ಸಾಂದರ್ಭಿಕ ಚಿತ್ರ 
ರಾಜ್ಯ

ಕಂಬಳ ಪ್ರೇಮಿಗಳಿಗೆ ಸುಗ್ಗಿ ಸಮಯ; ಬಂಟ್ವಾಳದಲ್ಲಿ ಇಂದು ಕಂಬಳ ಆರಂಭ

ಕರಾವಳಿಯ ಜನಪ್ರಿಯ ಜಾನಪದ ಕ್ರೀಡೆ ಕಂಬಳ ಮತ್ತೆ ಬಂದಿದೆ. ತನ್ನ ಸಾಂಪ್ರದಾಯಿಕ ...

ಮಂಗಳೂರು: ಕರಾವಳಿಯ ಜನಪ್ರಿಯ ಜಾನಪದ ಕ್ರೀಡೆ ಕಂಬಳ ಮತ್ತೆ ಬಂದಿದೆ. ತನ್ನ ಸಾಂಪ್ರದಾಯಿಕ ವೈಭವಗಳಿಂದ ಬಂಟ್ವಾಳ ತಾಲ್ಲೂಕಿನ ಕಕ್ಯಪದವಿನಲ್ಲಿ ಶನಿವಾರದಿಂದ ಕಂಬಳ ಆರಂಭವಾಗುತ್ತಿದೆ.

ಪ್ರತಿವರ್ಷ ಉಡುಪಿ, ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ನಡೆಯುವ ಕಂಬಳಗಳಲ್ಲಿ ಸುಮಾರು 150 ಜೋಡಿ ಕೋಣಗಳು ಭಾಗವಹಿಸುತ್ತವೆ. ಈ ವರ್ಷ ಮಾರ್ಚ್ ವರೆಗೆ ಈ ಜಿಲ್ಲೆಗಳಲ್ಲಿ ಸುಮಾರು 18 ಕಂಬಳಗಳು ನಡೆಯಲಿವೆ.


ಕರಾವಳಿ ಜಿಲ್ಲೆಯಲ್ಲಿ ಹಿಂದಿನ ಕಾಲದಲ್ಲಿ ತಮ್ಮ ಹೊಲವನ್ನು ಉತ್ತಿ, ಬಿತ್ತಲು ಕೋಣ, ಎತ್ತುಗಳನ್ನು ಬಳಸುತ್ತಿದ್ದರು, ವಿನೋದ, ಮನರಂಜನೆಗಾಗಿ ಆರಂಭವಾದ ಕ್ರೀಡೆಯಿದು. ಆದರೆ ವಿನೋದದ ಹೆಸರಿನಲ್ಲಿ ಪ್ರಾಣಿಗಳಿಗೆ ಹಿಂಸೆ ನೀಡಲಾಗುತ್ತಿದೆ, ಕಂಬಳ ಕ್ರೀಡೆಯನ್ನು ನಿಷೇಧಿಸಬೇಕೆಂದು ಪ್ರಾಣಿದಯಾ ಸಂಘಟನೆಗಳು ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿ ವಿವಾದವೆದ್ದಿತ್ತು.

ಇವೆಲ್ಲವನ್ನೂ ಮೀರಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಪಿಲಿಕುಳ ಕಂಬಳ ಕ್ರೀಡೆಯಲ್ಲಿ ಭಾಗಿಯಾಗಿದೆ ಎಂದು ವಿಜಯ ವಿಕ್ರಮ ಜೋಡುಕೆರೆ ಕಂಬಳದ ಶಶಿಕುಮಾರ್ ರೈ ಹೇಳುತ್ತಾರೆ.


ಕಂಬಳಕ್ಕೆ ಸಿದ್ದತೆ ಭರದಿಂದ ಸಾಗುತ್ತಿದ್ದು ಸಾವಿರಾರು ಜನರು ಭಾಗವಹಿಸುವ ನಿರೀಕ್ಷೆಯಿದೆ. ಭೂಮಿಯನ್ನು ಗುರುತಿಸಲಾಗಿದ್ದು ವೇದಿಕೆ ಸಿದ್ದವಾಗಿದೆ. ಡ್ರೋನ್ ಕ್ಯಾಮರಾಗಳನ್ನು ಬಳಸಿ ನೇರ ವೀಕ್ಷಣೆಗೆ ಸಹಾಯ ಮಾಡುವುದು ಈ ಬಾರಿಯ ಕಂಬಳದ ವಿಶೇಷವಾಗಿದೆ.

ಕಂಬಳದಲ್ಲಿ ಭಾಗವಹಿಸುವ ಸ್ಪರ್ಧಿಗಳು ಕಳೆದೊಂದು ತಿಂಗಳಿನಿಂದ ತರಬೇತಿಯಲ್ಲಿ ತೊಡಗಿದ್ದಾರೆ. ಕೋಣಗಳಲ್ಲಿ ಹೆಚ್ಚು ಶಕ್ತಿ ವರ್ಧಿಸಲು ನೆಲದ ಮೇಲೆ ಅಭ್ಯಾಸ ನೀಡಲಾಗುತ್ತದೆ ಎಂದು ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಬಿ ಆರ್ ಶೆಟ್ಟಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT