ಅಜಯ್ ಮತ್ತು ಜ್ಯೋತಿ 
ರಾಜ್ಯ

ಕಲಬುರಗಿ: ವ್ಯಕ್ತಿ ನಾಪತ್ತೆ, ವಧು ದಕ್ಷಿಣಿ ಕಿರುಕುಳ ಎಂದು ದೂರು ನೀಡಿದ ಪೋಷಕರು

ವಧು ದಕ್ಷಿಣಿ ವಿಚಾರದಲ್ಲಿ ತಮ್ಮ ಮಗನನ್ನು ಸೊಸೆಯ ಸೋದರ ಅಪಹರಿಸಿದ್ದಾನೆ ಎಂದು ವ್ಯಕ್ತಿಯ ಪೋಷಕರು ...

ಕಲಬುರಗಿ: ವಧು ದಕ್ಷಿಣಿ ವಿಚಾರದಲ್ಲಿ ತಮ್ಮ ಮಗ ಮತ್ತು ಸೊಸೆಯನ್ನು ಆಕೆಯ ಪೋಷಕರ ಮನೆಯವರು ಅಪಹರಿಸಿದ್ದಾರೆ ಎಂದು ವ್ಯಕ್ತಿಯ ಪೋಷಕರು ದೂರು ನೀಡಿರುವ ಅಪರೂಪದ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಅಜಯ್(40 ವ) ನ ತಾಯಿ ಮಂಗಳಾ ಮಾಡಿರುವ ಆರೋಪ ಪ್ರಕಾರ, ಸುಳೆಪೇಟೆ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ತಮ್ಮ ಮಗ ಜ್ಯೋತಿ ಎಂಬಾಕೆಯನ್ನು ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದು ವಧು ದಕ್ಷಿಣೆಯಾಗಿ ಆಕೆಯ ಪೋಷಕರಿಗೆ 50 ಸಾವಿರ ರೂಪಾಯಿಯನ್ನು ನೀಡಿದ್ದೆವು. ಬುಡಕಟ್ಟು ಜನಾಂಗದ ಅಜಯ್ ನಲ್ಲಿ ವಧು ದಕ್ಷಿಣೆ ಕೊಡುವ ಸಂಪ್ರದಾಯವಿದೆ. ಮದುವೆಗೆ ಕೆಲ ದಿನಗಳ ಹಿಂದೆ ಜ್ಯೋತಿಯ ಕುಟುಂಬದವರು 2 ಲಕ್ಷ ರೂಪಾಯಿ ವಧು ದಕ್ಷಿಣೆ ನೀಡುವಂತೆ ಪೀಡಿಸಿದ್ದರು ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಕೆಲ ದಿನಗಳ ಹಿಂದೆ ಅಜಯ್ ಮತ್ತು ಜ್ಯೋತಿ ಇಬ್ಬರೂ ಕಾಣೆಯಾಗಿದ್ದರು. ಕಳೆದ ಬುಧವಾರ ಸುಳೇಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಅಜಯ್ ಪೋಷಕರು ದತ್ತಾ, ರವಿ ಮತ್ತು ಇತರ ಸಂಬಂಧಿಕರ ವಿರುದ್ಧ ಕೇಸು ದಾಖಲಿಸಲು ಯೋಚಿಸಿದ್ದರು. ಆದರೆ ಪೊಲೀಸರು ಇದುವರೆಗೆ ಕಾಣೆಯಾದ ಕೇಸು ಮಾತ್ರ ದಾಖಲಿಸಿಕೊಂಡಿದ್ದಾರೆ. ಅವರು ನಿಜಯವಾಗಿಯೂ ಅಪಹರಣವಾಗಿದ್ದರೆ ನಾವು ಕೇಸು ದಾಖಲಿಸುತ್ತೇವೆ ಎಂದು ಪೊಲೀಸರು ಹೇಳುತ್ತಾರೆ.

ಇದರಿಂದ ಸಮಾಧಾನವಾಗದ ಅಜಯ್ ಪೋಷಕರು ಪೊಲೀಸ್ ಸೂಪರಿಂಟೆಂಡೆಂಟ್ ಶಶಿ ಕುಮಾರ್ ಅವರನ್ನು ಸಂಪರ್ಕಿಸಿ ಸುಳೇಪೇಟೆ ಪೊಲೀಸರು ಅಪಹರಣ ಕೇಸನ್ನು ದಾಖಲಿಸಿ ತಮ್ಮ ಮಗನನ್ನು ಹುಡುಕಿಕೊಡುವಂತೆ ಪೊಲೀೂಸರಿಗೆ ಸೂಚನೆ ನೀಡಬೇಕು ಎಂದು ಕೇಳಿಕೊಂಡರು. ಪೊಲೀಸರು ಇದೀಗ ಅಜಯ್ ಮತ್ತು ಜ್ಯೋತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಅಜಯ್ ನ ಅತ್ತೆ-ಮಾವ ಹಾಗೂ ಇತರ ಸಂಬಂಧಿಕರನ್ನು ವಿಚಾರಣೆ ನಡೆಸಿದ್ದಾರೆ.

ಅಜಯ್ ಈ ಹಿಂದೆ ಯುವತಿಯೊಬ್ಬಳನ್ನು ಮದುವೆಯಾಗಿ ಅದರಿಂದ ಮಕ್ಕಳನ್ನು ಕೂಡ ಹೊಂದಿದ್ದಾನೆ. ಮೊದಲ ಪತ್ನಿ ಮತ್ತು ಮಕ್ಕಳು ಮಹಾರಾಷ್ಟ್ರದ ಪಲ್ತಾನ್ ಗ್ರಾಮದಲ್ಲಿ ನೆಲೆಸಿದ್ದಾರೆ. ಕೆಲ ವರ್ಷಗಳ ಹಿಂದೆ ಕೆಲಸಕ್ಕಾಗಿ ತನ್ನೂರಿಗೆ ಬಂದ ಅಜಯ್ ಜ್ಯೋತಿಯನ್ನು ವಿವಾಹವಾಗಿದ್ದನು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT