ಎಂ.ಎಂ. ಕಲಬುರ್ಗಿ 
ರಾಜ್ಯ

ಎಂಎಂ ಕಲಬುರ್ಗಿ ಹತ್ಯೆ ತನಿಖೆ ವಿಳಂಬ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ತರಾಟೆ

ವಿಚಾರವಾದಿ ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣದ ತನಿಖೆಯನ್ನು ವಿಳಂಬವಾಗುತ್ತಿರುವುದಕ್ಕೆ ಸೋಮವಾರ ಸುಪ್ರೀಂ....

ನವದೆಹಲಿ: ವಿಚಾರವಾದಿ ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣದ ತನಿಖೆಯನ್ನು ವಿಳಂಬವಾಗುತ್ತಿರುವುದಕ್ಕೆ ಸೋಮವಾರ ಸುಪ್ರೀಂ ಕೋರ್ಟ್​ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.
ತನಿಖೆ ವಿಳಂಬ ಪ್ರಶ್ನಿಸಿ ಎಂ.ಎಂ. ಕಲಬುರ್ಗಿ ಅವರ ಕುಟುಂಬ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ರೊಹಿಂಟನ್ ನಾರಿಮನ್ ನೇತೃತ್ವದ ದ್ವಿಸದಸ್ಯ ಪೀಠ, ತನಿಖೆ ಮಾಡಲು ಸರ್ಕಾರಕ್ಕೆ ಇನ್ನು ಎಷ್ಟು ಸಮಯ ಬೇಕು? ತನಿಖೆಗೆ ವಿಳಂಬ ಆಗುತ್ತಿರುವುದಾದರೂ ಏಕೆ? ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ.
ಈ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿರುವ ಕೋರ್ಟ್,, ಇನ್ನು ಎರಡು ವಾರದೊಳಗೆ ತನಿಖೆಯ ಸಂಪೂರ್ಣ ವಿವರ ನೀಡುವಂತೆ ಸೂಚಿಸಿದೆ.
2015, ಆಗಸ್ಟ್ 30ರಂದು ಬೆಳಗ್ಗೆ ಧಾರವಾಡದ ಕಲ್ಯಾಣ ನಗರದಲ್ಲಿರುವ ಎಂ.ಎಂ.ಕಲಬುರ್ಗಿ ಅವರ ಮನೆಗೆ ಬಂದಿದ್ದ ಅಪರಿಚಿತರು, ಬೆಲ್ ಮಾಡಿದ್ದರು. ಕಲಬುರ್ಗಿ ಅವರು ಬಾಗಿಲು ತೆರೆದಾಗ ಎರಡು ಸುತ್ತು ಗುಂಡು ಹಾರಿಸಿ ಅವರನ್ನು ಹತ್ಯೆ ಮಾಡಿದ್ದರು.
ರಾಜ್ಯ ಸರ್ಕಾರ ಕಲಬುರ್ಗಿ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಿದ್ದು, ಮೂರು ವರ್ಷಗಳು ಕಳೆದರೂ ಯಾವೊಬ್ಬ ಆರೋಪಿಯನ್ನು ಬಂಧಿಸಲು ಸಾಧ್ಯವಾಗಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT