ಣಬ್ ಮುಖರ್ಜಿ 
ರಾಜ್ಯ

ನಾಳೆ ಬೆಂಗಳೂರಿಗೆ ಪ್ರಣಬ್: ಜಾಫರ್ ಶರೀಫ್ ಮನೆಗೆ ಮಾಜಿ ರಾಷ್ಟ್ರಪತಿ ಭೇಟಿ

ಭಾನುವಾರ ನಿಧನರಾದ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ರೈಲ್ವೆ ಸಚಿವ ಸಿ.ಕೆ. ಜಾಫರ್ ಶರೀಫ್ ನಿವಾಸಕ್ಕೆ ನಾಳೆ (ಬುಧವಾರ) ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭೇಟಿ ನೀಡಲಿದ್ದಾರೆ

ಬೆಂಗಳುರು: ಭಾನುವಾರ ನಿಧನರಾದ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ರೈಲ್ವೆ ಸಚಿವ ಸಿ.ಕೆ. ಜಾಫರ್ ಶರೀಫ್ ನಿವಾಸಕ್ಕೆ ನಾಳೆ (ಬುಧವಾರ) ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭೇಟಿ ನೀಡಲಿದ್ದಾರೆ. ಅಗಲಿದ ನಾಯಕನ ಕುಟುಂಬದವರಿಗೆ ಪ್ರಣಬ್ ಸಾಂತ್ವನ ಹೇಳಲಿದ್ದಾರೆ.
ಭಾರತದ ಮೊದಲ ಶಿಕ್ಷಣ ಸಚಿವರಾಗಿದ್ದ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ "ಇಂಡಿಯಾ ವಿನ್ಸ್ ಫ್ರೀಡಮ್" ಆಂಗ್ಲ ಕೃತಿಯ ಉರ್ದು ಅನುವಾದ ಮಾಡಿದ್ದ ಜಾಫರ್ ಶರೀಫ್ ಅವರ ಪುಸ್ತಕ ಬಿಡುಗಡೆ ಸಮಾರಂಭ ನ. 28ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಬೇಕಿದ್ದು ಇದಕ್ಕೆ ಪ್ರಣಬ್ ಅವರನ್ನು ಆಹ್ವಾನಿಸಲಾಗಿತ್ತು.
ಈ ಕಾರ್ಯಕ್ರಮವು ಪೂರ್ವನಿಗದಿಯಂತೆ ಬುಧವಾರ ನಡೆಯಲಿದ್ದು ಕಾರ್ಯಕ್ರಮಕ್ಕೆ ಆಗಮಿಸಲಿರುವ ಪ್ರಣಬ್ ಜಾಫರ್ ಶರೀಫ್ ಮನೆಗೆ ತೆರಳಿ ಅವರ ಕುಟುಂಬದವರಲ್ಲಿ ಸಾಂತ್ವನ ಹೇಳಲಿದ್ದಾರೆ.
ಮಾಜಿ ರಾಷ್ಟ್ರಪತಿ ಶರೀಫ್ ನಿವಾಸಕ್ಕೆ ಭೇಟಿ ನೀಡುವ ವೇಳೆ ಮುಖ್ಯಮಂತ್ರಿ ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಸೇರಿ ಸರ್ಕಾರದ ಪ್ರಮುಖ ನಾಯಕರು ಉಪಸ್ಥಿತರಿರಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT