ಅಂಬರೀಶ್ 
ರಾಜ್ಯ

ಅಭಿಮಾನಿಗಳ ಮನವಿಗೆ ಸ್ಪಂದಿಸಿ ಸೇನಾ ಹೆಲಿಕಾಫ್ಟರ್‌ನಲ್ಲಿ ಮಂಡ್ಯಗೆ ಅಂಬಿ ಪಾರ್ಥಿವ ಶರೀರ ರವಾನೆ!

ಮಂಡ್ಯದ ಗಂಡು ಅಂಬರೀಶ್ ಅವರನ್ನು ಕೊನೆಯ ಬಾರಿಗೆ ಕಾಣಬೇಕೆಂದು ಮಂಡ್ಯ ಜನತೆ ಕಣ್ಣೀರಿಟ್ಟಿದ್ದು ತವರಿಗೆ ಅಂಬಿ ಮೃತ ಶರೀರವನ್ನು ತರುವಂತೆ ಆಗ್ರಹಿಸಿದ್ದರು.

ಬೆಂಗಳೂರು: ಮಂಡ್ಯದ ಗಂಡು ಅಂಬರೀಶ್ ಅವರನ್ನು ಕೊನೆಯ ಬಾರಿಗೆ ಕಾಣಬೇಕೆಂದು ಮಂಡ್ಯ ಜನತೆ ಕಣ್ಣೀರಿಟ್ಟಿದ್ದು ತವರಿಗೆ ಅಂಬಿ ಮೃತ ಶರೀರವನ್ನು ತರುವಂತೆ ಆಗ್ರಹಿಸಿದ್ದರು. ಇದಕ್ಕೆ ಸ್ಪಂಧಿಸಿರುವ ರಾಜ್ಯ ಸರ್ಕಾರ ಸೇನಾ ಹೆಲಿಕಾಫ್ಟರ್‌ ಮೂಲಕ ಮಂಡ್ಯಗೆ ಪಾರ್ಥಿವ ಶರೀರವನ್ನು ರವಾನಿಸಲಿದೆ. 
ಏರ್ ಲಿಫ್ಟ್ ಮೂಲಕ ಮಂಡ್ಯಕ್ಕೆ ಅಂಬಿ ಪಾರ್ಥಿವ ಶರೀರ ಕೊಂಡೊಯ್ಯಲು ರಕ್ಷಣಾ ಇಲಾಖೆ ಅನುಮತಿ ನೀಡಿದೆ. ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸೇನಾ ಹೆಲಿಕಾಪ್ಟರ್ ಮೂಲಕ ಅಂಬಿ ಮೃತ ಶರೀರ ರವಾನೆಗೆ ಹೆಲಿಕಾಪ್ಟರ್ ನೀಡುವಂತೆ ರಕ್ಷಣಾ ಸಚಿವೆ ನಿರ್ಮಾಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದ್ದರು. 
ರಾಜ್ಯ ಸರ್ಕಾರಕ್ಕೆ ಸ್ಪಂಧಿಸಿರುವ ನಿರ್ಮಾಲಾ ಸೀತಾರಾಮನ್ ಅವರು ಏಲ್ ಲಿಫ್ಟ್ ಗೆ ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಡ್ಯಗೆ ಅಂಬಿ ಪಾರ್ಥಿವ ಶರೀರ ರವಾನಿಸಿ ಮಂಡ್ಯದ ವಿಶ್ವೇಶ್ವರಯ್ಯ ಸ್ಟೇಡಿಯಂ ನಲ್ಲಿ ಇಂದು ಸಂಜೆ 4 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆಯವರೆಗೆ ಸಾರ್ವಜನಿಕರಿಗಾಗಿ ಅಂತಿಮ ದರ್ಶನಕ್ಕೆ ಇಡಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT