ದಯಾನಂದಸ್ವಾಮಿ 
ರಾಜ್ಯ

ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ಸ್ವಾಮೀಜಿ ವಿರುದ್ಧ ದೂರು ದಾಖಲು

ಸಿನಿಮಾದಲ್ಲಿ ಅವಕಾಶ ನೀಡುವ ಆಮಿಷವೊಡ್ಡಿ ಕಿರುತೆರೆ ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದ ಬೆಂಗಳೂರು ಹೊರವಲಯ ಹುಣಸಮಾರನಹಳ್ಳಿ ಸಂಸ್ಥಾನ ಮಠದ ಸ್ವಾಮೀಜಿ ದಯಾನಂದಸ್ವಾಮಿ....

ಮಂಗಳೂರು: ಸಿನಿಮಾದಲ್ಲಿ ಅವಕಾಶ ನೀಡುವ ಆಮಿಷವೊಡ್ಡಿ ಕಿರುತೆರೆ ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದ ಬೆಂಗಳೂರು ಹೊರವಲಯ ಹುಣಸಮಾರನಹಳ್ಳಿ ಸಂಸ್ಥಾನ ಮಠದ ಸ್ವಾಮೀಜಿ ದಯಾನಂದಸ್ವಾಮಿ ಅಲಿಯಾಸ್ ಗುರುನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಮಂಗಳೂರಿನಲ್ಲಿ ಎಫ್‍ಐಆರ್ ದಾಖಲಾಗಿದೆ. 
ಮಂಗಳೂರು ಕದ್ರಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ವಾಮೀಜಿ ಸೇರಿ ಐವರ ವಿರುದ್ಧ ತೀರ್ಥಹಳ್ಳಿ ಮೂಲದ ಕಿರುತೆರೆ ನಟಿ ದೂರು ಸಲ್ಲಿಸಿದ್ದಾರೆ. ಮದುವೆಯಾಗುವುದಾಗಿ ನಂಬಿಸಿದ್ದ ಸ್ವಾಮೀಜಿ ನಟಿಯ ಜತೆ ದೈಹಿಕ ಸಂಪರ್ಕವನ್ನು ಬೆಳೆಸಲು ಯತ್ನಿಸಿದ್ದ ಎನ್ನಲಾಗಿದೆ.
ತೀರ್ಥಹಳ್ಳಿಯ ನಟಿ ಕನ್ನಡ ಕಿರುತೆರೆ ಧಾರಾವಾಹಿ ಸೇರಿ ಕೆಲ ಬಿ ಗ್ರೇಡ್ ಸಿನಿಮಾಗಳಲ್ಲಿ ಸಹ ನಟಿಸಿದ್ದರು. ಆಕೆಗೆ ಚಲನಚಿತ್ರಗಳಲ್ಲಿ ಅವಕಾಶ ಕಲ್ಪಿಸಿಕೊಡುವುದಾಗಿ ನಂಬಿಸಿದ ಸ್ವಾಮೀಜಿ ಬೆಂಹಳೂರಿಗೆ ಕರೆದೊಯ್ಯುವ ಮುನ್ನ ಮಂಗಳೂರು ಹಂಪನಕಟ್ಟೆಯಲ್ಲಿರುವ ತಾಜ್ ಮಹಲ್ ಹೋಟೆಲ್ ಗೆ ಕರೆದಿದ್ದರು. ಬಳಿಕ ಆಕೆಯನ್ನು ಬೆಂಗಳೂರಿಗೆ ಕರೆತಂದಿದ್ದಾರೆ.
ಕಿರುತೆರೆ ನಟಿಯೊಡನೆ ಸ್ವಾಮೀಜಿ ರಾಸಲೀಲೆ ನಡೆಸಿದ್ದ ವೀಡಿಯ್ತೋ ದೃಶ್ಯ ಕಳೆದ ಅಕ್ಟೋಬರ್ ನಲ್ಲಿ ಮಾದ್ಯಮವೊಂದರಲ್ಲಿ ಪ್ರಸಾರವಾಗಿತ್ತು. 2014 ಜನವರಿ 4 ರಂದು ವೀಡಿಯೋ ಮಾಡಲಾದ ದೃಶ್ಯಗಳು ಮಾದ್ಯಮದಲ್ಲಿ ಹರಿದಾಡುತ್ತಿದ್ದಂತೆ ಸ್ವಾಮೀಜಿ ಕಣ್ಮರೆಯಾಗಿದ್ದರು. ಜನರು ಪ್ರತಿಭಟನೆಗಿಳಿದ ಬೆನ್ನಲ್ಲೇ ವೀಡಿಯೋದಲ್ಲಿದ್ದದ್ದು ನಾನಲ್ಲ ಎಂದು ನಟಿ ಸಹ ಸಮಜಾಯಿಷಿ ನೀಡಿದ್ದರು. ಆದರೆ ಮತ್ತೆ ಈಗ ಅದೇ ನಟಿ ಸ್ವಾಮೀಜಿ ವಿರುದ್ಧ ದೂರಿತ್ತಿದ್ದಾರೆ.
ಇದೀಗ ಕದ್ರಿ ಪೋಲೀಸರು ದೂರು ದಾಖಲಿಸಿಕೊಂಡಿದು ತನಿಖೆ ಕೈಗೊಂಡಿದ್ದಾರೆ.\

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ