ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ 
ರಾಜ್ಯ

ಸಕಲೇಶಪುರ: ಸತತ 36 ಗಂಟೆಗಳ ಕಾರ್ಯಾಚರಣೆ ನಂತರ ಆನೆ ರಕ್ಷಿಸಿದ ಸಿಬ್ಬಂದಿ

ತಾಲ್ಲೂಕಿನ ಕಡಗರವಳ್ಳಿ ಗ್ರಾಮದಲ್ಲಿ ಸತತ 36 ಗಂಟೆಗಳ ಸುದೀರ್ಘ ಕಾರ್ಯಾಚರಣೆ ನಂತರ 27 ....

ಸಕಲೇಶಪುರ: ತಾಲ್ಲೂಕಿನ ಕಡಗರವಳ್ಳಿ ಗ್ರಾಮದಲ್ಲಿ ಸತತ 36 ಗಂಟೆಗಳ ಸುದೀರ್ಘ ಕಾರ್ಯಾಚರಣೆ ನಂತರ 27 ವರ್ಷದ ಹೆಣ್ಣು ಆನೆಯನ್ನು ರಕ್ಷಿಸಲಾಗಿದೆ. ಆನೆ ಕಂದಕಕ್ಕೆ ಬಿದ್ದು ಮೇಲೆ ಏಳಲಾಗದೆ ಪರಿತಾಪಪಡುತ್ತಿತ್ತು.

ನಡೆದದ್ದೇನು?: ಎರಡು ದಿನಗಳ ಹಿಂದೆ ಆನೆ ಆಹಾರ ಹುಡುಕಿಕೊಂಡು ತನ್ನ ಆರು ತಿಂಗಳ ಮರಿಯೊಂದಿಗೆ ಕಡಗರವಳ್ಳಿ ಗ್ರಾಮಕ್ಕೆ ಹೋಗಿತ್ತು. ಈ ಸಂದರ್ಭದಲ್ಲಿ ಕಾಲು ಜಾರಿ ಹೂಳು ತುಂಬಿದ ಕಂದಕಕ್ಕೆ ಬಿದ್ದಿತು. ಆನೆಯ ಎದುರಿನ ಕಾಲಿಗೆ ಅದಾಗಲೇ ಗಾಯವಾಗಿತ್ತು. ಇದರಿಂದ ಕಂದಕದಿಂದ ಏಳುವುದು ಕೂಡ ಕಷ್ಟವಾಗಿತ್ತು.

ಕಳೆದ ಸೋಮವಾರ ಬೆಳಗ್ಗೆ ಗ್ರಾಮಸ್ಥರು ಆನೆ ಕಂದಕಕ್ಕೆ ಬಿದ್ದ ವಿಚಾರವನ್ನು ಅರಣ್ಯ ಇಲಾಖೆ ಸಿಬ್ಬಂದಿಗೆ ತಿಳಿಸಿದ್ದರು. ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಭೂಮಿಯಲ್ಲಿ ತಿರುಗುವ ಯಂತ್ರಕ್ಕೆ ಹಗ್ಗ ಕಟ್ಟಿ ಆನೆಯನ್ನು ಮೇಲೆತ್ತಲು ಪ್ರಯತ್ನಿಸಿದರು. ಆದರೆ ಪ್ರಯೋಜನವಾಗಲಿಲ್ಲ. ವಾತಾವರಣ ಕೈಕೊಟ್ಟಿತ್ತು. ಕೊನೆಗೆ ದುಬಾರೆ ಆನೆ ಶಿಬಿರದಿಂದ ಎರಡು ಆನೆಗಳನ್ನು ಕರೆತಂದು ಆನೆಯನ್ನು ಮೇಲೆತ್ತಲು ನಡೆಸಿದ ಕಾರ್ಯಾಚರಣೆ ನೆರವಿಗೆ ಬಂದಿತು.

ಆನೆ ಮತ್ತು ಮರಿಯನ್ನು ನಂತರ ಶಿವಮೊಗ್ಗದ ಸಕ್ರೆಬೈಲು ಶಿಬಿರಕ್ಕೆ ವರ್ಗಾಯಿಸಲಾಯಿತು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT