ಟಿ.ಎಂ ಕೃಷ್ಣ 
ರಾಜ್ಯ

ದೇಶಕ್ಕೆ ಮೋದಿಗಿಂತ ಉತ್ತಮ ನಾಯಕನ ಅವಶ್ಯಕತೆಯಿದೆ: ಸಂಗೀತಗಾರ ಟಿ.ಎಂ.ಕೃಷ್ಣ

ಬಲ ಪಂಥೀಯರನ್ನು ತೀವ್ರವಾಗಿ ವಿರೋಧಿಸುವ ಮ್ಯಾಗ್ಸೆಸ್ಸೆ ಪ್ರಶಸ್ತಿ ಪುರಸ್ಕೃತ ಕರ್ನಾಟಕ ಶಾಸ್ತ್ರೀಯ ಸಂಗೀತಗಾರ ಟಿ.ಎಂ.ಕೃಷ್ಣ ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿಗಿಂತ ...

ಮೈಸೂರು: ಬಲ ಪಂಥೀಯರನ್ನು ತೀವ್ರವಾಗಿ ವಿರೋಧಿಸುವ ಮ್ಯಾಗ್ಸೆಸ್ಸೆ ಪ್ರಶಸ್ತಿ ಪುರಸ್ಕೃತ ಕರ್ನಾಟಕ ಶಾಸ್ತ್ರೀಯ ಸಂಗೀತಗಾರ ಟಿ.ಎಂ.ಕೃಷ್ಣ ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿಗಿಂತ ಉತ್ತಮ ನಾಯಕನ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.
ಮೈಸೂರಿನ ಸುತ್ತೂರು ಮಠದಲ್ಲಿ 2ನೇ ಬಾರಿಗೆ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟು ಮಾತನಾಡಿದ ಕೃಷ್ಣ ಅವರು, ಯಾರೂ ಪ್ರಧಾನಿ ಆಗಬೇಕೆಂಬ ಚಿಂತೆ ಬಿಡಬೇಕು. ಜನರು ಯಾವುದೋ ಪಕ್ಷ ಅಥವಾ ಸಿದ್ಧಾಂತ ಇರುವವರನ್ನು ಸಂಸದರನ್ನಾಗಿ ಕಳುಹಿಸದೇ ಉತ್ತರನ್ನು ಆಯ್ಕೆ ಮಾಡಬೇಕು. 
ಪ್ರಾದೇಶಿಕ ಪಕ್ಷಗಳಿಗೆ ಅಧಿಕಾರ ಸಿಕ್ಕರೆ ಎಲ್ಲಾ ಭಾಷಿಕರಿಗೂ ಶಕ್ತಿ ಬಂದಂತೆ ಆಗುತ್ತದೆ. ಈ ಎಲ್ಲಾ ಸಮಸ್ಯೆಗೆ ಪರಿಹಾರ ಸಿಗಬೇಕಾದರೆ ಪ್ರಾದೇಶಿಕ ಪಕ್ಷಗಳು ಮುನ್ನಲೆಗೆ ಬರಬೇಕು. ಈ ದೇಶಕ್ಕೆ ಇದು ಅನಿವಾರ್ಯ ಕೂಡ. ಇಲ್ಲಿ ನಾವು ಕೇವಲ ಸಂಸದರನ್ನು ಆಯ್ಕೆ ಮಾಡಿ ಕಳುಹಿಸುತ್ತೇವೆ, ಪ್ರಧಾನಿಯನ್ನಲ್ಲ, ಆದರೆ ಪಾಶ್ಚಿಮಾತ್ಯ ದೇಶಗಳಲ್ಲಿ ಅಧ್ಯಕ್ಷರನ್ನು ಜನರೇ ನೇರವಾಗಿ ಆಯ್ಕೆ ಮಾಡುತ್ತಾರೆ ಎಂದು ಹೇಳಿದ್ದಾರೆ.
ಮೋದಿ ಅವರ ಹಲವು ನಿಯಮಗಳ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದ ಅವರು, ದೇಶದಲ್ಲಿ ನಡೆದ ಹಲವು ಲಿಂಚಿಂಗ್ ಪ್ರಕರಣಗಳ ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ ಪತ್ರ ಬರೆದಿದ್ದೆ.ಆದರೆ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

SCROLL FOR NEXT