ಸಾಂದರ್ಭಿಕ ಚಿತ್ರ 
ರಾಜ್ಯ

'ರಾಷ್ಟ್ರೀಯ ಸ್ವಚ್ಛ ವಿದ್ಯಾಲಯ' ಪುರಸ್ಕಾರ: ಈ ಬಾರಿ ರಾಜ್ಯದ ಯಾವ ಶಾಲೆಗೂ ಇಲ್ಲ!

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಬಿಡುಗಡೆ ಮಾಡಿರುವ 2017-18 ನೇ ಸಾಲಿನ ಸ್ವಚ್ಛ ವಿದ್ಯಾಲಯ ಪುರಸ್ಕಾರ ಪಟ್ಟಿಯಲ್ಲಿ ರಾಜ್ಯದ ಯಾವುದೇ ಶಾಲೆಗಳು ಸ್ಥಾನ ಪಡೆದಿಲ್ಲ

ಬೆಂಗಳೂರು: ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಬಿಡುಗಡೆ ಮಾಡಿರುವ 2017-18 ನೇ ಸಾಲಿನ  ಸ್ವಚ್ಛ ವಿದ್ಯಾಲಯ ಪುರಸ್ಕಾರ ಪಟ್ಟಿಯಲ್ಲಿ ರಾಜ್ಯದ ಯಾವುದೇ ಶಾಲೆಗಳು ಸ್ಥಾನ ಪಡೆದಿಲ್ಲ.ರಾಜ್ಯದಲ್ಲಿ 48 ಸಾವಿರ ಸರ್ಕಾರಿ ಶಾಲೆಗಳು ಹಾಗೂ 3 ಸಾವಿರ ಖಾಸಗಿ ಶಾಲೆಗಳಿದ್ದರೂ ಯಾವ ಶಾಲೆಗೂ ಈ ಪ್ರಶಸ್ತಿ ದಕ್ಕಿಲ್ಲ.

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಯ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ದೇಶಾದ್ಯಂತ 52 ಶಾಲೆಗಳು  ರಾಷ್ಟ್ರೀಯ ಸ್ವಚ್ಛ ವಿದ್ಯಾಲಯ ಪುರಸ್ಕಾರಕ್ಕೆ ಆಯ್ಕೆ ಯಾಗಿವೆ. ರಾಜ್ಯದಿಂದಲೂ 38 ಶಾಲೆಗಳಿಂದ ಅರ್ಜಿ ಸಲ್ಲಿಸಲಾಗಿತ್ತು ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.

ಆದಾಗ್ಯೂ, ಅಂತಿಮ ಪಟ್ಟಿಯಲ್ಲಿ ರಾಜ್ಯದ ಯಾವುದೇ ಶಾಲೆಯೂ ಪ್ರಶಸ್ತಿ ಏಕೆ ದೊರೆಯಲಿಲ್ಲ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವಾಲಯವನ್ನು ಕೇಳಲು ಇಲಾಖೆ ನಿರ್ಧರಿಸಿದೆ. ಈ ಬಾರಿ 38 ಶಾಲೆಗಳ ಹೆಸರನ್ನು ಪ್ರಶಸ್ತಿ ಪಟ್ಟಿಗೆ ಸೇರಿಸಲು ಕಳುಹಿಸಲಾಗಿತ್ತು ಎಂದು ಸರ್ವ ಶಿಕ್ಷ ಅಭಿಯಾನದ ರಾಜ್ಯ ಯೋಜನಾ ನಿರ್ದೇಶಕ ಡಾ. ರೇಜು ಹೇಳಿದ್ದಾರೆ.

ಪ್ರಶಸ್ತಿಗಾಗಿ ಹೇಗೆ ಆಯ್ಕೆ ನಡೆಯುತ್ತದೆ.

ಸ್ವಚ್ಛ ಭಾರತ ಅಭಿಯಾನದಡಿಯಲ್ಲಿ 2014-15ರ ಶೈಕ್ಷಣಿಕ  ವರ್ಷದಿಂದ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಶಾಲೆಯ ನೀರು , ಒಳಚರಂಡಿ ಹಾಗೂ ನೈರ್ಮಲ್ಯ ವ್ಯವಸ್ಥೆ ಪರಿಶೀಲಿಸಲಾಗುತ್ತದೆ.
ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವಾಯದ ಸಮಿತಿ ಆಯ್ದ ಶಾಲೆಗಳಿಗೆ ಭೇಟಿ ನೀಡುತ್ತದೆ. ಎಲ್ಲಾ ಶಾಲೆಗಳಲ್ಲೂ ಬಾಲಕಿಯರು ಹಾಗೂ ಬಾಲಕಿಯರಿಗೆ ಪ್ರತ್ಯೇಕವಾದ ಶೌಚಾಲಯ ಇರಬೇಕಾಗುತ್ತದೆ. ಮಕ್ಕಳ ನಡವಳಿ ಸೇರಿದಂತೆ ಶಾಲೆಗಳಲ್ಲಿ ನೈರ್ಮಲ್ಯ, ಸುರಕ್ಷತೆಗೆ ಒತ್ತು ನೀಡಬೇಕಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT