ಮಂಡ್ಯದಲ್ಲಿ ಅಭಿಮಾನಿಗಳಿಂದ ರೆಬೆಲ್ ಸ್ಟಾರ್ ಗೆ ಅಂತಿಮ ನಮನ 
ರಾಜ್ಯ

ಮಂಡ್ಯದಲ್ಲಿ ಅಭಿಮಾನಿಗಳಿಂದ ರೆಬೆಲ್ ಸ್ಟಾರ್ ಗೆ ಅಂತಿಮ ನಮನ

ನಿವಾರ ಸಂಜೆ ನಿಧನರಾದ ರೆಬೆಲ್ ಸ್ಟಾರ್ ಅಂಬರೀಶ್ ಪಾರ್ಥಿವ ಶರೀರವನ್ನು ಕಂಠೀರವ ಕ್ರೀಡಾಂಗಣದಿಂದ ಮಂಡ್ಯಕ್ಕೆ ತರಲಾಗಿದೆ.ಇಂದು ಸಂಜೆ 5 ರಿಂದ ನಾಳೆ ಬೆಳಗ್ಗೆ 6 ಗಂಟೆವರೆಗೆ ಮಂಡ್ಯದಲ್ಲಿ.....

ಮಂಡ್ಯ: ಶನಿವಾರ ಸಂಜೆ ನಿಧನರಾದ ರೆಬೆಲ್ ಸ್ಟಾರ್ ಅಂಬರೀಶ್ ಪಾರ್ಥಿವ ಶರೀರವನ್ನು ಕಂಠೀರವ ಕ್ರೀಡಾಂಗಣದಿಂದ ಮಂಡ್ಯಕ್ಕೆ ತರಲಾಗಿದೆ.ಇಂದು ಸಂಜೆ 5 ರಿಂದ ನಾಳೆ ಬೆಳಗ್ಗೆ 6 ಗಂಟೆವರೆಗೆ ಮಂಡ್ಯದಲ್ಲಿ ಅಂಬರೀಶ್ ಅಭಿಮಾನಿಗಳಿಗಾಗಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಸಧ್ಯ ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಅಂಬರೀಶ್ ಮೃತದೇಹವನ್ನು ಇರಿಸಲಾಗಿದ್ದು ಅಭಿಮಾನಿಗಳು, ಸಾರ್ವಜನಿಕರು ಸಾಗರೋಪಾದಿಯಲ್ಲಿ ಬಂದು ತಮ್ಮ ಪಾಲಿನ ಅಂಬಿ ಅಣ್ಣನಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.
ಅಂಬರೀಶ್ ಪಾರ್ಥಿವ ಶರೀರವನ್ನು ಠೀರವ ಕ್ರೀಡಾಂಗಣದಿಂದ ವಿಶೇಷ ಅಂಬುಲೆನ್ಸ್‌ ಮೂಲಕ ಝಿರೋ ಟ್ರಾಫಿಕ್‌ ವ್ಯವಸ್ಥೆ ಮೂಲಕ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ತರಲಾಗಿತ್ತು. ಅಲ್ಲಿಂದ ವಾಯುಪಡೆ ವಿಶೇಷ ಹೆಲಿಕಾಪ್ಟರ್ ನಲ್ಲಿ ಮಂಡ್ಯಕ್ಕೆತರಲಾಗಿದೆ.
ಮಂಡ್ಯದ ಸರ್ ಎಂ.ವಿ. ಕ್ರೀಡಾಂಗಣದ ಒಂದು ಪಾರ್ಶ್ವದಲ್ಲಿ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಕಲ್ಪಿಸಲಾಗಿದ್ದು ಮುಂಜಾಗ್ರತೆಯಾಗಿ ಪೋಲೀಸರು ವ್ಯಾಪಕ ಭದ್ರತೆ ಕೈಗೊಂಡಿದ್ದಾರೆ.
ನಾಳೆ (ಸೋಮವಾರ) ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಅಂತ್ಯ ಸಂಸ್ಕಾರ ನೆರವೇರಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT