ಸಚಿವ ಆರ್ ವಿ ದೇಶಪಾಂಡೆ 
ರಾಜ್ಯ

ಬರಗಾಲ ಪೀಡಿತ ತಾಲ್ಲೂಕುಗಳ ಪರಿಹಾರ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ 220 ಕೋಟಿ ರೂ. ನೆರವು

ಬರಗಾಲಪೀಡಿತ ಎಂದು ಘೋಷಣೆಯಾಗಿರುವ ರಾಜ್ಯದ 110 ತಾಲ್ಲೂಕುಗಳಲ್ಲಿ ಪರಿಹಾರ ಕಾರ್ಯ ...

ಬೆಂಗಳೂರು: ಬರಗಾಲಪೀಡಿತ ಎಂದು ಘೋಷಣೆಯಾಗಿರುವ ರಾಜ್ಯದ 110 ತಾಲ್ಲೂಕುಗಳಲ್ಲಿ ಪರಿಹಾರ ಕಾರ್ಯ ಒದಗಿಸಲು ಅದರ ಮೇಲುಸ್ತುವಾರಿಗೆ ಸರ್ಕಾರ ನಾಲ್ಕು ಸಂಪುಟ ಉಪ ಸಮಿತಿಗಳನ್ನು ರಚಿಸಿದೆ.

ಪರಿಹಾರ ಕಾರ್ಯಕ್ಕೆ ರಾಜ್ಯ ಸರ್ಕಾರ 220 ಕೋಟಿ ರೂಪಾಯಿಗಳನ್ನು ಒದಗಿಸಿದೆ. ಪ್ರತಿ ಕಂದಾಯ ಜಿಲ್ಲೆಗೆ ಒಂದು ಸಂಪುಟ ಉಪ ಸಮಿತಿಯಂತೆ ನೇಮಿಸಲಾಗುತ್ತಿದ್ದು ಪರಿಹಾರ ಕಾರ್ಯದ ಸುಗಮಕ್ಕೆ ಪ್ರಧಾನ ಕಾರ್ಯದರ್ಶಿ ದರ್ಜೆಯ ಸಮನ್ವಯ ಅಧಿಕಾರಿಯನ್ನು ನೇಮಿಸಲಾಗುವುದು ಎಂದು ಕಂದಾಯ ಸಚಿವ ಆರ್ ವಿ ದೇಶಪಾಂಡೆ ತಿಳಿಸಿದರು.

ಕುಡಿಯುವ ನೀರು ಪೂರೈಕೆಗೆ ವಿಶೇಷ ಒತ್ತು ನೀಡಲಾಗುತ್ತಿದ್ದು ಪ್ರತಿ ಬರಗಾಲ ಪೀಡಿತ ತಾಲ್ಲೂಕಿಗೆ ಕುಡಿಯುವ ನೀರು ಒದಗಿಸಲು ತಲಾ 50 ಲಕ್ಷ ರೂಪಾಯಿಗಳನ್ನು ನೀಡಲಾಗುವುದು. ಜಾನುವಾರುಗಳಿಗೆ ಮೇವು ಒದಗಿಸಲು ವಿಶೇಷ ವ್ಯವಸ್ಥೆ ಮಾಡಲಾಗುವುದು ಮತ್ತು ಮೇವು ರಾಜ್ಯದಿಂದ ಹೊರಹೋಗದಂತೆ ನೋಡಿಕೊಳ್ಳಲು ಸರ್ಕಾರ ಮೇವು ರಫ್ತಿಗೆ ನಿಷೇಧ ಹೇರಿದೆ ಎಂದು ಕೂಡ ಸಚಿವ ದೇಶಪಾಂಡೆ ತಿಳಿಸಿದರು.
 
ಕಡತ ವಿಲೇವಾರಿ ಸಪ್ತಾಹದ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಪ್ತಾಹದಲ್ಲಿ ನಾವು 2.56 ಲಕ್ಷ ಕಡತಗಳನ್ನು ವಿಲೇವಾರಿ ಮಾಡಿದ್ದೇವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT