ಅಂಬರೀಷ್ 
ರಾಜ್ಯ

ಅಂಬರೀಷ್ ವಿಧಿವಶ: ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ, ಬಿಗಿ ಬಂದೋಬಸ್ತ್

ವಿಕ್ರಮ್ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ಹೃದಯಾಘಾತದಿಂದ ವಿಧಿವಶರಾದ ರೆಬೆಲ್ ಸ್ಟಾರ್ ಅಂಬರೀಷ್ (66) ಅವರ ಪಾರ್ಥಿವ ಶರೀರವನ್ನು ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರು: ವಿಕ್ರಮ್ ಆಸ್ಪತ್ರೆಯಲ್ಲಿ ಕಳೆದ ರಾತ್ರಿ  ಹೃದಯಾಘಾತದಿಂದ  ವಿಧಿವಶರಾದ ರೆಬೆಲ್ ಸ್ಟಾರ್ ಅಂಬರೀಷ್ (66) ಅವರ ಪಾರ್ಥಿವ ಶರೀರವನ್ನು ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಚಾಮರಾಜಪೇಟೆಯ ಕಲಾವಿದರ ಸಂಘದಿಂದ ಕಂಠೀರವ ಕ್ರೀಡಾಂಗಣಕ್ಕೆ ಪಾರ್ಥಿವ ಶರೀರವನ್ನು ರವಾನಿಸಲಾಗಿದ್ದು, ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಇಡೀ ದಿನ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಕಂಠೀರವ ಕ್ರೀಡಾಂಗಣದಲ್ಲಿನ ಗೇಟ್ ನಂಬರ್ 1 ರ ಮೂಲಕ ವಿಐಪಿಗಳ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.  ವಿಐಪಿಗಳು ಈ ಗೇಟ್ ಮೂಲಕವೇ ಆಗಮಿಸಿ, ನಿರ್ಗಮಿಸಬಹುದಾಗಿದೆ. ಗೇಟ್ ನಂಬರ್ 2 ಮತ್ತು 3 ರಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.  ಗೇಟ್ ನಂಬರ್ 2 ಮತ್ತು 3ರಲ್ಲಿ ತೆರಳಿ 4 ಮತ್ತು 5 ರಲ್ಲಿ ನಿರ್ಗಮಿಸಬಹುದಾಗಿದೆ.

ಸ್ಟೇಡಿಯಂ ಸುತ್ತಮುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಭದ್ರತೆಗಾಗಿ ಸುಮಾರು 2 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ.ಮಂಡ್ಯದಿಂದ ಬರುವ ಅಭಿಮಾನಿಗಳಿಗಾಗಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ.

ಕಂಠೀರವ ಸ್ಟೇಡಿಯಂಗೆ ಬರುವವರ ವಾಹನಗಳ ಅನುಕೂಲಕ್ಕಾಗಿ  ಕಬ್ಬನ್ ಪಾರ್ಕ್, ಶಿವಾಜಿನಗರ ಬಸ್ ನಿಲ್ದಾಣ, ಸೆಂಟ್ ಜೋಸೆಪ್ ಕಾಲೇ ಜ್ ಮೈದಾನ, ಸರ್ಕಾರಿ ಕಲಾ, ಕಾಲೇಜ್, ಸೆಂಟ್ರಲ್ ಕಾಲೇಜ್ ಮೈದಾನದಲ್ಲಿ ಪಾರ್ಕಿಂಗ್  ವ್ಯವಸ್ಥೆ ಮಾಡಲಾಗಿದೆ.

ನಾಳೆ  ಕಂಠೀರವ ಸ್ಟುಡಿಯೋದಲ್ಲಿ ವರನಟ ಡಾ. ರಾಜ್ ಕುಮಾರ್ ಸ್ಮಾರಕ ಪಕ್ಕದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂಬರೀಷ್ ಅಂತಿಮ ಸಂಸ್ಕಾರ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!