ಘಟನಾ ಸ್ಥಳಕ್ಕೆ ಎಚ್ ಡಿ ಕುಮಾರಸ್ವಾಮಿ ಭೇಟಿ 
ರಾಜ್ಯ

ಮಂಡ್ಯ ಬಸ್ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರು. ಪರಿಹಾರ ಘೋಷಿಸಿದ ಸಿಎಂ

ಮಂಡ್ಯ ಜಿಲ್ಲೆ ಪಾಂಡವಪುರದ ವಿಸಿ ನಾಲೆಗೆ ಖಾಸಗಿ ಬಸ್ ಉರುಳಿಬಿದ್ದ ಪರಿಣಾಮ 25 ಮಂದಿ ಮೃತಪಟ್ಟಿದ್ದು...

ಮಂಡ್ಯ: ಮಂಡ್ಯ ಜಿಲ್ಲೆ ಪಾಂಡವಪುರದ ವಿಸಿ ನಾಲೆಗೆ ಖಾಸಗಿ ಬಸ್ ಉರುಳಿಬಿದ್ದ ಪರಿಣಾಮ 25 ಮಂದಿ ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ತಲಾ 5 ಲಕ್ಷ ರುಪಾಯಿ ಪರಿಹಾರ ಘೋಷಿಸಿದ್ದಾರೆ
ಭೀಕರ ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸಿಎಂ ಕುಮಾರಸ್ವಾಮಿ ಅವರು ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಮಂಡ್ಯಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬಳಿಕ ಮೃತರ ಕುಟುಂಬಕ್ಕೆ ಸರ್ಕಾರದಿಂದ ತಲಾ 5 ಲಕ್ಷ ರುಪಾಯಿ ಪರಿಹಾರ ನೀಡುವುದಾಗಿ ತಿಳಿಸಿದರು.
ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದ ಸಿಎಂ, ಘಟನೆಯಿಂದ ಮನಸ್ಸಿಗೆ ತೀವ್ರ ದುಃಖವಾಗಿದ್ದು, ಮೃತರ ಆತ್ಮಕ್ಕೆ ಶಾಂತಿ ಹಾಗೂ ಕುಟುಂಬದವರಿಗೆ ದುಃಖ ಬರಿಸಲು ದೇವರು ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ. ಗ್ರಾಮೀಣ ಪ್ರದೇಶಕ್ಕೆ ಸರ್ಕಾರ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.
ಇಂದು ಬೆಳಗ್ಗೆ ಪಾಂಡವಪುರ ತಾಲೂಕಿನ ಕನಗನಮರಡಿ ಗ್ರಾಮದ ಬಳಿ ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಉರುಳಿತ್ತು. ಘಟನೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 25 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆ ಇದೆ.
ಸಿಎಂ ಭೇಟಿಯ ವೇಳೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಎಸ್.ಪುಟ್ಟರಾಜು, ಸಾರಿಗೆ ಸಚಿವರಾದ ಡಿ.ಸಿ.ತಮ್ಮಣ್ಣ, ಶಾಸಕಾದ ರವಿಂದ್ರ ಶ್ರೀಕಂಠಯ್ಯ ಹಾಜರಿದ್ದರು. ನಾಲೆಯಿಂದ ಬಸ್ ಅನ್ನು ಮೇಲಕ್ಕೆತ್ತಲಾಗಿದ್ದು, ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT