ಗ್ಯಾಂಗ್ ವಾರ್ ನಡೆದ ಸ್ಥಳ 
ರಾಜ್ಯ

ಬೆಂಗಳೂರು: ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳ ಬರ್ಬರ ಹತ್ಯೆ

ಹಳೇ ದ್ವೇಷದ ಹಿನ್ನೆಲೆಯಲ್ಲಿ ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳು ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಬನ್ನೇರುಘಟ್ಟ ರಸ್ತೆಯ ವೀವರ್ಸ್ ಕಾಲೋನಿಯಲ್ಲಿ ಬುಧವಾರ ನಡೆದಿದೆ.

ಬೆಂಗಳೂರು: ಹಳೇ  ದ್ವೇಷದ ಹಿನ್ನೆಲೆಯಲ್ಲಿ ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳು ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಬನ್ನೇರುಘಟ್ಟ ರಸ್ತೆಯ ವೀವರ್ಸ್ ಕಾಲೋನಿಯಲ್ಲಿ ಬುಧವಾರ ನಡೆದಿದೆ.

ಪೊಲೀಸರ ಮೇಲೆ ದಾಳಿ ನಡೆಸಿದ ಪ್ರಮುಖ ಆರೋಪಿಯ ಎರಡು ಕಾಲುಗಳಿಗೆ ಗುಂಡು ಹಾರಿಸಲಾಗಿದ್ದು, 11 ಮಂದಿ ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ.

 ಮುರುಗಾ (34) ಹಾಗೂ ಪಳನಿ (30) ಹತ್ಯೆಗೀಡಾದ ರೌಡಿಗಳು. ವೀವರ್ಸ್ ಕಾಲೋನಿ ನಿವಾಸಿಗಳಾದ ಇವರ ಮೇಲೆ  ಹುಳಿಮಾವು ಹಾಗೂ ಅತ್ತಿಬೆಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಮಧ್ಯೆ ಮುರುಗಾ ಕೊಲೆಯತ್ನ ಪ್ರಕರಣದಲ್ಲಿ ಆರೋಪಿಯಾಗಿದ್ದ.

ಪ್ರಮುಖ ಆರೋಪಿ ಬಿಟಿಎಸ್ ಮಂಜ (28) ಕೊಣನಕುಂಟೆಯ ರೌಡಿಯಾಗಿದ್ದು, ನಿನ್ನೆ  ಬನ್ನೇರುಘಟ್ಟ ರಸ್ತೆಯ ನೈಸ್ ರಸ್ತೆಯ ಅಂಜನಪುರ ಬಸ್ ನಿಲ್ದಾಣದಲ್ಲಿ ಪೊಲೀಸರು ಗುಂಡು ಹಾರಿಸಿದ್ದರು. ದಾಳಿ ವೇಳೆಯಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸುಬ್ರಮಣಿ ತೀವ್ರವಾಗಿ ಗಾಯಗೊಂಡಿದ್ದಾರೆ.

ಮುರುಗಾ ಮತ್ತು ಪಳನಿ ತನ್ನಿಬ್ಬರು ಬೆಂಬಲಿಗರೊಂದಿಗೆ ವೀವರ್ಸ್ ಕಾಲೋನಿಯ ಚೈತ್ರೇಶ್ವರ್ ಬಾರ್ ಮತ್ತು ರೆಸ್ಟೋರೆಂಟ್ ನಲ್ಲಿರುವಾಗ ಬುಧವಾರ ರಾತ್ರಿ 10-30 ರ ಸುಮಾರಿನಲ್ಲಿ ಎರಗಿದ 12 ಮಂದಿ ಹಂತಕರ ಪಡೆ ದಾಳಿ ನಡೆಸಿ ಹತ್ಯೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ .

ತಮಿಳುನಾಡಿಗೆ ಹೋಗಲು ಅಂಜನಪುರ  ನಿಲ್ದಾಣದಲ್ಲಿ  ಬಸ್ಸಿಗಾಗಿ ಕಾಯುತ್ತದ್ದ ಮಂಜನನ್ನು ಹಿಡಿಯಲು ಪೊಲೀಸರು ಪ್ರಯತ್ನಿಸಿದ್ದಾರೆಯ ಆದರೆ, ಆತ  ಕಾನ್ಸ್ ಟೇಬಲ್ ಮೇಲೆ ಖಾರದ ಪುಡಿ ಎರಚಿ  ಪಿಎಸ್ ಐ ಸುಬ್ರಮಣಿ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ ಎಸಿಪಿ ಹಾಗೂ ಪಿಎಸ್ ಐ ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಇತರ 11 ಮಂದಿ ಆರೋಪಿಗಳು ಕೋಣನಕುಂಟೆ ಪೊಲೀಸರ ಮುಂದೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

7 ವರ್ಷದ ಹಳೆಯ ದ್ವೇಷ

ಮಂಜ ವೀವರ್ಸ್ ಕಾಲೋನಿಯಲ್ಲಿ ಹುಟ್ಟಿ ಬೆಳೆದಿದ್ದರೆ, ತಮಿಳುನಾಡಿನಿಂದ ಬಂದಿದ್ದ ಮುರುಗಾ  15 ವರ್ಷದಿಂದಲೂ ಅಲ್ಲಿಯೇ ವಾಸಿಸುತ್ತಿದ್ದ. ಆತ ತನ್ನದೇ ಆದ ಗ್ಯಾಂಗ್ ಕಟ್ಟಿಕೊಂಡಿದ್ದ. 2011ರಲ್ಲಿ ಗ್ಯಾಂಬ್ಲಿಗ್ ವಿಚಾರವಾಗಿ ಇಬ್ಬರ ನಡುವೆ ಮೊದಲ ಬಾರಿಗೆ ಇಬ್ಬರ ನಡುವೆ ವಾಗ್ವಾದ ನಡೆದಿತ್ತು.

ಮುರುಗಾನನ್ನು ಕೊಲೆ ಮಾಡಲೆಂದ ನಿರ್ಧರಿಸಿ ಆತನ ಮನೆಗೆ ಮಂಜ ಹೋಗಿದ್ದ. ಆದರೆ, ಅಲ್ಲಿ ಆತ ಇರಲಿಲ್ಲ. ಆದರಿಂದ ಮುರುಗಾನ ಸಹೋದರ ಅಯ್ಯನಾರ್ ಮೇಲೆ ಮಂಜ ದಾಳಿ ನಡೆಸಿದ್ದರಿಂದ ಆತ ಎರಡು ತಿಂಗಳು ಕೋಮಾದಲ್ಲಿದ್ದ. ನಂತರ 2012ರಲ್ಲಿ ಮಂಜನನ್ನು ಬಂಧಿಸಲಾಗಿತ್ತು ಎಂದು ಪೊಲೀಸ್ ಮೂಲಗಳು ಹೇಳಿವೆ.

 ಮಂಜ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ಮೇಲೆ  ಸಹೋದರ ಮೇಲಿನ ದಾಳಿಯ ಸೇಡು ತೀರಿಸಿಕೊಳ್ಳೆಂದು ಕಾಯುತ್ತಿದ್ದ ಮುರುಗಾ  ಮಂಜನ ಮೇಲೆ ದಾಳಿ ನಡೆಸಿದ್ದಾನೆ. ಆದರೆ. ಆತ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದ.
ನಂತರ ಮುರುಗಾ ಮತ್ತು ಆತನ ಸಹಚರರನ್ನು 2013ರಲ್ಲಿ ಬಂಧಿಸಲಾಗಿದ್ದು, ಆತ ಜೈಲಿನಿಂದ ಹೊರಬಂದ ಮೇಲೆ ಅಪರಾಧ ಚಟುವಟಿಕೆಗಳಿಂದ ದೊರವಿದ್ದ. ಆತ ನಿರ್ಗಮಿಸಿದ ನಂತರ ಪಳನಿ ಹುಟ್ಟಿಕೊಂಡಿದ್ದ, ಮಂಜ ಹಾಗೂ ಮುರುಗಾ ಮೂರು ತಿಂಗಳ ಹಿಂದೆ ರಾಜೀಯಾಗಿದ್ದರೂ ನಂತರ ಮತ್ತೆ ಹಗೆತನ ಹುಟ್ಟಿಕೊಂಡಿತ್ತು ಎಂದು ಮೂಲಗಳು ಹೇಳುತ್ತವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT