ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ 
ರಾಜ್ಯ

ಸಕಲೇಶಪುರ: ಸತತ 36 ಗಂಟೆಗಳ ಕಾರ್ಯಾಚರಣೆ ನಂತರ ಆನೆ ರಕ್ಷಿಸಿದ ಸಿಬ್ಬಂದಿ

ತಾಲ್ಲೂಕಿನ ಕಡಗರವಳ್ಳಿ ಗ್ರಾಮದಲ್ಲಿ ಸತತ 36 ಗಂಟೆಗಳ ಸುದೀರ್ಘ ಕಾರ್ಯಾಚರಣೆ ನಂತರ 27 ....

ಸಕಲೇಶಪುರ: ತಾಲ್ಲೂಕಿನ ಕಡಗರವಳ್ಳಿ ಗ್ರಾಮದಲ್ಲಿ ಸತತ 36 ಗಂಟೆಗಳ ಸುದೀರ್ಘ ಕಾರ್ಯಾಚರಣೆ ನಂತರ 27 ವರ್ಷದ ಹೆಣ್ಣು ಆನೆಯನ್ನು ರಕ್ಷಿಸಲಾಗಿದೆ. ಆನೆ ಕಂದಕಕ್ಕೆ ಬಿದ್ದು ಮೇಲೆ ಏಳಲಾಗದೆ ಪರಿತಾಪಪಡುತ್ತಿತ್ತು.

ನಡೆದದ್ದೇನು?: ಎರಡು ದಿನಗಳ ಹಿಂದೆ ಆನೆ ಆಹಾರ ಹುಡುಕಿಕೊಂಡು ತನ್ನ ಆರು ತಿಂಗಳ ಮರಿಯೊಂದಿಗೆ ಕಡಗರವಳ್ಳಿ ಗ್ರಾಮಕ್ಕೆ ಹೋಗಿತ್ತು. ಈ ಸಂದರ್ಭದಲ್ಲಿ ಕಾಲು ಜಾರಿ ಹೂಳು ತುಂಬಿದ ಕಂದಕಕ್ಕೆ ಬಿದ್ದಿತು. ಆನೆಯ ಎದುರಿನ ಕಾಲಿಗೆ ಅದಾಗಲೇ ಗಾಯವಾಗಿತ್ತು. ಇದರಿಂದ ಕಂದಕದಿಂದ ಏಳುವುದು ಕೂಡ ಕಷ್ಟವಾಗಿತ್ತು.

ಕಳೆದ ಸೋಮವಾರ ಬೆಳಗ್ಗೆ ಗ್ರಾಮಸ್ಥರು ಆನೆ ಕಂದಕಕ್ಕೆ ಬಿದ್ದ ವಿಚಾರವನ್ನು ಅರಣ್ಯ ಇಲಾಖೆ ಸಿಬ್ಬಂದಿಗೆ ತಿಳಿಸಿದ್ದರು. ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಭೂಮಿಯಲ್ಲಿ ತಿರುಗುವ ಯಂತ್ರಕ್ಕೆ ಹಗ್ಗ ಕಟ್ಟಿ ಆನೆಯನ್ನು ಮೇಲೆತ್ತಲು ಪ್ರಯತ್ನಿಸಿದರು. ಆದರೆ ಪ್ರಯೋಜನವಾಗಲಿಲ್ಲ. ವಾತಾವರಣ ಕೈಕೊಟ್ಟಿತ್ತು. ಕೊನೆಗೆ ದುಬಾರೆ ಆನೆ ಶಿಬಿರದಿಂದ ಎರಡು ಆನೆಗಳನ್ನು ಕರೆತಂದು ಆನೆಯನ್ನು ಮೇಲೆತ್ತಲು ನಡೆಸಿದ ಕಾರ್ಯಾಚರಣೆ ನೆರವಿಗೆ ಬಂದಿತು.

ಆನೆ ಮತ್ತು ಮರಿಯನ್ನು ನಂತರ ಶಿವಮೊಗ್ಗದ ಸಕ್ರೆಬೈಲು ಶಿಬಿರಕ್ಕೆ ವರ್ಗಾಯಿಸಲಾಯಿತು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT