ಅಂಬರೀಶ್ ಅಂತ್ಯಕ್ರಿಯೆ, ಜಯಪ್ರದಾ, ದರ್ಶನ್ 
ರಾಜ್ಯ

ಕರ್ನಾಟಕ 'ಸಿಂಗಮ್' ಡಿಸಿಪಿ ಅಣ್ಣಾಮಲೈ ವಿರುದ್ಧ ನಟಿ ಜಯಪ್ರದಾ, ನಟ ದರ್ಶನ್ ಕೆಂಡಾಮಂಡಲ!

ಮಂಡ್ಯದ ಗಂಡು ಅಂಬರೀಶ್ ಅಂತ್ಯ ಸಂಸ್ಕಾರದ ವೇಳೆ ನಟಿ, ಮಾಜಿ ಸಂಸದೆ ಜಯಪ್ರದಾ ಅವರು ಡಿಸಿಪಿ ಅಣ್ಣಾಮಲೈ ಕೆಂಡಾಮಂಡಲರಾಗಿದ್ದು ಚಾಲೆಂಜಿಕ್ ಸ್ಟಾರ್...

ಬೆಂಗಳೂರು: ಮಂಡ್ಯದ ಗಂಡು ಅಂಬರೀಶ್ ಅಂತ್ಯ ಸಂಸ್ಕಾರದ ವೇಳೆ ನಟಿ, ಮಾಜಿ ಸಂಸದೆ ಜಯಪ್ರದಾ ಅವರು ಡಿಸಿಪಿ ಅಣ್ಣಾಮಲೈ ಕೆಂಡಾಮಂಡಲರಾಗಿದ್ದು ಚಾಲೆಂಜಿಕ್ ಸ್ಟಾರ್ ದರ್ಶನ್ ಸಹ ತಮ್ಮ ಆಕ್ರೋಶವನ್ನು ಹೊರಹಾಕಿದ್ದ ಪ್ರಸಂಗ ನಡೆದಿದೆ. 
ಅಂಬರೀಶ್ ವಿಧಿವಶರಾದ ಕ್ಷಣದಿಂದ ಅವರ ಅಂತ್ಯಕ್ರಿಯೆವರೆಗೂ ಸರ್ಕಾರ ಅಚ್ಚುಕಟ್ಟಾಗಿ ಪರಿಸ್ಥಿತಿ ನಿಭಾಯಿಸಿತು. ಆದರೆ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆ ವೇಳೆ ಸುಮಾರು 15 ಸಾವಿರದಷ್ಟು ಅಭಿಮಾನಿಗಳು ನೆರೆದಿದ್ದರು. ಇದರಿಂದಾಗಿ ಸ್ಥಳದಲ್ಲಿ ಒಂದಷ್ಟು ಗದ್ದಲ, ಗೊಂದಲ ಶುರುವಾಗಿತ್ತು. 
ಸಾವಿರಾರು ಜನರು ಒಮ್ಮೆಲೇ ಜಾಗ ಖಾಲಿ ಮಾಡುವಾಗ ನೂಕು ನುಗ್ಗಲು ಇರುವುದು ಸಹಜ. ಈ ವೇಳೆ ಜಯಪ್ರದಾ ಅವರು ತಮ್ಮ ಕಾರಿನಿಂದ ಹೊರಬಂದಿದ್ದಾರೆ. ಆಗ ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಅವರು ಜಯಪ್ರದಾಗೆ ಕಾರಿನಲ್ಲೇ ಕೂರುವಂತೆ ಕೇಳಿಕೊಂಡಿದ್ದಾರೆ. ಇದರಿಂದ ಕೋಪಗೊಂಡ ಜಯಪ್ರದಾ, ಮಾಜಿ ಸಂಸದೆಯಾಗಿರುವ ತನ್ನತ್ತ ಒಬ್ಬ ಡಿಸಿಪಿ ಕೈ ಮಾಡಿ ತಿಳಿಸುವುದು ಎಷ್ಟು ಸರಿ ಎಂದು ವ್ಯಗ್ರಗೊಂಡಿದ್ದಾರೆ. ನಂತರ ಅಣ್ಣಾಮಲೈ ಮೇಲೆ ಜಯಪ್ರದಾ ಕೂಗಾಡಿದ್ದರು. 
ಇದೇ ವೇಳೆ ನಟ ದರ್ಶನ್ ಸಹ ಪೊಲೀಸರ ಮೇಲೆ ಕೋಪಗೊಂಡ ಘಟನೆಯೂ ನಡೆಯಿತು. ಪೊಲೀಸರು ಸರಿಯಾಗಿ ಟ್ರಾಫಿಕ್ ನಿಭಾಯಿಸುತ್ತಿಲ್ಲ, ವಾಹನ ಸಂಚಾರಕ್ಕೆ ಸರಿಯಾಗಿ ದಾರಿ ಮಾಡಿಕೊಡುತ್ತಿಲ್ಲ ಎಂದು ಕೂಗಾಡಿದರು. 
ಇನ್ನು ಅಂಬರೀಶ್ ಅವರ ದರ್ಶನ ಮಾಡಿ ಅಂತಿಮ ನಮನ ಸಲ್ಲಿಸಲು ಕೆಲ ನಟರಿಗೆ ಅವಕಾಶ ಸಿಗಲಿಲ್ಲ. ಇದರಿಂದ ಕೋಪಗೊಂಡ ಗೋಲ್ಡನ್ ಸ್ಟಾರ್ ಗಣೇಶ್, ಜೈ ಜಗದೀಶ್, ರಂಗಾಯಣ ರಘು, ರವಿಶಂಕರ್ ಅವರು ಪೊಲೀಸರೊಂದಿಗೆ ವಾಗ್ವಾದಕ್ಕಿಳಿದ ಘಟನೆಯೂ ನಡೆಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ