ದಯಾನಂದಸ್ವಾಮಿ 
ರಾಜ್ಯ

ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ಸ್ವಾಮೀಜಿ ವಿರುದ್ಧ ದೂರು ದಾಖಲು

ಸಿನಿಮಾದಲ್ಲಿ ಅವಕಾಶ ನೀಡುವ ಆಮಿಷವೊಡ್ಡಿ ಕಿರುತೆರೆ ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದ ಬೆಂಗಳೂರು ಹೊರವಲಯ ಹುಣಸಮಾರನಹಳ್ಳಿ ಸಂಸ್ಥಾನ ಮಠದ ಸ್ವಾಮೀಜಿ ದಯಾನಂದಸ್ವಾಮಿ....

ಮಂಗಳೂರು: ಸಿನಿಮಾದಲ್ಲಿ ಅವಕಾಶ ನೀಡುವ ಆಮಿಷವೊಡ್ಡಿ ಕಿರುತೆರೆ ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದ ಬೆಂಗಳೂರು ಹೊರವಲಯ ಹುಣಸಮಾರನಹಳ್ಳಿ ಸಂಸ್ಥಾನ ಮಠದ ಸ್ವಾಮೀಜಿ ದಯಾನಂದಸ್ವಾಮಿ ಅಲಿಯಾಸ್ ಗುರುನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಮಂಗಳೂರಿನಲ್ಲಿ ಎಫ್‍ಐಆರ್ ದಾಖಲಾಗಿದೆ. 
ಮಂಗಳೂರು ಕದ್ರಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ವಾಮೀಜಿ ಸೇರಿ ಐವರ ವಿರುದ್ಧ ತೀರ್ಥಹಳ್ಳಿ ಮೂಲದ ಕಿರುತೆರೆ ನಟಿ ದೂರು ಸಲ್ಲಿಸಿದ್ದಾರೆ. ಮದುವೆಯಾಗುವುದಾಗಿ ನಂಬಿಸಿದ್ದ ಸ್ವಾಮೀಜಿ ನಟಿಯ ಜತೆ ದೈಹಿಕ ಸಂಪರ್ಕವನ್ನು ಬೆಳೆಸಲು ಯತ್ನಿಸಿದ್ದ ಎನ್ನಲಾಗಿದೆ.
ತೀರ್ಥಹಳ್ಳಿಯ ನಟಿ ಕನ್ನಡ ಕಿರುತೆರೆ ಧಾರಾವಾಹಿ ಸೇರಿ ಕೆಲ ಬಿ ಗ್ರೇಡ್ ಸಿನಿಮಾಗಳಲ್ಲಿ ಸಹ ನಟಿಸಿದ್ದರು. ಆಕೆಗೆ ಚಲನಚಿತ್ರಗಳಲ್ಲಿ ಅವಕಾಶ ಕಲ್ಪಿಸಿಕೊಡುವುದಾಗಿ ನಂಬಿಸಿದ ಸ್ವಾಮೀಜಿ ಬೆಂಹಳೂರಿಗೆ ಕರೆದೊಯ್ಯುವ ಮುನ್ನ ಮಂಗಳೂರು ಹಂಪನಕಟ್ಟೆಯಲ್ಲಿರುವ ತಾಜ್ ಮಹಲ್ ಹೋಟೆಲ್ ಗೆ ಕರೆದಿದ್ದರು. ಬಳಿಕ ಆಕೆಯನ್ನು ಬೆಂಗಳೂರಿಗೆ ಕರೆತಂದಿದ್ದಾರೆ.
ಕಿರುತೆರೆ ನಟಿಯೊಡನೆ ಸ್ವಾಮೀಜಿ ರಾಸಲೀಲೆ ನಡೆಸಿದ್ದ ವೀಡಿಯ್ತೋ ದೃಶ್ಯ ಕಳೆದ ಅಕ್ಟೋಬರ್ ನಲ್ಲಿ ಮಾದ್ಯಮವೊಂದರಲ್ಲಿ ಪ್ರಸಾರವಾಗಿತ್ತು. 2014 ಜನವರಿ 4 ರಂದು ವೀಡಿಯೋ ಮಾಡಲಾದ ದೃಶ್ಯಗಳು ಮಾದ್ಯಮದಲ್ಲಿ ಹರಿದಾಡುತ್ತಿದ್ದಂತೆ ಸ್ವಾಮೀಜಿ ಕಣ್ಮರೆಯಾಗಿದ್ದರು. ಜನರು ಪ್ರತಿಭಟನೆಗಿಳಿದ ಬೆನ್ನಲ್ಲೇ ವೀಡಿಯೋದಲ್ಲಿದ್ದದ್ದು ನಾನಲ್ಲ ಎಂದು ನಟಿ ಸಹ ಸಮಜಾಯಿಷಿ ನೀಡಿದ್ದರು. ಆದರೆ ಮತ್ತೆ ಈಗ ಅದೇ ನಟಿ ಸ್ವಾಮೀಜಿ ವಿರುದ್ಧ ದೂರಿತ್ತಿದ್ದಾರೆ.
ಇದೀಗ ಕದ್ರಿ ಪೋಲೀಸರು ದೂರು ದಾಖಲಿಸಿಕೊಂಡಿದು ತನಿಖೆ ಕೈಗೊಂಡಿದ್ದಾರೆ.\

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT