ಅಂಬರೀಶ್ 
ರಾಜ್ಯ

ನಾಳೆ ಅಂಬರೀಶ್ ಅಂತ್ಯ ಸಂಸ್ಕಾರ: ಬೆಂಗಳೂರು ನಗರದಾದ್ಯಂತ ಬಿಗಿ ಬಂದೋಬಸ್ತ್

ಶನಿವಾರ ನಿಧನರಾದ ನಟ, ರಾಜಕಾರಣಿ ಅಂಬರೀಶ್ ಅವರ ಅಂತ್ಯ ಸಂಸ್ಕಾರ ಸೋಮವಾರ ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದೆ. ಇದಕ್ಕೆ ಮುನ್ನ ಕಂಠೀರವ ಸ್ಟೇಡಿಯಂ.....

ಬೆಂಗಳೂರು: ಶನಿವಾರ ನಿಧನರಾದ ನಟ, ರಾಜಕಾರಣಿ ಅಂಬರೀಶ್ ಅವರ ಅಂತ್ಯ ಸಂಸ್ಕಾರ ಸೋಮವಾರ ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದೆ. ಇದಕ್ಕೆ ಮುನ್ನ ಕಂಠೀರವ ಸ್ಟೇಡಿಯಂ ನಿಂದ ಪಾರ್ಥಿವ ಶರೀರದ ಮೆರವಣಿಗೆ ಸಾಗಲಿದೆ.ಈ ಸಂಬಂಧ ಬೆಂಗಳೂರು ನಗರಾದ್ಯಂತ ವಿಶೇಷ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಪೋಲೀಸ್ ಬಿಗಿ ಭದ್ರತೆ ಅಂಗವಾಗಿ 11,000 ಪೋಲೀಸ್ ಅಧಿಕಾರಿಗಳು, 4,000 ಸಂಚಾರಿ ಸಿಬ್ಬಂದಿ, 30 ಕೀಸ್ ಆರ್ ಪಿ ತುಕಡಿ, 34 ಸಿಎಆರ್ ತುಕಡಿ, 3 ಆರ್ ಎ ಎಫ್ ತುಕಡಿ, 5 ಆರ್ ಐ ವಿ ಮತ್ತು 15 ಡಿಸಿಪಿ ಗಳನ್ನು ನಿಯೋಜಿಸಲಾಗಿದೆ. ಅಲ್ಲದೆ ನಾಲ್ಕು ಹೆಚ್ಚುವರಿ ಪೋಲೀಸ್ ಆಯುಕ್ತರನ್ನು ಸಹ ನೇಮಿಸಲಾಗಿದೆ.
ಪಾರ್ಥಿವ ಶರೀರ ಸಾಗುವ ಮಾರ್ಗದಲ್ಲಿನ ರಸ್ತೆಗಳನ್ನು ವಿಭಾಗಗಳಾಗಿ ವಿಂಗಡಿಸಿದ್ದು ಪ್ರತಿ ವಿಭಾಗದ ಉಸ್ತುವಾರಿಯನ್ನು ಡಿಸಿಪಿ ನೇತೃತ್ವದ ತಂಡಕ್ಕೆ ವಹಿಸಲಾಗಿದೆ. ಅಂತಿಮ ಯಾತ್ರೆ ಸಾಗುವ ಮಾರ್ಗದಲ್ಲಿ ವಾಹನ ದಟ್ಟಣೆಯಾಗುವ ಸಂಭವವಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಪೋಲೀಸರು ಮನವಿ ಮಾಡಿದ್ದಾರೆ.
ಪಾರ್ಥಿವ ಶರೀರ ತೆರಳುವ ಮಾರ್ಗ ಹೀಗಿದೆ-
ಹಡ್ಸನ್ ರಸ್ತೆ, ಹಲಸೂರು ಗೇಟ್ ಪೋಲೀಸ್ ಠಾಣೆ, ಕೆಜಿ ರಸ್ತೆ, ಮೈಸೂರು ಬ್ಯಾಂಕ್ ವೃತ್ತ, ಸಿಐಡಿ ಜಂಕ್ಷನ್, ಬಸವೇಶ್ವರ ವೃತ್ತ, ವಿಂಡ್ಸರ್ ಮ್ಯಾನರ್, ಕಾವೇರಿ ಜಂಕ್ಷನ್, ಸ್ಯಾಂಕಿ ರಸ್ತೆ, ಮಾರಮ್ಮ ವೃತ್ತ, ಯಶವಂತಪುರ ಮೇಲ್ಸೇತುವೆ,. ಆರ್ ಎಂಸಿ ಯಾರ್ಡ್ ಪೋಲೀಸ್ ಠಾಣೆ, ಗೊರಗುಂಟೇಪಾಳ್ಯ ಜಂಕ್ಷನ್, ಎಸ್ ಟಿವಿಉ, ಕಂಠೀರವ ಸ್ಟುಡಿಯೋ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT