ಸಂಗ್ರಹ ಚಿತ್ರ 
ರಾಜ್ಯ

ಗೌರಿ ಹತ್ಯೆ ಪ್ರಕರಣ: ಚಾರ್ಜ್'ಶೀಟ್'ನಲ್ಲಿ ಸನಾತನ ಸಂಸ್ಥೆ ಹೆಸರು

ಹಿರಿಯ ಪತ್ರಕರ್ತೆ ಗೌರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯಕ್ಕೆ 9235 ಪುಟುಗಳನ್ನು ಒಳಗೊಂಡ ಹೆಚ್ಚುವರಿ ದೋಷಾರೋಪಣಾ ಪಟ್ಟಿಯನ್ನು ಶುಕ್ರವಾರ ಎಸ್ಐಟಿ ವಿಶೇಷ ನ್ಯಾಯಾಲಯಕ್ಕೆ...

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯಕ್ಕೆ 9235 ಪುಟುಗಳನ್ನು ಒಳಗೊಂಡ ಹೆಚ್ಚುವರಿ ದೋಷಾರೋಪಣಾ ಪಟ್ಟಿಯನ್ನು ಶುಕ್ರವಾರ ಎಸ್ಐಟಿ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಚಾರ್ಜ್ ಶೀಟ್ ನಲ್ಲಿ ಹಂತಕರಿಗೆ ಗೋವಾ ಮೂಲದ ಬಲಪಂಥೀಯ ವಿಚಾರಧಾರೆ ಪ್ರತಿಪಾದಿಸುವ ಸನಾತನ ಸಂಸ್ಥೆ ಜೊತೆಗೆ ನಂಟು ಇತ್ತು ಎಂದು ಹೇಳಿದೆ. 
ಕೊಲೆ ಸಂಚಿನಲ್ಲಿ ನೇರವಾಗಿ ಸತಾನ ಸಂಸ್ಥೆ ಪಾತ್ರವಹಿಸಿದೆಯೋ ಅಥವಾ ಇಲ್ಲವೋ ಎಂಬುದು ಇನ್ನೂ ಖಚಿತವಾಗಿಲ್ಲ. ಆದರೆ, ಆ ಸಂಸ್ಥೆ ಜೊತೆ ಕೊಲೆ ಪ್ರಕರಣದ ಪ್ರಮುಖ ಆರೋಪಿ ಮಹಾರಾಷ್ಟ್ರ ಮೂಲದ ಅಮೋಲ್ ಕಾಳೆ ಸೇರಿದಂತೆ 5 ಆರೋಪಿಗಳಿಗೆ ನಕಟ ನಂಟಿತ್ತು ಎಂಬುದಕ್ಕೆ ಪುರಾವೆಗಳಿವೆ ಎಂದು ಎಸ್ಐಟಿ ಹೇಳಿಕೊಂಡಿದೆ ಎಂದು ವರದಿಗಳು ತಿಳಿಸಿವೆ. 
ಹಂತಕರಿಗೆ ಗೌರಿ ಲಂಕೇಶ್ ಅವರೊಂದಿಗೆ ಯಾವುದೇ ರೀತಿಯ ವೈಯಕ್ತಿಕ ವೈಷಮ್ಯಗಳಿರಲಿಲ್ಲ. ಹಾಗಾದರೆ, ಯಾವ ಕಾರಣಕ್ಕೆ ಅವರನ್ನು ಹತ್ಯೆ ಮಾಡಲಾಯಿತು? ಇದಕ್ಕೆ ಕಾರಣ ಅವರು ನಂಬಿದ್ದ ಕೆಲ ಸಿದ್ಧಾಂತಗಳು. ಈ ಸಿದ್ಧಾಂತದ ಬಗ್ಗೆ ಅವರು ಬರೆಯುತ್ತಿದ್ದ ಬರವಣಿಗೆ ಹಾಗೂ ಆಡುತ್ತಿದ್ದ ಮಾತುಗಳು. ಸಿದ್ಧಾಂತ ಹಾಗೂ ಸಂಘಟನೆಯೇ ಇದಕ್ಕೆ ಕಾರಣವಿರಬಹುದು ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಎಸ್. ಬಾಲನ್ ಅವರು ಹೇಳಿದ್ದಾರೆ. 
ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ ಬಳಿಕ ಮತ್ತಷ್ಟು ತನಿಖೆಗಾಗಿ ಕಾಲಾವಕಾಶ ಬೇಕೆಂದು ಮನವಿ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT