ಕಂಠೀರವ ಸ್ಟುಡಿಯೋದಲ್ಲಿ ಅಂಬಿ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೋಂಡಿದ್ದ ಜನ 
ರಾಜ್ಯ

ಮಂಡ್ಯ: 3 ಲಕ್ಷ ಮಂದಿಯಿಂದ ಅಂಬಿ ಅಂತಿಮ ದರ್ಶನ

ಶನಿವಾರ ನಿಧನರಾದ ಮಂಡ್ಯದ ಗಂಡು ಅಂಬರೀಷ್ ಅವರಿಗೆ ತವರು ಜಿಲ್ಲೆ ಮಂಡ್ಯದಲ್ಲಿ ಸಾರ್ವಜನಿಕ ದರ್ಶನಕ್ಕೆ ಸರ್.ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ...

ಬೆಂಗಳೂರು: ಶನಿವಾರ ನಿಧನರಾದ ಮಂಡ್ಯದ ಗಂಡು ಅಂಬರೀಷ್ ಅವರಿಗೆ ತವರು ಜಿಲ್ಲೆ ಮಂಡ್ಯದಲ್ಲಿ ಸಾರ್ವಜನಿಕ ದರ್ಶನಕ್ಕೆ ಸರ್.ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಇಡಲಾಗಿತ್ತು, ಈ ವೇಳೆ ಲಕ್ಷಾಂತರ ಮಂದಿ ಅಭಿಮಾನಿಗಳು ದರ್ಶನ ಪಡೆದರು.
ಭಾನುವಾರ ಬೆಳಗ್ಗಿನವರೆಗೂ ಅಂಬರೀಶ್ ದರ್ಶನ ಪಡೆಯಲು ಜನಸಾಗರ ಹರಿದು ಬರುತ್ತಲೇ ಇತ್ತು.  ಹೀಗಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಅಂಬರೀಷ್ ಕುಟುಂಬಸ್ಥರು ಬೆಳಗ್ಗೆ 10 ಗಂಟೆವರೆಗೂ  ಕ್ರೀಡಾಂಗಣದಲ್ಲಿ  ದರ್ಶನಕ್ಕೆ ಇಡಲಾಗಿತ್ತು.
ಮೈಸೂರು, ಚಾಮರಾಜನಗರ, ಹಾಸನ, ರಾಮನಗರ ಮತ್ತು ಹಲವು ಜಿಲ್ಲೆಗಳಿಂದ ಅಪಾರ ಪ್ರಮಾಣದಲ್ಲಿ ಅಭಿಮಾನಿಗಳು ದರ್ಶನ ಪಡೆದರು. ಸಾವಿರಾರು ವಾಹನಗಳು ಬಂದಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮೂರು ದಶಕಗಳ ಕಾಲ ಕನ್ನಡ ಸಿನಿಮಾ ಪ್ರೇಕ್ಷಕರನ್ನು ರಂಜಿಸಿದ ಅಂಬರೀಷ್ ಜನ ಮಾನಸದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ, ಮೃತ ನಟ ಪಾರ್ಥೀವ ಶರೀರದ ಮುಂದೆ ಹಲವು ಅಭಿಮಾನಿಗಳು ಸೆಲ್ಪೀ ತೆಗೆದುಕೊಂಡರು.
ಹರಿದು ಬರುತ್ತಿದ್ದ ಜನಸಾಗರವನ್ನು ಸುಧಾರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.ಅಭಿಮಾನಿಗಳು ಬ್ಯಾರಿಕೇಡ್ ಮುರಿದು ನುಗ್ಗುತ್ತಿದ್ದ ಕಾರಣ ನೆರೆಹೊರೆಯ ಜಿಲ್ಲೆಗಳಿಂದ ಪೊಲೀಸರನ್ನು ಕರೆತರಲಾಗಿತ್ತು,.
ಗಣ್ಯರಿಗಾಗಿ ಮೀಸಲಿದ್ದ ಗೇಟ್ ನಲ್ಲಿ ಅಭಿಮಾನಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್ ಪುಟ್ಟರಾಜು ಕರೆತಂದರು. ಅಂಬರೀಷ್ ಪರ ಘೋಷಣೆಗಳನ್ನು ಕೂಗುತ್ತಾ ದರ್ಶನ ಪಡೆಯಲು ಸಾಲಲ್ಲಿ ನಿಂತಿದ್ದರು.  ಜಿಲ್ಲಾಡಳಿತ ಶಾಂತಿ ಕಾಪಾಡುವಂತೆ ಮನವಿ ಮಾಡುತ್ತಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT