರ್ಟಿಫಿಕೇಟ್ ಪ್ರತಿಯೊಬ್ಬರಿಗೂ ಮುಖ್ಯವಾಗುತ್ತದೆ. ಹೀಗಾಗಿ ನೀರು ಬಿದ್ದರೂ ಹಾಳಾಗದ ಅಂಕಪಟ್ಟಿಯನ್ನು ವಿದ್ಯಾರ್ಥಿಗಳಿಗೆ ಈ ವರ್ಷದಿಂದ ನೀಡುತ್ತಿದ್ದೇವೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕಿ ವಿ ಸುಮಂಗಲಾ ಹೇಳಿದರು.

ಪದವಿ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯಗಳಲ್ಲಿ ಯಾವ ರೀತಿ ಸುರಕ್ಷತೆಯ ಅಂಕಪಟ್ಟಿ ನೀಡುವ ಬಗ್ಗೆ ಮಾಹಿತಿ ಪಡೆಯಲು ಮಂಡಳಿ ಮುಂದಾಗಿದೆ. ಇದಕ್ಕಾಗಿ ಟೆಂಡರ್ ಆಹ್ವಾನಿಸಲಿದೆ. ಈ ವರ್ಷ ನೀರು ಬಿದ್ದರೆ ಹಾಳಾಗದಂತಹ ಮುಂದಿನ ವರ್ಷ ಟೀರ್ ಪ್ರೂಫ್ ಮತ್ತು ಅದಕ್ಕಿಂತ ಮುಂದಿನ ವರ್ಷ ಫೈರ್ ಪ್ರೂಫ್ ಅಂಕಪಟ್ಟಿಗಳನ್ನು ಹಂತ ಹಂತವಾಗಿ ಜಾರಿಗೊಳಿಸಲು ಮಂಡಳಿ ಮುಂದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT